ಬೆಂಗಳೂರು | ಸರಗಳ್ಳತನ ಮಾಡುತ್ತಿದ್ದ ಮಾಜಿ ಶಾಸಕರ ಮೊಮ್ಮಗ ಸೇರಿ ಮೂವರ ಬಂಧನ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಳ್ಳರ ಉಪಟಳ ಹೆಚ್ಚಾಗಿದ್ದು, ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಚೈನ್ ಕಿತ್ತುಕೊಳ್ಳುವುದು, ವಾಹನ ನಿಲ್ಲಿಸಿ ದರೋಡೆ ಮಾಡುವುದು ಸೇರಿದಂತೆ ಹಲವಾರು ಪ್ರಕರಣಗಳು ವರದಿಯಾಗುತ್ತಲೇ ಇವೆ. ಇದೀಗ, ಮಾಜಿ ಶಾಸಕರ ಮೊಮ್ಮಗನೊಬ್ಬ ಸರಗಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ.

ಹೌದು, ತಿಪಟೂರಿನ ಕಾಂಗ್ರೆಸ್‌ ಮಾಜಿ ಶಾಸಕ ತಿಮ್ಮೇಗೌಡ ಅವರ ಮೊಮ್ಮಗ ಅಭಿ, ರಾಕೇಶ್ ಹಾಗೂ ಸಲ್ಮಾನ್ ಎಂಬುವವರನ್ನು ಸೋಲದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ದ್ವಿಚಕ್ರ ವಾಹನಕ್ಕೆ ನಕಲಿ ನಂಬರ್ ಪ್ಲೇಟ್ ಅಳವಡಿಸಿ ಈ ಮೂವರು ಸೇರಿ ಸರಗಳ್ಳತನ ಮಾಡುತ್ತಿದ್ದರು. ಬೆಂಗಳೂರಿನ ನಾಲ್ಕು ಪೊಲೀಸ್‌ ಠಾಣಾ ವ್ಯಾಪ್ತಿಗಳಲ್ಲಿ ಈ ಮೂವರು ಸೇರಿ ಕೃತ್ಯ ಎಸಗಿದ್ದು, ಸದ್ಯ ಇವರ ಚಲನವಲನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Advertisements

ಏನಿದು ಕಥೆ?

ರಾಜ್ಯದ ಪ್ರಪ್ರಥಮ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಗೆಲುವು ಸಾಧಿಸಿದ್ದ ಮಾಜಿ ಶಾಸಕ ಟಿ.ಜಿ.ತಿಮ್ಮೇಗೌಡ ಅವರು 2015ರಲ್ಲಿ ನಿಧನರಾಗಿದ್ದಾರೆ. ದೇಶದ ಸ್ವಾತಂತ್ರ್ಯಾ ನಂತರ ರಚನೆಗೊಂಡ ರಾಜ್ಯದ ಮೊದಲ ವಿಧಾನಸಭೆಯ ತಿಪಟೂರು ತಾಲ್ಲೂಕಿನ ಪ್ರಥಮ ಶಾಸಕರಾಗಿದ್ದರು ಎಂಬ ಹೆಗ್ಗಳಿಕೆಯೂ ಇವರಿಗಿದೆ.

1947ರಲ್ಲಿ ಮೈಸೂರು ರಾಜ್ಯದ ಪ್ರಜಾ ಪ್ರತಿನಿಧಿ ಸಭೆಯ (ಎಂ.ಆರ್.ಎ) ಸದಸ್ಯರಾಗಿ 1952ರ ವರೆಗೂ ಸೇವೆ ಸಲ್ಲಿಸಿದ್ದರು. ನಂತರ 1952ರಲ್ಲಿ ರಾಜ್ಯದಲ್ಲಿ ನಡೆದ ಪ್ರಥಮ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಮ್ಮ ಮೆಟ್ರೋದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಪ್ರಕರಣ

ಊರಿಗೆ ಉಪಕಾರಿಯಾಗಿದ್ದ ತಿಮ್ಮೇಗೌಡರು ಮಕ್ಕಳು ಮತ್ತು ಮೊಮ್ಮಕ್ಕಳಿಗೆ ಯಾವ ಆಸ್ತಿಯನ್ನು ಮಾಡಿರಲಿಲ್ಲ ಎಂದು ತಿಳಿದುಬಂದಿದೆ. ತಿಮ್ಮೇಗೌಡರ ಸಾವಿನ ಬಳಿಕ ಅವರ ಕುಟುಂಬದವರು ಯಾರೂ ರಾಜಕಾರಣದಲ್ಲಿ ಮುಂದುವರೆಯಲಿಲ್ಲ. ಕುಟುಂಬ ಬೆಳೆದಂತೆ ಎಲ್ಲರೂ ಇದ್ದ ಆಸ್ತಿಯನ್ನೇ ಪಾಲು ಮಾಡಿಕೊಂಡಿದ್ದರು. ಕೆಲವರು ಆಸ್ತಿಯನ್ನು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ.

ಆದರೆ, ಇದೀಗ ಅವರ ಮೊಮ್ಮಗ ಕೆಲಸ ಮಾಡದೆ, ಸರಗಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಸೋಲದೇವನಹಳ್ಳಿ ಠಾಣೆ ಪೊಲೀಸರು ಆರೋಪಿಗಳನ್ನು ಬಂಧಿಸಿ ವಿಚಾರಣೆ ಮಾಡಿದಾಗ ಬಂಧಿತ ಅಭಿ ಮಾಜಿ ಶಾಸಕರ ಕುಟುಂಬದವನು ಎಂದು ತಿಳಿದುಬಂದಿದೆ. ನಂತರ ಆತ ಮನೆಯ ಬಡತನದ ಬಗ್ಗೆ ಹೇಳಿಕೊಂಡಿದ್ದಾನೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಈಗಿನ ಶಾಸಕರು ಒಮ್ಮೆ ಶಾಸಕರಾದರೆ ಮುಂದಿನ ಮೂರು ತಲೆಮಾರುಗಳು ಮಜಾ ಮಾಡುವಷ್ಟು ದರೋಡೆ ಮಾಡುವರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X