ಬೆಂಗಳೂರು | ಮಹಿಳೆಗೆ ಬೆದರಿಸಿ ಹಣ ಸುಲಿಗೆ; ನಾಲ್ವರು ಪೊಲೀಸರ ಅಮಾನತು

Date:

Advertisements

ಇತ್ತೀಚಿಗೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿರುವುದಾಗಿ ಬೆದರಿಸಿ ಮಹಿಳೆಯೊಬ್ಬರಿಂದ ₹8,000 ಹಣ ಸುಲಿಗೆ ಮಾಡಿದ ಆರೋಪದ ಮೇರೆಗೆ ಜೀವನ್ ಭೀಮಾ (ಜೆಬಿ) ನಗರ ಸಂಚಾರ ಠಾಣೆಯ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ. ನಗರ ಪೊಲೀಸ್ ಆಯುಕ್ತ ದಯಾನಂದ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಜೀವನ್ ಭೀಮಾ ನಗರ ಸಂಚಾರ ಠಾಣೆ ಇನ್ಸ್ಪೆಕ್ಟರ್ ವೆಂಕಟಾಚಲಪತಿ, ಹೆಡ್ ಕಾನ್ಸ್ಟೇಬಲ್ಗಳಾದ ಗಿರೀಶ್, ಹುಚ್ಚು ಸಾಬ್ ಮತ್ತು ಕಾನ್ಸ್ ಟೇಬಲ್ ಬಸಪ್ಪ ಇವರನ್ನು ಅಮಾನತುಗೊಳಿಸಲಾಗಿದೆ.

ಕಳೆದ ಶನಿವಾರ ಇಸ್ರೋ ಜಂಕ್ಷನ್ಬಳಿ ಡ್ರಂಕ್ ಅಂಡ್ ಡ್ರೈವ್ ತಪಾಸಣೆ ವೇಳೆ ಕೃತ್ಯ ನಡೆದಿತ್ತು. ಬಗ್ಗೆ ಆಯುಕ್ತ ದಯಾನಂದ್ ಅವರಿಗೆಎಕ್ಸ್‌’ ತಾಣದಲ್ಲಿ ಸಂತ್ರಸ್ತೆ ತಂದೆ ದೂರು ನೀಡಿದ್ದರು.

Advertisements

ಬಗ್ಗೆ ಇಲಾಖಾ ಮಟ್ಟದ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಪೂರ್ವ ವಿಭಾಗ (ಸಂಚಾರ) ಡಿಸಿಪಿ ಕುಲದೀಪ್ ಆರ್.ಜೈನ್ ರವರಿಗೆ ಆಯುಕ್ತರು ಸೂಚನೆ ನೀಡಿದ್ದರು. ಡಿಸಿಪಿ ನೀಡಿದ ವರದಿ ಮೇರೆಗೆ ಕರ್ತವ್ಯಲೋಪವೆಸಗಿದ ಕಾರಣ ಇನ್ಸ್ಪೆಕ್ಟರ್ಹಾಗೂ ಮೂವರು ಸಿಬ್ಬಂದಿಯನ್ನು ಪೊಲೀಸ್ ಆಯುಕ್ತ ದಯಾನಂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಏನಿದು ಘಟನೆ?

ಇಸ್ರೋ ಜಂಕ್ಷನ್‌ನಲ್ಲಿ ಕಳೆದ ಶನಿವಾರ ರಾತ್ರಿಯ ಸಮಯದಲ್ಲಿ ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಆ ವೇಳೆ ಮಣಿಪಾಲ್ ಆಸ್ಪತ್ರೆ ಕಡೆಯಿಂದ ಬಂದ ಮಹಿಳೆಯೊಬ್ಬರನ್ನು ಅಡ್ಡಗಟ್ಟಿದ ಜೆ.ಬಿ.ನಗರ ಸಂಚಾರ ಠಾಣೆ ಪೊಲೀಸರು ತಪಾಸಣೆ ನಡೆಸಿದ್ದರು.

ಈ ವೇಳೆ, ಆಲ್ಕೋಮೀಟರ್‌ ಮೂಲಕ ಡ್ರಂಕ್ ಅಂಡ್ ಡ್ರೈವ್ ತಪಾಸಣೆಗೊಳಪಡಿಸಿದಾಗ ಮಹಿಳೆ ಮದ್ಯ ಸೇವಿಸದೆ ಇದ್ದರೂ ₹15 ಸಾವಿರ ನೀಡುವಂತೆ ಪೊಲೀಸರು ಬೇಡಿಕೆ ಇಟ್ಟಿದ್ದರು. ಕೊನೆಗೆ ಮಹಿಳೆಯನ್ನು ಬೆದರಿಸಿ ಈ ನಾಲ್ವರು ಸಂಚಾರ ಪೊಲೀಸರು ಮಹಿಳೆಯಿಂದ ₹8,000 ಹಣವನ್ನು ಗೂಗಲ್ ಪೇ ಮೂಲಕ ಪಡೆದು ಆಕೆಯನ್ನು ಪೊಲೀಸರು ಕಳುಹಿಸಿದ್ದರು ಎಂದು ಆರೋಪಿಸಲಾಗಿತ್ತು.

ಬಗ್ಗೆ ಮಹಿಳೆಯ ತಂದೆ ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ, “ಸಂಚಾರ ಪೊಲೀಸರು ನನ್ನ ಮಗಳಿಂದ ಹಣ ಸುಲಿಗೆ ಮಾಡಿದ್ದಾರೆ” ಎಂದು ಪೋಸ್ಟ್ ಮಾಡಿದ್ದರು. ಎಕ್ಸ್‌ನಲ್ಲಿ ಪೊಲೀಸ್ ಆಯುಕ್ತರನ್ನು ಟ್ಯಾಗ್ ಮಾಡಿ ದೂರು ನೀಡಿದ್ದರು. ಹಿನ್ನೆಲೆ, ತನಿಖೆಗೆ ಆದೇಶಿಸಲಾಗಿತ್ತು. ಆನಂತರ ಕುರಿತು ತನಿಖೆ ನಡೆಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಚಿನ್ನಾಭರಣಕ್ಕಾಗಿ ಮಹಿಳೆಯ ಬರ್ಬರ ಕೊಲೆ; ಆರೋಪಿಯ ಬಂಧನ

ಪೂರ್ವ ಸಂಚಾರ ಡಿಸಿಪಿ ಕುಲದೀಪ ಕುಮಾರ್ ಜೈನ್ ಇಲಾಖೆ ಮಟ್ಟದ ತನಿಖೆ ನಡೆಸಿ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಸದ್ಯ ಪೊಲೀಸರು ತಪ್ಪಿತಸ್ಥರು ಎಂದು ಸಾಬೀತಾಗಿದ್ದು, ನಾಲ್ವರನ್ನು ಅಮಾನತು ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X