ಬೆಂಗಳೂರು | ಯುವತಿಯರ ಜೊತೆ ಅಸಭ್ಯ ವರ್ತನೆ ತೋರಿದ ಮೂವರು ಕಾಮುಕರು: ದೂರು ದಾಖಲು

Date:

Advertisements

ಯುವತಿಯರು, ಮಹಿಳೆಯರನ್ನು ಟಾರ್ಗೆಟ್ ಮಾಡಿ ಬೇಕು ಬೇಕು ಅಂತಲೇ ಟಚ್ ಮಾಡಿ ವಿಕೃತಿ ಮೆರೆಯುತ್ತಿದ್ದ ಕಾಮುಕ ಯುವಕರ ಅಟ್ಟಹಾಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಗಳೂರು ವಿಜಯನಗರದ ನಮ್ಮೂಟ ಹೋಟೆಲ್‌ನಲ್ಲಿ ಈ ಘಟನೆ ನಡೆದಿದೆ.

ವಿಜಯನಗರ ಆರ್​ಪಿಸಿ ಲೇಔಟ್​ನಲ್ಲಿರುವ ನಮ್ಮೂಟ ಹೋಟೆಲ್​ನಲ್ಲಿ 2023 ಡಿಸಂಬರ್ 30 ರ ಸಂಜೆ 7.30 ಕ್ಕೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜನವರಿ 10 ರಂದು ಈ ಘಟನೆಗೆ ಸಂಬಂಧಿಸಿದಂತೆ, ಹೋಟೆಲ್ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.

ಹೋಟೆಲ್ ಬಳಿ ಇದ್ದ ಯುವತಿಗೆ ಕಾಮುಕರು ಲೈಂಗಿಕ‌ ಕಿರುಕುಳ ನೀಡಿದ್ದಾರೆ. ಬೇಕು ಬೇಕಂತಲೇ ಯುವತಿಯರನ್ನು ಟಚ್ ಮಾಡಿ ವಿಕೃತಿ ಮೆರೆದಿದ್ದಾರೆ.

Advertisements

ಹೋಟೆಲ್ ಗೆ ಬಂದ ಮೂವರು ಹುಡುಗರು ದೋಸೆ ತಿನ್ನುತ್ತ ಅಲ್ಲಿಯೇ ನಿಂತು ಹರಟೆ ಹೊಡೆಯುತ್ತಿದ್ದರು. ಯುವತಿಯನ್ನ ಟಚ್ ಮಾಡೋ ಮೊದಲು ಮೂವರು ಕಾಮುಕರು ಪ್ಲಾನ್ ಮಾಡಿದ್ದಾರೆ. ಒಬ್ಬ ಟಚ್ ಮಾಡೋ ಉದ್ದೇಶದಿಂದ ಹೋಗುತ್ತಾನೆ. ಯುವತಿಯ ಹಿಂಬದಿಗೆ ಕೈನಿಂದ ಹೊಡೆದು ಅನುಚಿತ ವರ್ತನೆ ತೋರಿದ್ದಾನೆ. ಇನ್ನಿಬ್ಬರು ದೂರ ನಿಂತು ವಾಚ್ ಮಾಡಿದ್ದಾರೆ. ಹೊಟೇಲ್‌ಗೆ ಬಂದ ಯುವತಿಯನ್ನು ಟಚ್ ಮಾಡಿ ಬಳಿಕ ಗಲಾಟೆ ಮಾಡುತ್ತಾರೆ. ಯುವತಿ ಯುವಕರ ಜೊತೆ ಗಲಾಟೆ ಮಾಡಿ ಕೂಗಾಡಿದ್ದು, ಸ್ಥಳೀಯರೆಲ್ಲರೂ ಜಮಾಯಿಸಿದ್ದಾರೆ ಬೇಕು ಬೇಕಂತಲೇ ಟಚ್ ಮಾಡಿ ಯುವಕರ ಪುಂಡಾಟ ಮೆರೆದಿರುವ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜನ ಸೇರುತ್ತಿದ್ದಂತೆ ಮೂವರು ಯುವಕರು ಪರಾರಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಜ.19ರಂದು ಪ್ರಧಾನಿ ಮೋದಿ ಆಗಮನ; ಸಂಚಾರ ಮಾರ್ಗ ಬದಲಾವಣೆಯ ವಿವರ ಇಲ್ಲಿದೆ

ಘಟನೆ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X