ಬೆಂಗಳೂರು | ಐಪಿಎಲ್‌ ಪಂದ್ಯ: ರಾತ್ರಿ 11.30ರವರೆಗೆ ಮೆಟ್ರೋ ರೈಲು ಸಂಚಾರ ವಿಸ್ತರಣೆ

Date:

Advertisements

ಟಾಟಾ ಐಪಿಎಲ್‌ ಟಿ-20 ಕ್ರಿಕೆಟ್ ಪಂದ್ಯ ಬೆಂಗಳೂರಿನಲ್ಲಿ ನಡೆಯಲಿದ್ದು, ಈ ಪಂದ್ಯ ವೀಕ್ಷಣೆಗಾಗಿ ಹಲವಾರು ಜನ ಆಗಮಿಸುವ ನಿರೀಕ್ಷೆಯಿದ್ದು, ಈ ಹಿನ್ನೆಲೆ, ಸಾರ್ವಜನಿಕರ ಅನುಕೂಲಕ್ಕಾಗಿ ಮಾರ್ಚ್‌ 25, 29 ಹಾಗೂ ಎಪ್ರಿಲ್ 2 ರಂದು ಎಲ್ಲ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ರಾತ್ರಿ 11.30ಕ್ಕೆ ಕೊನೆಯ ರೈಲು ಸೇವೆ ಹೊರಡುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಎಂಆರ್‌ಸಿಎಲ್‌, “ಈ ಪಂದ್ಯ ನಡೆಯುವ ದಿನಗಳಲ್ಲಿ, ಎಲ್ಲ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ₹50 ಮಾರಾಟಕ್ಕೆ ಲಭ್ಯವಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ.ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ” ಎಂದು ತಿಳಿಸಿದೆ.

ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಪ್ರಯಾಣಿಕರು ಕ್ಯೂಆರ್‌ ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಹಾಗೂ ಎನ್‌ಸಿಎಮ್‌ಸಿ ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ ಕ್ಯೂಆರ್ ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 234 ರೌಡಿಶೀಟರ್ ಮನೆಗಳ ಮೇಲೆ ಪೊಲೀಸರ ದಾಳಿ

ಹಾಗೆಯೇ, ಬೆಂಗಳೂರಿನ ಬಿಡದಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಮಾರ್ಚ್‌ 24 (ಭಾನುವಾರ) ದಂದು ನಿಗದಿಯಾಗಿರುವ ಬಿಡದಿ ಹಾಫ್ ಮ್ಯಾರಥಾನ್‌ನಲ್ಲಿ ಸಾರ್ವಜನಿಕರು ಭಾಗವಹಿಸಲು ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ತನ್ನ ಎಲ್ಲ ನಾಲ್ಕು ಟರ್ಮಿನಲ್‌ಗಳಿಂದ ಮತ್ತು ಇಂಟರ್‌ಚೇಂಜ್ ಸ್ಟೇಷನ್ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ – ಮೆಜೆಸ್ಟಿಕ್‌ನಿಂದ ಬೆಳಿಗ್ಗೆ 7 ಗಂಟೆ ಬದಲಾಗಿ 4:30 ಗಂಟೆಯಿಂದ ಮೆಟ್ರೋ ರೈಲು ಸೇವೆಗಳನ್ನು ಪ್ರಾರಂಭಿಸುತ್ತದೆ ಎಂದು ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X