ಬೆಂಗಳೂರು | ಟ್ಯಾಂಕರ್ ನೀರಿಗೆ ದರ ನಿಗದಿ ಮಾಡಿದ ಜಿಲ್ಲಾಡಳಿತ

Date:

Advertisements

ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಜನರು ಕುಡಿಯುವ ನೀರಿಗಾಗಿ ಕೂಡ ರಾಜಧಾನಿಯಲ್ಲಿ ಪರಿತಪಿಸುವಂತಾಗಿದೆ. ಇದನ್ನೇ ಬಂಡವಾಳ ಮಾಡಿಕೊಂಡಿದ್ದ ವಾಟರ್‌ ಟ್ಯಾಂಕರ್‌ ಮಾಲೀಕರು ಜನರಿಂದ ದುಪ್ಪಟ್ಟು ಹಣ ಪೀಕಲು ಆರಂಭಿಸಿದ್ದರು. ಸದ್ಯ ಇದಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಬೆಂಗಳೂರು ಜಿಲ್ಲಾಡಳಿತ, ದರ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇದನ್ನು ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಇತ್ತೀಚೆಗೆ ಸಭೆ ನಡೆಸಿದ್ದರು. ಟ್ಯಾಂಕರ್ ಮಾಫಿಯಾ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದರು. ಅಲ್ಲದೇ, ಮಾರ್ಚ್‌ 7ರೊಳಗೆ ಟ್ಯಾಂಕರ್ ಮಾಲೀಕರು ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದರು.

ಇದೀಗ, ದುಬಾರಿ ಬೆಲೆಗೆ ಖಾಸಗಿ ಟ್ಯಾಂಕರ್‌ಗಳ ಹಾವಳಿಗೆ ಬ್ರೇಕ್‌ ಹಾಕಲು, ಟ್ಯಾಂಕರ್ ಮಾಲೀಕರ ಜತೆಗೆ ಜಿಲ್ಲಾಡಳಿತ ಸಭೆ ನಡೆಸಿದ್ದು, ದರ ನಿಗದಿ ಮಾಡಿ ಆದೇಶ ಹೊರಡಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಪ್ರತಿ 15 ನಿಮಿಷಕ್ಕೊಂದು ರೈಲು ಸಂಚಾರ

ಟ್ಯಾಂಕರ್ ನೀರಿನ ದರ

  • 5 ಕಿ.ಮೀ ವ್ಯಾಪ್ತಿಯ ಒಳಗಡೆಗೆ 6 ಸಾವಿರ ಲೀಟರ್ ನೀರು ಸರಬರಾಜು ಮಾಡುವ ಟ್ಯಾಂಕರ್​ಗೆ ₹600
  • 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 6 ಸಾವಿರ ಲೀಟರ್ ನೀರು ಸರಬರಾಜು ಮಾಡುವ ಟ್ಯಾಂಕರ್‌ಗೆ ₹750
  • 8 ಸಾವಿರ ಲೀಟರ್ ಟ್ಯಾಂಕರ್​ಗೆ ₹700 ದರ ನಿಗದಿ‌‌ ಮಾಡಲಾಗಿದ್ದು, ಇದು 5 ಕಿ.ಮೀ ಒಳಗೆ ಅನ್ವಯವಾಗಲಿದೆ.
  • 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ 8 ಸಾವಿರ ಲೀಟರ್ ನೀರು ಸರಬರಾಜು ಮಾಡುವ ಟ್ಯಾಂಕರ್‌ಗೆ ₹850
  • 5 ಕಿಲೋ ಮೀಟರ್ ವ್ಯಾಪ್ತಿಗೆ 1,200 ಲೀಟರ್ ಟ್ಯಾಂಕರ್​​ಗೆ ₹1000.
  • 1200 ಲೀಟರ್ ಟ್ಯಾಂಕರ್​​​ಗೆ ₹1200 ದರ ನಿಗದಿ ಮಾಡಲಾಗಿದ್ದು, ಇದು 10 ಕಿಲೋ ಮೀಟರ್ ವ್ಯಾಪ್ತಿಗೆ ಅನ್ವಯವಾಗಲಿದೆ.
  • ಜಿಎಸ್​​ಟಿ ಸೇರಿಸಿದಂತೆ ಇದೀಗ ಅಧಿಕಾರಿಗಳು ಈ ದರ ನಿಗದಿ ಮಾಡಿದ್ದಾರೆ. ತಿಂಗಳ ಬಾಡಿಗೆ ಒಪ್ಪಿಕೊಳ್ಳುವವರಿಗೆ 5 ಕಿಲೋ ಮೀಟರ್​​​ಗೆ ₹510 ನಿಗದಿಪಡಲಾಗಿದೆ. 10 ಕಿಲೋ ಮೀಟರ್ ಹೋದರೆ ₹650 ದರ ನಿಗದಿಯಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X