ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

Date:

ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ ಹಾಕಬೇಕು ಎಂದು ಸರ್ಕಾರ ಗಡುವು ನೀಡಿತ್ತು. ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನ ಹಲವೆಡೆ ಇನ್ನು ಅನ್ಯ ಭಾಷೆಯ ನಾಮಫಲಕಗಳು ರಾಜಾಜಿಸುತ್ತಿವೆ.

- Advertisement -

ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ಶಾಪ್​ಗಳು ಸೇರಿದಂತೆ ದೊಡ್ಡ ದೊಡ್ಡ ಶೋರೂಂಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಮಸೂದೆ ಮಂಡನೆ ಮಾಡಿದೆ. ಈ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಕನ್ನಡ ನಾಮಫಲಕಗಳ ಅಳವಡಿಕೆಗೆ ಫೆ 28 ರವರೆಗೆ ಸರ್ಕಾರ ಗಡುವು ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಡ ಯೆಮನ್ ಇಕ್ಕಳದಲ್ಲಿ ಶ್ರೀಮಂತ ಸೌದಿ: ವಿನಾಕಾರಣ ದಾಳಿ...

ಸುಮ್ಮನೆ ಇರಲಾರದ ಸೌದಿ ಅರೇಬಿಯಾ, ಬಡ ರಾಷ್ಟ್ರಗಳ ಮೇಲೆ ದಬ್ಬಾಳಿಕೆ ಮಾಡಲು ಹೋಗಿ, ಮರ್ಮಕ್ಕೆ ತಾಕುವಂತಹ ಹೊಡೆತ ತಿಂದು ಕೂತಿದೆ. ಈಗ ಸೌದಿ ಅರೇಬಿಯಾದ ನೆರವಿಗೆ ಅಮೆರಿಕಾ, ಇಸ್ರೇಲ್‌, ಪಾಕಿಸ್ತಾನ ಮತ್ತು ಟಿರ್ಕಿ...

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಸರ್ಕಾರ ನೀಡಿದ ಗಡುವುನಂತೆ ಅಂಗಡಿಗಳ ಮುಂದೆ ಶೇ.60 ರಷ್ಟು ಕನ್ನಡ ಭಾಷೆಯಲ್ಲೇ ನಾಮಫಲಕ ಇರಬೇಕು. ಆದರೆ, ಇಂದು ಸರ್ಕಾರ ನೀಡಿದ ಗಡುವಿನ ಕೊನೆ ದಿನ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಚ್ಚೆತ್ತಿರುವ ವ್ಯಾಪಾರಿಗಳು ಹಳೆಯ ನಾಮಫಲಕ ತೆಗೆದು ಹೊಸ ನಾಮಫಲಕ ಹಾಕಿದ್ದಾರೆ. ದೊಡ್ಡ ಅಕ್ಷರದಲ್ಲಿ ಕನ್ನಡ ನಾಮಫಲಕ ಹಾಕಿರುವುದು ಹಲವೆಡೆ ಕಂಡು ಬಂದಿದೆ. ಆದರೆ ಮತ್ತೊಂದಷ್ಟು ಕಡೆ ಕನ್ನಡವನ್ನು ನಿರ್ಲಕ್ಷಿಸಲಾಗಿದೆ.

ಕಳೆದ ಎರಡು ತಿಂಗಳಿನಿಂದ ನಗರದಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆ ಬಳಸದ ವ್ಯಾಪಾರಿಗಳಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನೋಟಿಸ್‌ ನೀಡುತ್ತಿದೆ. ಆದರೂ, ನಗರದ ಮಲ್ಲೇಶ್ವರಂ, ಯಶವಂತಪುರ, ಚಾಮರಾಜಪೇಟೆ, ರಾಜಾಜಿನಗರ, ವಿಜಯನಗರ, ಆರ್.ಆರ್‌.ನಗರ, ಕೋರಮಂಗಲ, ಜಯನಗರ, ಎಚ್‌ಎಸ್‌ಆರ್‌ ಲೇಔಟ್‌, ಎಂ.ಜಿ ರಸ್ತೆ, ರೆಸಿಡೆನ್ಸಿ ರಸ್ತೆ ಸೇರಿದಂತೆ ಅನೇಕ ಕಡೆಗಳಲ್ಲಿ ಇಂದಿಗೂ ಅನ್ಯ ಭಾಷೆಯ ನಾಮಫಲಕಗಳು ನೇತಾಡುತ್ತಿವೆ.

ನಗರದಲ್ಲಿ ಈಗಾಗಲೇ 50,216 ವ್ಯಾಪಾರಿಗಳಿಗೆ ನಾಮಫಲಕಗಳಲ್ಲಿ ಕನ್ನಡ ಭಾಷೆ ಬಳಸುವಂತೆ ಬಿಬಿಎಂಪಿ ನೋಟಿಸ್‌ ನೀಡಿದೆ. ಈ ಪೈಕಿ ಈಗಾಗಲೇ 46,600 ವ್ಯಾಪಾರಿಗಳು ಕನ್ನಡ ನಾಮಫಲಕ ಅಳವಸಿಕೊಂಡಿದ್ದಾರೆ. ಇನ್ನೂ 3,616 ವ್ಯಾಪಾರಿಗಳು ಕನ್ನಡ ನಾಮ ಫಲಕ ಅಳವಡಿಸಿಕೊಳ್ಳುವುದು ಬಾಕಿ ಇದೆ ಎಂದು ಬಿಬಿಎಂಪಿ ಆರೋಗ್ಯಾಧಿಕಾರಿಗಳು ಈ ಹಿಂದೆ ಮಾಹಿತಿ ನೀಡಿದ್ದರು.

