ವಿವಾಹದ ಆನ್​ಲೈನ್ ನೋಂದಣಿ ಪ್ರಕ್ರಿಯೆಗೆ ಫೆ.15 ರಿಂದ ಪ್ರಾಯೋಗಿಕ ಚಾಲನೆ

Date:

Advertisements

ಹಿಂದೂ ವಿವಾಹ ಕಾಯ್ದೆ 1955 ಅಡಿಯಲ್ಲಿ ವಿವಾಹದ ಆನ್ಲೈನ್ ನೋಂದಣಿ ಸೌಲಭ್ಯವನ್ನು ಕರ್ನಾಟಕ ಸರ್ಕಾರ ಗುರುವಾರ (ಫೆಬ್ರವರಿ 15) ಪ್ರಾರಂಭಿಸಿದೆ.

ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಮಲ್ಲೇಶ್ವರಂ ಸಬ್ರಿಜಿಸ್ಟ್ರಾರ್ಕಚೇರಿಯಲ್ಲಿ ವಿವಾಹದ ಆನ್ಲೈನ್ ನೋಂದಣಿ ಪ್ರಕ್ರಿಯೆಗೆ ಪ್ರಾಯೋಗಿಕವಾಗಿ ಚಾಲನೆ ನೀಡಿದರು. ಅದೇ ರೀತಿ, ವಿಶೇಷ ವಿವಾಹ ಕಾಯ್ದೆ 1954 ಅಡಿಯಲ್ಲಿ ವಿವಾಹ ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕೂಡ ಆನ್ಲೈನ್ಮಾಡಲಾಗಿದೆ.

ಹಿಂದೂ ವಿವಾಹಗಳ ನೋಂದಣಿ ಕಾಯಿದೆ-1955ರಡಿ ವಿವಾಹ ನೋಂದಣಿ ಸರಳೀಕರಣಗೊಳಿಸಿದ್ದು, ವಿವಾಹಿತರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ ಉಪನೋಂದಣಾಧಿಕಾರಿಗಳು ಅನುಮೋದಿಸಿದ ನಂತರ ನಿಗದಿತ ಶುಲ್ಕ ಪಾವತಿಸಿ ಆನ್‌ಲೈನ್‌ನಲ್ಲಿಯೇ ವಿವಾಹ ದೃಢೀಕರಣ ಪತ್ರ ಪಡೆಯಲು ಆನ್‌ಲೈನ್‌ ಹಿಂದೂ ವಿವಾಹ ನೋಂದಣಿ ತಂತ್ರಾಂಶ ವ್ಯವಸ್ಥೆ ಕಲ್ಪಿಸಲಾಗಿದೆ.

Advertisements

ಅಲ್ಲದೆ, ವಿಶೇಷ ವಿವಾಹಗಳ ನೋಂದಣಿ ಕಾಯಿದೆ- 1955ರಡಿ ಉಪನೋಂದಣಿ ಕಚೇರಿಗಳಲ್ಲಿ ರಿಜಿಸ್ಟರ್ಡ್‌ ಮ್ಯಾರೇಜ್‌ ಆಗುವವರು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಲು ವಿಶೇಷ ವಿವಾಹಗಳ ನೋಂದಣಿ ತಂತ್ರಾಂಶವನ್ನೂ ಅಳವಡಿಸಲಾಗಿದೆ.

ರಿಜಿಸ್ಟರ್ಡ್‌ ಮ್ಯಾರೇಜ್‌ಗೆ ಆನ್‌ಲೈನ್‌ ಮೂಲಕವೇ ದಿನಾಂಕ ಮತ್ತು ಸಮಯ ನಿಗದಿಪಡಿಸಿಕೊಂಡು ನಂತರ ಕಚೇರಿಯಲ್ಲಿ ಬಂದು ವಿವಾಹವಾಗುವ ವ್ಯವಸ್ಥೆ ಕಲ್ಪಿಸಲಾಗಿದೆ.

