ಬೆಂಗಳೂರು | ಹೆಣ್ಣು ಕೊಟ್ಟ ಅತ್ತೆಯ ಮನೆಗೆ ಕನ್ನ ಹಾಕಿದ ಅಳಿಯ

Date:

Advertisements

ಅತ್ತೆ ಮನೆಯಲ್ಲಿ ಅಳಿಯನೇ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅತ್ತೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಯಲ್ಲಿಟ್ಟಿದ್ದ ಚಿನ್ನಾಭರಣ, ನಗದು ಸೇರಿ ಬರೋಬ್ಬರಿ ₹40 ಲಕ್ಷ ಮೌಲ್ಯದ ವಸ್ತುಗಳನ್ನು ಆರೋಪಿ ಅಳಿಯ ಕದ್ದಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರದೀಪ್‌ ಕುಮಾರ್ ಬಂಧಿತ ಆರೋಪಿ. ರೆಜಿನಾ ಆರೋಪಿಯ ಅತ್ತೆ. ಕಳೆದ ಒಂದು ವರ್ಷದ ಹಿಂದೆ ರೆಜಿನಾ ಅವರ ಚಿಕ್ಕ ಮಗಳು ಲಾವಣ್ಯಳನ್ನು ಪ್ರದೀಪ್ ಪ್ರೀತಿಸಿ ಆಕೆಯನ್ನು ಕರೆದುಕೊಂಡು ಓಡಿ ಹೋಗಿದ್ದನು.

ರೆಜಿನಾ ಕನ್ಯಾಕುಮಾರಿಗೆ ತೆರಳಿದ ಸಂದರ್ಭದಲ್ಲಿ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿಕೊಂಡು ಆರೋಪಿ ಬಾಗಿಲು ಒಡೆದು ಮನೆಯೊಳಗೆ ನುಗ್ಗಿದ್ದಾನೆ. ಈ ವೇಳೆ, ಚಿನ್ನಾಭರಣ, ನಗದು ಸೇರಿ ಬರೋಬ್ಬರಿ ₹40 ಲಕ್ಷ ಕಳ್ಳತನ ಮಾಡಿದ್ದಾನೆ.

Advertisements

ಇದರಿಂದ ಅನುಮಾನಗೊಂಡ ಸ್ಥಳೀಯರು ಆತನನ್ನು ತಡೆದು ಪ್ರಶ್ನಿಸಿದ್ದಾರೆ. ಆತ ತನ್ನನ್ನು ರೆಜಿನಾ ಅವರ ಸಂಬಂಧಿ ಎಂದು ಪರಿಚಯ ಮಾಡಿಕೊಂಡಿದ್ದಾನೆ. ಆದರೂ ಅನುಮಾನಗೊಂಡ ಸ್ಥಳೀಯರು ಆತ ಕದ್ದುಕೊಂಡು ಹೋಗುತ್ತಿದ್ದ ವಸ್ತುಗಳ ಸಮೇತ ಫೋಟೋ ಸೆರೆ ಹಿಡಿದಿದ್ದಾರೆ. ರೆಜಿನಾ ಅವರಿಗೆ ಈ ಬಗ್ಗೆ ತಿಳಿಸಲು ಕರೆ ಮಾಡಿದ್ದಾರೆ. ಆದರೆ, ಕರೆ ಹೋಗಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ನ.22ರಂದು ಅಂಗನವಾಡಿ ಕಾರ್ಯಕರ್ತೆಯರಿಂದ ‘ಬೆಂಗಳೂರು ಚಲೋ’

ರೆಜಿನಾ ಕೆಲವು ದಿನಗಳ ಬಳಿಕ ಕನ್ಯಾಕುಮಾರಿಯಿಂದ ಮನೆಗೆ ವಾಪಸ್ ಬಂದಾಗ ಕಳ್ಳತನವಾಗಿರುವುದು ಗಮನಕ್ಕೆ ಬಂದಿದೆ. ಸ್ಥಳೀಯರು ಸೆರೆ ಹಿಡಿದ ಫೋಟೋ ತೋರಿಸಿದಾಗ ಆತ ತನ್ನ ಅಳಿಯ ಎಂಬುದು ತಿಳಿದುಬಂದಿದೆ.

ರೆಜಿನಾ ಈ ಬಗ್ಗೆ ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X