ಬೆಂಗಳೂರು | ಮೂರು ವರ್ಷದ ಮಗುವಿನ ಮೇಲೆ ಹಲ್ಲೆ ನಡೆಸಿದ ಮಲತಂದೆ ಮತ್ತು ತಾಯಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳ ಮೇಲೆ ತಾಯಿ ನಡೆಸುತ್ತಿರುವ ದೌರ್ಜನ್ಯಗಳು ವರದಿಯಾಗುತ್ತಿವೆ. ಇದೀಗ, ಅಂತಹದ್ದೇ ಮತ್ತೊಂದು ಪ್ರಕರಣವೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವನ್ನು ತಾಯಿ ಕೂಡಿಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಗರದ ಹೊರವಲಯದ ಆನೇಕಲ್ ತಾಲೂಕಿನ ಹೆಬ್ಬಗೋಡಿಯಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ ಮೂಲದ ಮಲತಂದೆ ಮಂಜುನಾಥ್ ಹಾಗೂ ತಾಯಿ ಮಂಜುಳ ಇವರಿಬ್ಬರು ಮಗುವಿನ ಮೇಲೆ ಹಲ್ಲೆ ನಡೆಸಿದ್ದಾರೆ.

ಕಳೆದೊಂದು ವರ್ಷದಿಂದ ಮಗುವಿನ ಮೇಲೆ ಮಲತಂದೆ ಕ್ರೌರ್ಯ ಮೆರೆದಿದ್ದು, ಇದಕ್ಕೆ ತಾಯಿಯೂ ಬೆಂಬಲ ನೀಡಿದ್ದಾಳೆ. ಮಗುವಿನ ಕೈ ಮತ್ತು ಕುತ್ತಿಗೆ ಭಾಗದಲ್ಲಿ ಹೀಟರ್ ಮತ್ತು ಸಿಗರೇಟ್‌ನಿಂದ ಮಲತಂದೆ ಸುಟ್ಟಿದ್ದಾನೆ. ಮಗುವಿನ ತಲೆ ಮತ್ತು ಹಣೆ ಭಾಗದಲ್ಲೂ ಹಲ್ಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

Advertisements

ದಿಶಾ ಎಂಬ ಹೆಸರಿನ ಸುಮಾರು ನಾಲ್ಕು ವರ್ಷ ವಯಸ್ಸಿನ ಹೆಣ್ಣು ಮಗುವಿನ ಮೇಲೆ ಈ ಇಬ್ಬರು ಕ್ರೌರ್ಯ ಮೆರೆದಿದ್ದಾರೆ.

ಮಾರ್ಚ್‌ 15ರಂದು ಸಾಯಂಕಾಲ ಕುಡಿದ ಮತ್ತಿನಲ್ಲಿ ಮನೆಗೆ ಬಂದ ಮಲತಂದೆ ಮಗುವಿನ ಮೇಲೆ ಕೇಬಲ್ ವೈರ್‌ನಿಂದ ಹಲ್ಲೆ ಮಾಡಿದ್ದಾನೆ. ಈ ವೇಳೆ, ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ. ಮಗು ತಂದೆ-ತಾಯಿ ನೀಡುತ್ತಿರುವ ಹಿಂಸೆಯ ಬಗ್ಗೆ ಸ್ಥಳೀಯರಿಗೆ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿದೇಶಿ ಕರೆನ್ಸಿಗಾಗಿ ಮಹಿಳೆ ಕೊಲೆ; ಇಬ್ಬರ ಬಂಧನ

ಮಲತಂದೆ ಮಂಜುನಾಥ್ ಮತ್ತು ತಾಯಿ ಮಂಜುಳಾಗೆ ಸ್ಥಳೀಯರು ಥಳಿಸಿ, ಬಳಿಕ ಹೆಬ್ಬಗೋಡಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X