ಬೆಂಗಳೂರು | ಆಸ್ತಿ ಕಲಹಕ್ಕೆ ತಂದೆಯ ಕಣ್ಣುಗಳನ್ನು ಕಿತ್ತಿದ್ದ ಮಗನಿಗೆ 9 ವರ್ಷ ಜೈಲು ಶಿಕ್ಷೆ

Date:

Advertisements

ಆಸ್ತಿಗಾಗಿ ತಂದೆಯ ಕಣ್ಣುಗಳನ್ನೇ ಕಿತ್ತು ವಿಕೃತಿ ಮೆರೆದಿದ್ದ ಮಗನಿಗೆ 57ನೇ ಸಿಸಿಎಚ್‌ ನ್ಯಾಯಾಲಯ 9 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಜತೆಗೆ ₹40 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.

ನ್ಯಾಯಾಧೀಶ ಟಿ.ಗೋವಿಂದಯ್ಯ ಅವರು ಆರೋಪಿ ಚೇತನ್‌ ಅಲಿಯಾಸ್‌ ಅಭಿಷೇಕ್‌(48) ಎಂಬುವವರಿಗೆ ಈ ಶಿಕ್ಷೆ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಕೆ.ಎಸ್‌.ವೀಣಾ ಅರ್ಜಿದಾರರ ಪರ ವಾದ ಮಾಡಿದ್ದರು.

2018ರ ಆ.29ರಂದು ಬೆಂಗಳೂರಿನ ಶಾಕಾಂಬರಿನಗರದಲ್ಲಿ ಈ ಘಟನೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಆರೋಪಿ ಮೇಲೆ ಎಫ್​ಐಆರ್ ದಾಖಲಾಗಿತ್ತು. ಬಳಿಕ, ಆರೋಪಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದನು. ಆದರೆ, ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈ ಹಿನ್ನೆಲೆ, ಜೆ.ಪಿ.ನಗರ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

Advertisements

ಏನಿದು ಪ್ರಕರಣ?

ವಯಸ್ಸಾದಾಗ ಮಕ್ಕಳೇ ನಮಗೆ ನೆರವಾಗುತ್ತಾರೆ ಎಂಬುವುದು ತಂದೆ-ತಾಯಿ ಆಶಯ. ಆದರೆ, ಈ ಪ್ರಕರಣದಲ್ಲಿ ಆಸ್ತಿ ವಿಚಾರಕ್ಕೆ ಮಗನೊಬ್ಬ ತಂದೆಯ ಎರಡು ಕಣ್ಣುಗಳನ್ನು ಕಿತ್ತು ವಿಕೃತಿ ಮೆರೆದಿದ್ದಾನೆ. ಜತೆಗೆ ಅವರನ್ನು ಕತ್ತು ಹಿಸುಕಿ ಸಾಯಿಸಲು ಮುಂದಾಗಿದ್ದಾನೆ.

ಬೆಂಗಳೂರಿನ ಬನಶಂಕರಿ ಸಮೀಪದ ಶಾಕಾಂಬರಿ ನಗರದಲ್ಲಿ 2018ರ ಆ.29ರಂದು ಈ ಘಟನೆ ನಡೆದಿತ್ತು. ಆಸ್ತಿ ವಿಚಾರಕ್ಕೆ ತಂದೆ ಪರಮೇಶ್ ಮತ್ತು ಪುತ್ರ ಚೇತನ್ ನಡುವೆ ಜಗಳವಾಗಿತ್ತು. ಚೇತನ್ ತನ್ನ ಬೆರಳಿನಿಂದ ತಂದೆಯ ಕಣ್ಣಿನ ಗುಡ್ಡೆಯನ್ನು ಕಿತ್ತು ಹಾಕಿದ್ದನು. ಮತ್ತೊಂದು ಕಣ್ಣಿಗೂ ಹಾನಿ ಮಾಡಿದ್ದನು.

ಪರಮೇಶ್ ವಿಧಾನಸೌಧದ ಮುಖ್ಯ ಕಾರ್ಯದರ್ಶಿಗಳ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಈಗ ಅವರು ನಿವೃತ್ತಿಯ ಜೀವನ ನಡೆಸುತ್ತಿದ್ದು, ಶಾಕಾಂಬರಿ ನಗರದಲ್ಲಿ ಮನೆ ಮಾಡಿಕೊಂಡು ವಾಸ ಮಾಡುತ್ತಿದ್ದರು.

ಪರಮೇಶ್ ಅವರ 2ನೇ ಮಗ ಚೇತನ್ ಮಾದಕ ವಸ್ತುಗಳ ದಾಸನಾಗಿದ್ದನು. ಹಣ ನೀಡುವಂತೆ ಪೋಷಕರನ್ನು ಆಗಾಗ ಪೀಡಿಸುತ್ತಿದ್ದನು. ಘಟನೆ ದಿನ ಹಣ ಮತ್ತು ಆಸ್ತಿ ವಿಚಾರಕ್ಕೆ ಅಪ್ಪ-ಮಗನ ನಡುವೆ ಜಗಳ ನಡೆದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಸಂಪ್‌ ಸ್ವಚ್ಛತೆಗಿಳಿದಿದ್ದ ಇಬ್ಬರು ಕಾರ್ಮಿಕರು ಉಸಿರುಗಟ್ಟಿ ಸಾವು

ಆರೋಪಿ ಚೇತನ್ ತಂದೆ ಪರಮೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಕಣ್ಣಿಗೆ ಕೈ ಹಾಕಿ ಗುಡ್ಡೆಯನ್ನು ತೆಗೆದಿದ್ದಾರೆ. ಮತ್ತೊಂದು ಕಣ್ಣಿಗೂ ಹಲ್ಲೆ ಮಾಡಿದ್ದಾರೆ. ನಂತರ ಮನೆಯಿಂದ ಪರಾರಿಯಾಗಲು ಯತ್ನಿಸಿದ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X