ಬೆಂಗಳೂರು | ವಿಡಿಯೋ ಕಾಲ್ ಮಾಡಿ ಪತ್ನಿಗೆ ಹೆದರಿಸಲು ಹೋಗಿ ಪತಿ ಸಾವು

Date:

Advertisements

ಪತ್ನಿಗೆ ವಿಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುತ್ತಿರುವಾಗಲೇ ಪತಿ ಮೃತಪಟ್ಟ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಅಮಿತ್ ಕುಮಾರ್(28) ಮೃತ ದುರ್ದೈವಿ. ಇವರು ಮೂಲತಃ ಬಿಹಾರದವರು. ಕಳೆದ 10 ವರ್ಷಗಳ ಹಿಂದೆ ಬೆಂಗಳೂರಿಗೆ ಕೆಲಸ ಹುಡುಕಿಕೊಂಡು ಬಂದಿದ್ದರು. ಕಳೆದ ಒಂದು ವರ್ಷದ ಹಿಂದೆ ಜಿಮ್ ಸಮೀಪ ಓರ್ವ ಯುವತಿಯನ್ನು ಪ್ರೀತಿ ಮಾಡಿದ್ದರು. ಪೋಷಕರ ವಿರೋಧದ ನಡುವೆಯೇ ವಿವಾಹವಾಗಿದ್ದರು.

ಮೃತ ಅಮಿತ್ ಪತ್ನಿ ನರ್ಸಿಂಗ್ ಸೇರಿದ್ದಳು. ಈ ಬಳಿಕ ಪತಿಗೆ ಹೆಚ್ಚಿನ ಸಮಯ ನೀಡುತ್ತಿರಲಿಲ್ಲ. ಹೆಚ್ಚಾಗಿ ಫ್ರೇಂಡ್ಸ್‌ ಜತೆಗೆ ಫೋನ್‌ನಲ್ಲಿರುತ್ತಿದ್ದಳು ಎನ್ನಲಾಗಿದೆ. ಈ ವಿಚಾರವಾಗಿ ದಂಪತಿ ಮಧ್ಯೆ ಪದೇಪದೆ ಜಗಳವಾಗುತ್ತಿತ್ತು. ಹೀಗಾಗಿ, ಪತ್ನಿ ಪತಿಯನ್ನು ತೊರೆದು ಬೇರೆಡೆ ವಾಸವಿದ್ದಳು. ಅಮಿತ್ ಹೆಂಡತಿಗೆ ವಾಪಾಸ್ ಮನೆಗೆ ಬರುವಂತೆ ಪದೇಪದೆ ಕರೆ ಮಾಡಿ ಮನವಿ ಮಾಡುತ್ತಿದ್ದರು ಎನ್ನಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಡೆಂಘೀ ನಿಯಂತ್ರಣಕ್ಕೆ ಈಗಾಗಲೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ: ಸುರಳ್ಕರ್ ವಿಕಾಸ್ ಕಿಶೋರ್

ಮೇ 15ರಂದು ಕೂಡ ಪತ್ನಿಗೆ ಕರೆ ಮಾಡಿದ್ದ ಅಮಿತ್ ಮನೆಗೆ ವಾಪಾಸ್ ಬರುವಂತೆ ಮನವಿ ಮಾಡಿದ್ದಾನೆ. ವಿಡಿಯೋ ಕಾಲ್​ನಲ್ಲಿರುವಾಗಲೇ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಸಾವನ್ನಪ್ಪಿದ್ದಾರೆ. ಬಾಗಲಗುಂಟೆಯ ಪತಿ ಮನೆಯಲ್ಲಿ ನೇಣುಬಿಗಿದಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆ ಆಗಿದೆ.

ಸದ್ಯ ಮರಣೋತ್ತರ ಪರೀಕ್ಷೆಗೆ ಅಮಿತ್ ಕುಮಾರ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X