ಬೆಂಗಳೂರು | ಗಗನಕ್ಕೇರಿದ ತರಕಾರಿ ಬೆಲೆ; ಬೀನ್ಸ್‌ ಕೆಜಿಗೆ ₹220

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಏರಿಕೆಯಾಗುತ್ತಿದ್ದು, ಜನರು ರೋಸಿ ಹೋಗಿದ್ದಾರೆ. ಕೆಜಿಗೆ 20 ರೂಪಾಯಿ ಇದ್ದ ತರಕಾರಿಗಳು ಈಗ ಕೆಜಿಗೆ 80 ರೂಪಾಯಿಗೆ ಸಿಗುತ್ತಿವೆ.

ಮಳೆಯಿಲ್ಲದೇ, ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಾಗಿತ್ತು. ಮಳೆ ಕೊರತೆಯಿಂದ ಹೆಚ್ಚಿನ ಪ್ರಮಾಣದಲ್ಲಿ‌ ಫಸಲು ಬಂದಿಲ್ಲ. ಈ ಹಿನ್ನೆಲೆ, ಮಾರುಕಟ್ಟೆಗೆ ತರಕಾರಿಗಳು ಬರುತ್ತಿಲ್ಲ. ಹೀಗಾಗಿ, ತರಕಾರಿಗಳ ಬೆಲೆ ಗಗನಕ್ಕೇರಿದೆ.

ಸದ್ಯ, ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿದ್ದು, ಬೆಳೆ ಹಾನಿಯಾಗುತ್ತಿದೆ. ಹೀಗಾಗಿ, ಮಾರುಕಟ್ಟೆಗೆ ಕಡಿಮೆ ಪ್ರಮಾಣದ ತರಕಾರಿ ಬರುತ್ತಿದ್ದು, ತರಕಾರಿಗಳಿಗೆ ಹೆಚ್ಚಿನ ಬೆಲೆ ನಿಗದಿ ಮಾಡಿ ಮಾರಾಟ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸರಿಯಾಗಿ ಮಳೆಯಾಗದಿದ್ದರೆ, ತರಕಾರಿಗಳ‌ ಬೆಲೆ‌ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

Advertisements

ಇನ್ನು ಮಾರುಕಟ್ಟೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ತರಕಾರಿಗಳ ದರ ಏರಿಕೆಯಾಗಿದೆ. ಆದರೆ, ಬಡವಾಣೆಗಳ, ಮನೆಗಳ ಬಳಿಯ ತರಕಾರಿ ಅಂಗಡಿಗಳು, ತಳ್ಳುವ ಗಾಡಿ ವ್ಯಾಪಾರಸ್ಥರು, ಹಾಪ್ ಕಾಮ್ಸ್​​​​ಗಗಳಲ್ಲಿ ತರಕಾರಿ ಬೆಲೆ ವಿಪರೀತ ಏರಿಕೆಯಾಗಿದೆ.

ಇಂದಿನ ತರಕಾರಿ ಬೆಲೆ

ಬಟಾಣಿ:140-180, ಬೆಂಡೆಕಾಯಿ:60-66, ಟೊಮೆಟೋ:30-60, ಆಲೂಗೆಡ್ಡೆ:30-56, ಹಾಗಲಕಾಯಿ:60- 82, ಗೋರಿಕಾಯಿ:50-89, ಹಸಿ ಮೆಣಸಿನಕಾಯಿ:80-106, ಬಿಟ್ರೋಟ್: 40-46, ಈರುಳ್ಳಿ:20-39, ಕ್ಯಾರೇಟ್: 80-82, ಬೀನ್ಸ್:220-220, ನವಿಲುಕೋಸು:60-102, ಬದನೆಕಾಯಿ:60-70, ದಪ್ಪ ಮೆಣಸಿನಕಾಯಿ:40- 65, ಸೋರೆಕಾಯಿ:40-50, ಬೆಳ್ಳುಳ್ಳಿ: 300-338, ಶುಂಠಿ:180-195, ಪಡುವಲಕಾಯಿ: 30-60 ರೂಪಾಯಿ ಇದೆ.

ವಿಜಯನಗರ ಸೇರಿದಂತೆ ನಗರದ ವಿವಿಧೆಡೆ ಒಂದು ಕಟ್ಟು ನಾಟಿ ಕೊತ್ತಂಬರಿ ಸೊಪ್ಪು ಬರೋಬ್ಬರಿ ₹100 ಮಾರಾಟವಾಗುತ್ತಿದೆ. ಇನ್ನು ಕಳೆದ ವಾರ ಬೀನ್ಸ್ ಬೆಲೆ ಬರೋಬ್ಬರಿ ₹200 ಇತ್ತು. ಇದೀಗ ₹220 ಆಗಿದೆ. ಸೌತೆಕಾಯಿ ಹಾಗೂ ಲಿಂಬೆಹಣ್ಣಿನ ಬೆಲೆ ಕೂಡ ಜಾಸ್ತಿಯಾಗಿದೆ. ಬೀನ್ಸ್ ಬಟಾಣಿ ಬೆಲೆ ಗ್ರಾಹಕರ ಕೈ ತಪ್ಪಿ ಹೋಗಿದ್ದು, ಬೆಲೆ ಕೇಳಿದ ಗ್ರಾಹಕರು ಖಾಲಿ ಚೀಲ ಹಿಡಿದುಕೊಂಡು ವಾಪಸ್ ಮನೆಗೆ ಹೋಗುವಂತಾಗಿದೆ. ಈಗಾಗಲೇ ಬೆಲೆ ಏರಿಕೆಯಿಂದಾಗಿ ಕಂಗೆಟ್ಟಿರುವ ಜನರಿಗೆ ತರಕಾರಿ ಖರೀದಿ ಕಷ್ಟವಾಗಿದೆ. ಬೇಡಿಕೆಗೆ ತಕ್ಕಂತ ತರಕಾರಿ ಇಲ್ಲದೇ ಇರುವುದು ಬೆಲೆ ಏರಿಕೆಗೆ ಕಾರಣವಾಗಿದೆ.

ಈ ಸುದ್ದಿ ಓದಿದ್ದೀರಾ? ಬೇಸಿಗೆ ವಿಶೇಷ | ಬೆಂಗಳೂರು-ಕಲಬುರಗಿ ಎಕ್ಸ್ ಪ್ರೆಸ್ ರೈಲು ರದ್ದು

ದರ ಏರಿಕೆಯಾದ ಹಿನ್ನೆಲೆ, ಕೊಳ್ಳುವವರ ಸಂಖ್ಯೆ ಕಡಿಮೆಯಾಗಿದೆ. ಕೆಜಿ ಖರೀದಿ ಮಾಡುತ್ತಿದ್ದ ಜನರು ಅರ್ಧ ಕೆಜಿ ಖರೀದಿ ಮಾಡುತ್ತಾರೆ. ಇದರಿಂದ ವ್ಯಾಪಾರ ಕುಂಠಿತವಾಗಿದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X