ಬೆಂಗಳೂರು | ಟ್ರಾಫಿಕ್ ಸಿಗ್ನಲ್‌ಗಳ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ; ಇಬ್ಬರ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಟ್ರಾಫಿಕ್ ಸಿಗ್ನಲ್‌ಗಳ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬನಶಂಕರಿ ಮೂಲದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಬಂಧಿತರು. ಇವರಿಂದ ಒಟ್ಟು ₹5 ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳು ಸಿಗ್ನಲ್‌ಗಳಲ್ಲಿ ಹಾಕಿದ್ದ ಬ್ಯಾಟರಿ ಕಳ್ಳತನ ಮಾಡಿ ಅದನ್ನು ಗುಜರಿಗೆ ಮಾರಾಟ ಮಾಡುತ್ತಿದ್ದರು. ಬಂದ ಹಣದಲ್ಲಿ ಇಬ್ಬರು ಸೇರಿ ಮೋಜು ಮಸ್ತಿ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

Advertisements

ನಗರದ ಹಲವು ಜಂಕ್ಷನ್‌ಗಳ ಸಿಗ್ನಲ್‌ಗಳಿಗೆ ಹಾಕಿದ್ದ ಬ್ಯಾಟರಿಗಳು ಕಳೆದ ಏಳು ತಿಂಗಳಿನಿಂದ ಕಳ್ಳತನವಾಗುತ್ತಿದ್ದವು. ಈ ಘಟನೆಗೆ ಸಂಬಂಧಿಸಿದಂತೆ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಹರಿಶ್ಚಂದ್ರ ಘಾಟ್ | ಮೃತದೇಹ ಸುಟ್ಟ ವಾಸನೆಯಿಂದ ನಿತ್ಯ ನರಕ; ಸತ್ತು ಬದುಕುತ್ತಿರುವ ಜನ!

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಬರೋಬ್ಬರಿ 120 ಸಿಸಿಟಿವಿ ಪರಿಶೀಲನೆ ಮಾಡಿದಾಗ ಆರೋಪಿಗಳ ಚಲನವಲನ ಗೊತ್ತಾಗಿದೆ. ನಂತರ ಆರೋಪಿಗಳ ಜಾಡು ಹಿಡಿದ ಪೊಲೀಸರು ಅವರನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ಕೋಲಾರ | 9 ತಿಂಗಳಿನಿಂದ ವೇತನ ಸಿಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಹೊರಗುತ್ತಿಗೆ ಕಾರ್ಮಿಕರು

ಕೋಲಾರ ನಗರಸಭೆಯಲ್ಲಿ ಕೆಲಸ ಮಾಡುವ 74 ಮಂದಿ ಹೊರಗುತ್ತಿಗೆ ಕಾರ್ಮಿಕರಿಗೆ ಕಳೆದ...

ಬೀದರ್‌ | ವಚನ ಸಾಹಿತ್ಯ, ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠದ ಕೊಡುಗೆ ಅನನ್ಯ : ಪುರಷೋತ್ತಮ ಬಿಳಿಮಲೆ

ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X