ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಪುಂಡರ ಹಾವಳಿ ಹೆಚ್ಚಾಗಿದೆ. ರಾತ್ರಿ ಹೊತ್ತು ರಸ್ತೆಯಲ್ಲಿ ಒಂಟಿಯಾಗಿ ಹೋಗುವವರನ್ನು ಟಾರ್ಗೆಟ್ ಮಾಡಿ ಅವರಿಂದ ಸುಲಿಗೆ ಮಾಡುತ್ತಿರುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಕಂಡುಬರುತ್ತಿವೆ.
ಕಳೆದ ಕೆಲವು ದಿನಗಳ ಹಿಂದೆ ರಾತ್ರಿ ಹೊತ್ತು ಒಬ್ಬ ವ್ಯಕ್ತಿ ಒಂಟಿಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ, ಸ್ಕೂಟಿಯಲ್ಲಿ ಬಂದ ಇಬ್ಬರು ದರೋಡೆಕೋರರು ಆತನಿಗೆ ಲಾಂಗ್ ತೋರಿಸಿ, ಬೆದರಿಸಿ ಹಣ ನೀಡುವಂತೆ ಒತ್ತಾಯ ಮಾಡಿದ್ದಾರೆ.
ಈ ವೇಳೆ, ಆ ವ್ಯಕ್ತಿ ಬಿಟ್ಟುಬಿಡುವಂತೆ ಕೈ ಮುಗಿದು ಅಂಗಲಾಚಿದ್ದಾರೆ. ಆದರೂ ಆತನನ್ನು ಬಿಡದ ಆರೋಪಿಗಳು ಲಾಂಗ್ನಿಂದ ಬೆದರಿಕೆ ಹಾಕಿ, ಹಲ್ಲೆ ಮಾಡಿದ್ದಾರೆ. ಆತನ ಶರ್ಟ್, ಪ್ಯಾಂಟ್ಗಳಲ್ಲಿ ಹಣವನ್ನು ಹುಡುಕಿದ್ದಾರೆ. ಆತನಿಂದ ಮೊಬೈಲ್, ವಾಚ್ ಕಿತ್ತುಕೊಂಡಿದ್ದಾರೆ.
ವ್ಯಕ್ತಿ ಮನವಿ ಮಾಡಿದರೂ ಬಿಡದ ಆರೋಪಿಗಳು ಕೊನೆಗೆ ಆತನ ಬ್ಯಾಗ್ ಸಮೇತ ಪರಾರಿಯಾಗಿದ್ದಾರೆ. ಈ ದೃಶ್ಯ ಪಕ್ಕದಲ್ಲೇ ಇರುವ ಅಂಗಡಿಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | 67 ಲಕ್ಷ ಮೌಲ್ಯದ ಚಿನ್ನ ಕಳ್ಳ ಸಾಗಾಣೆ ಮಾಡುತ್ತಿದ್ದ ಚಾಲಾಕಿ ಮಹಿಳೆಯರ ಬಂಧನ
ಈ ಘಟನೆ ನಗರದ ಹಲಸೂರು, ರಾಮಮೂರ್ತಿನಗರ ಸುತ್ತಾಮುತ್ತಾ ನಡೆದಿದೆ. ಖದೀಮರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.