ಬಿಬಿಎಂಪಿಯಿಂದ ಉದ್ದಿಮೆ ಪರವಾನಗಿ ಪಡೆದ ವ್ಯಾಪಾರಿಗಳಿಗೆ ಮಾತ್ರ ಬಿಬಿಎಂಪಿ ಆರೋಗ್ಯಾಧಿಕಾರಿಗಳು ನೋಟಿಸ್‌ ನೀಡುತ್ತಿದ್ದಾರೆ. ಆದರೆ, ನಗರದಲ್ಲಿ ಸಾವಿರಾರು ಸಂಖ್ಯೆಯ ಪರವಾನಗಿ ಪಡೆಯದ ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದಾರೆ. ಆ ವಾಣಿಜ್ಯ ಮಳಿಗೆಗಳ ಮೇಲೆ ಅನ್ಯ ಭಾಷೆಯ ನಾಮಫಲಕ ಇಂದಿಗೂ ಇವೆ. ಈ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸರ್ಕಾರದ ಆದೇಶದಂತೆ ಅಂಗಡಿಗಳ ಮುಂದೆ ಶೇ.60 ರಷ್ಟು ಕನ್ನಡ ಭಾಷೆಯಲ್ಲೇ ನಾಮಫಲಕ ಇರಬೇಕು. ಬೆಂಗಳೂರಿನ ಅವೆನ್ಯೂ ರೋಡ್, ಚಿಕ್ಕಪೇಟೆಯಲ್ಲಿ ವ್ಯಾಪಾರಿಗಳು ಕನ್ನಡ ನಾಮಫಲಕ ಹಾಕಿದ್ದಾರೆ. ಈ ಹಿಂದೆ ಚಿಕ್ಕದಾಗಿದ್ದ ಕನ್ನಡ ಬೋರ್ಡ್​ಗಳನ್ನು ಬದಲಾವಣೆ ಮಾಡಿ ಈಗ ದೊಡ್ಡ ದೊಡ್ಡ ಅಕ್ಷರಗಳಲ್ಲೇ ಕನ್ನಡ ನಾಮಫಲಕ ಅಳವಡಿಸಲಾಗಿದೆ. ಕೆಲ ಅಂಗಡಿ-ಮುಂಗಟ್ಟುಗಳಲ್ಲಿ ಮಾತ್ರ ಚಿಕ್ಕದಾಗಿ ಕನ್ನಡ ಬರಹ ಹಾಕಲಾಗಿದೆ.

ಈ ಸುದ್ದಿ ಓದಿದ್ದೀರಾ? ‘ನಾಸೀರ್ ಸಾಬ್ ಜಿಂದಾಬಾದ್’ ಘೋಷಣೆ ತಿರುಚಿದ ಬಿಜೆಪಿ; ಆದರೂ, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್‌

ಬೆಂಗಳೂರಿನ ಹಲವೆಡೆ ಇನ್ನೂ ಕೂಡ ನಾಮಫಲಕ ಬದಲಾಯಿಸಿಲ್ಲ. 60% ರಷ್ಟು ನಾಮಫಲಕ ಬದಲಾಗಿದೆ. ಶೇ40% ಇನ್ನೂ ಬದಲಾಗಬೇಕಿದೆ. ಸರ್ಕಾರ ಆದೇಶ ಮಾಡಿ ಕ್ರಮವಹಿಸದ ಹಿನ್ನಲೆ, ಕರವೇ ಮತ್ತೆ ಹೋರಾಟದ ಎಚ್ಚರಿಕೆ ನೀಡಿದೆ. ನಾಮಫಲಕ ಬಳಕೆ ವಿರುದ್ಧ ಬೆಂಗಳೂರು ಸ್ಥಬ್ದ ಮಾಡುವ ಎಚ್ಚರಿಕೆ ನೀಡಿದೆ.

“ಇವತ್ತು ರಾತ್ರಿ ವೇಳೆಗೆ ನಗರದಲ್ಲಿರುವ ಎಲ್ಲ ಅಂಗಡಿ ಮುಂಗಟ್ಟುಗಳ ಮುಂದೆ ಇರುವ ನಾಮಫಲದಲ್ಲಿ ಶೇ.60 ರಷ್ಟು ಕನ್ನಡ ಇರಬೇಕು. ಇಲ್ಲದಿದ್ದರೇ, ನಾಳೆಯಿಂದ ನಾವೇ ನಾಮಫಲಕಗಳನ್ನು ತೆಗೆಯುತ್ತೇವೆ. ಕನ್ನಡ ನಾಮಫಲಕ ಹಾಕದ ಅಂಗಡಿ ಮಾಲೀಕರ ವಿರುದ್ಧ ಪಾಲಿಕೆ ಅಧಿಕಾರಿಗಳು ಕಠಿಣ ಕ್ರಮಗೊಳ್ಳಬೇಕು” ಎಂದು ಕರವೇ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...