ಬೆಂಗಳೂರು | ಸಾಲು ಸಾಲು ರಜೆಯಿಂದ ಸಂಚಾರ ದಟ್ಟಣೆ : ತಮ್ಮ ಊರಿನತ್ತ ಮುಖ ಮಾಡಿದ ಜನರು

Date:

Advertisements

ಸಾಲು ಸಾಲು ರಜೆ ಇರುವ ಕಾರಣ, ಜನರು ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ಈ ಹಿನ್ನೆಲೆ, ಬೆಂಗಳೂರಿನಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಳವಾಗಿದೆ.

ಗಣರಾಜ್ಯೋತ್ಸವ ಸೇರಿದಂತೆ ಮೂರು ದಿನಗಳ ಕಾಲ ರಜೆ ಇದ್ದು, ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.

ವಾಹನ ಸವಾರರು ಮಾರ್ಗ ಮಧ್ಯೆ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ಹೈರಾಣಾಗಿದ್ದಾರೆ. ಟ್ರಾಫಿಕ್ ನಿಯಂತ್ರಿಸಲು ನೆಲಮಂಗಲ ಸಂಚಾರ ಪೊಲೀಸರು ಹರಸಾಹಸ ಪಡುವಂತಾಗಿದೆ.

Advertisements

ಖಾಸಗಿ ಬಸ್ ದರ ಹೆಚ್ಚಳ

ಮೂರು ದಿನಗಳ ಕಾಲ ಸಾಲು ರಜೆ ಇರುವ ಹಿನ್ನೆಲೆ, ಬೆಂಗಳೂರಿಗೆ ಉದ್ಯೋಗ ಅರಸಿ ಬಂದು ಇಲ್ಲಿಯೇ ನೆಲೆಸಿರುವ ಜನರು ಇದೀಗ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ.

ಗಣರಾಜೋತ್ಸವ, ನಾಲ್ಕನೇ ಶನಿವಾರ ಹಾಗೂ ಭಾನುವಾರ ಇರುವ ಸಾಲು ಸಾಲು ರಜೆಗಳನ್ನೇ ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು, ದುಪ್ಪಟ್ಟು ಟಿಕೆಟ್ ದರ ನಿಗದಿ ಮಾಡಿ ಜನರಿಂದ ಪೀಕುತ್ತಿದ್ದಾರೆ. ಆದರೂ, ಬೆಂಗಳೂರಿನಿಂದ ನಾನಾ ಕಡೆ ತೆರಳುವ ಖಾಸಗಿ ಬಸ್‌ಗಳು ಬಹುತೇಕ ತುಂಬಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರಿನಲ್ಲಿ ಶೇ.25 ರಷ್ಟು ಸೈಬರ್ ಅಪರಾಧ ಪ್ರಕರಣ ದಾಖಲು: ಡಿಜಿ ಐಜಿಪಿ ಅಲೋಕ್ ಮೋಹನ್

ಇಂದಿನ ಟಿಕೆಟ್ ದರ

ಬೆಂಗಳೂರಿನಿಂದ ಶಿವಮೊಗ್ಗಕ್ಕೆ ₹1250- ₹1600, ಹುಬ್ಬಳ್ಳಿಗೆ ₹1700-₹2500, ಮಂಗಳೂರಿಗೆ ₹1550-₹2000, ಕಲಬುರಗಿಗೆ ₹1900-₹2300, ಮಡಿಕೇರಿಗೆ ₹950-₹1600, ಉಡುಪಿಗೆ ₹1700-₹2200, ಧಾರವಾಡಕ್ಕೆ ₹1400-₹1850, ಬೆಳಗಾವಿಗೆ ₹1300-₹1800, ದಾವಣಗೆರೆಗೆ ₹900-₹1300, ಚಿಕ್ಕಮಗಳೂರುಗೆ ₹1100-₹1300, ಬೀದರ್‌ಗೆ ₹1600-₹2000, ರಾಯಚೂರಿಗೆ ₹1250-₹1600 ದರವಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X