ಬೆಂಗಳೂರು | ಡೆಂಗ್ಯೂ ಜ್ವರಕ್ಕೆ ಇಬ್ಬರು ಬಲಿ

Date:

Advertisements

ಮಳೆಗಾಲ ಆರಂಭವಾಗುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ. ಇದೀಗ, ಡೆಂಗ್ಯೂ ಜ್ವರಕ್ಕೆ ಬೆಂಗಳೂರಿನಲ್ಲಿ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.

ಬಿಬಿಎಂಪಿ ಪೂರ್ವ ವಲಯದಲ್ಲಿ ತಮಿಳುನಾಡು ಮೂಲದ 80 ವರ್ಷದ ವೃದ್ಧೆ ನೀರಜಾ ದೇವಿ ಮತ್ತು ಕಗ್ಗದಾಸಪುರ ಮೂಲದವರಾದ 27 ವರ್ಷದ ಯುವಕ ಅಭಿಲಾಷ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದೇವಿ ಕೂಡ ಕ್ಯಾನ್ಸರ್‌ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಡೆಂಗ್ಯೂಗೆ ಹಾವೇರಿಯಲ್ಲಿ ಮೊದಲ ಸಾವು ಸಂಭವಿಸಿತ್ತು. ಇದೀಗ, ಬೆಂಗಳೂರಿನಲ್ಲಿ ಸಂಭವಿಸಿದೆ. ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನಾಳೆ ಬಿಬಿಎಂಪಿ ಅಧಿಕಾರಿಗಳು ಡೆತ್ ಆಡಿಟ್ ಮಾಡಲಿದ್ದಾರೆ. ಕಳೆದ ಎರಡು ವಾರಗಳಲ್ಲಿ 1,000 ಗಡಿಯನ್ನು ದಾಟಿದ ಡೆಂಗ್ಯೂ ಪ್ರಕರಣಗಳ ಏರಿಕೆಯ ಮಧ್ಯೆ ಸಾವುಗಳು ವರದಿಯಾಗಿವೆ. ಇದು ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಡೆಂಘೀ ಪ್ರಕರಣಗಳ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? 9 ದಿನಗಳಲ್ಲಿ 5ನೇ ಸೇತುವೆ ಕುಸಿತ; ನಿತೀಶ್ ಸರ್ಕಾರದ ವಿರುದ್ಧ ತೇಜಸ್ವಿ ಯಾದವ್ ವಾಗ್ದಾಳಿ

ಬಿಬಿಎಂಪಿ ವ್ಯಾಪ್ತಿಯಲ್ಲಿ 2,457 ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸುಮಾರು 5,187 ಡೆಂಗ್ಯೂ ಕೇಸ್​ಗಳಿವೆ. ಹಾವೇರಿ, ಮೈಸೂರು ಸೇರಿದಂತೆ ಜಿಲ್ಲೆ ಜಿಲ್ಲೆಯಲ್ಲೂ ಜನ ಡೆಂಘೀಯಿಂದ ಬಳಲುತ್ತಿದ್ದಾರೆ. ಕೇವಲ 6 ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಶೇ.140ರಷ್ಟು ಹೆಚ್ಚಾಗಿದೆ ಎನ್ನಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X