ರಾಜ್ಯದ ಎಲ್ಲ ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೂ ಸೌಲಭ್ಯಗಳನ್ನು ಈ ತಿಂಗಳ ಅಂತ್ಯದೊಳಗೆ ವಿಸ್ತರಿಸಲಾಗುತ್ತದೆ. ಆಧಾರ್ ದೃಢೀಕರಣವನ್ನು ನೀಡಲು ಬಯಸುವವರು ಮನೆಯಿಂದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಆದರೆ, ಆಧಾರ್ ದೃಢೀಕರಣವನ್ನು ಮಾಡದಿರುವವರು ಸಬ್ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡುವ ಮೂಲಕ ತಮ್ಮ ವಿವಾಹವನ್ನು ನೋಂದಾಯಿಸಿಕೊಳ್ಳಬಹುದು.

ವಿಶೇಷ ವಿವಾಹ ಕಾಯ್ದೆಯಡಿ ವಿವಾಹಗಳನ್ನು ನೋಂದಾಯಿಸಲು ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆನ್ಲೈನ್ನಲ್ಲಿ ಮಾಡಲಾಗಿದೆ. ಎಲ್ಲ ಅಗತ್ಯ ದಾಖಲೆಗಳನ್ನು ಆನ್ಲೈನ್ನಲ್ಲಿ ಒದಗಿಸಿದ ನಂತರ, ಸಬ್ರಿಜಿಸ್ಟ್ರಾರ್ ಕಚೇರಿಗೆ ನೋಂದಣಿಗೆ ಭೇಟಿ ನೀಡಬೇಕಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕದ್ದ ಫೋನ್ ಪೋಸ್ಟ್‌ ಮೂಲಕ ಹಿಂತಿರುಗಿಸಿದರೆ ಪ್ರಕರಣ ದಾಖಲಿಸಲ್ಲ: ಪೊಲೀಸ್ ಇಲಾಖೆ

“ಈಗ ಹಿಂದೂ ವಿವಾಹ ಕಾಯಿದೆಯಡಿ ತಮ್ಮ ವಿವಾಹವನ್ನು ನೋಂದಾಯಿಸಲು ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಬೇಕಾಗಿಲ್ಲ. ಮದುವೆಯ ಆಮಂತ್ರಣ, ವಿಡಿಯೋ, ಆಧಾರ್ ಒದಗಿಸುವ ಮೂಲಕ ಮನೆಯ ಸೌಕರ್ಯದಲ್ಲಿ ಪ್ರಮಾಣಪತ್ರವನ್ನು ರಚಿಸಲಾಗುತ್ತದೆ. ಪಾರದರ್ಶಕತೆ ಮತ್ತು ಸೇವಾ ವಿತರಣೆಯ ಕಡೆಗೆ ಇನ್ನೂ ಒಂದು ಹೆಜ್ಜೆ” ಎಂದು ಕಂದಾಯ ಸಚಿವ ಕೃಷ್ಣಬೈರೆಗೌಡ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

“ರಾಜ್ಯದಲ್ಲಿ ಶೇ.30ರಷ್ಟು ವಿವಾಹಗಳು ಮಾತ್ರ ನೋಂದಣಿಯಾಗುತ್ತಿವೆ. ಹಾಗಾಗಿ, ವಿವಾಹವಾಗುವ ಎಲ್ಲರೂ ತಪ್ಪದೇ ವಿವಾಹ ನೋಂದಣಿ ಮಾಡಿಸಬೇಕು. ನಮ್ಮ ಸರ್ಕಾರ ರಚನೆಯಾದ ನಂತರ ಕಂದಾಯ ಇಲಾಖೆ ಸೇವೆಗಳನ್ನು ಸರಳೀಕರಣಗೊಳಿಸಲು ಸಾಕಷ್ಟು ಸುಧಾರಣೆ ಮಾಡಲಾಗಿದೆ. ಈ ರೀತಿಯ ಜನಸ್ನೇಹಿ ಸುಧಾರಣೆಗಳು ನಿರಂತರವಾಗಿ ನಡೆಯಲಿವೆ. ಕೇವಲ ಕಂದಾಯ, ಆದಾಯ ಸಂಗ್ರಹವಷ್ಟೇ ಇಲಾಖೆಯ ಆದ್ಯತೆಯಾಗಿರದೆ, ಜನಪರ ಆಡಳಿತ ಸುಧಾರಣೆಯೂ ನಮ್ಮ ದಿಕ್ಸೂಚಿಯಾಗಿದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X