ಬೆಂಗಳೂರು | ಕೆರೆಗಳಲ್ಲಿ ಫಿಲ್ಟರ್ ಬೋರ್‌ವೆಲ್ ಅಳವಡಿಸಲು ಮುಂದಾದ ಜಲಮಂಡಳಿ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಹೆಚ್ಚಳವಾಗಿದೆ. ಬೇಸಿಗೆ ಆರಂಭದ ದಿನಗಳಲ್ಲಿಯೇ ನೀರಿನ ಸಮಸ್ಯೆ ತಲೆದೋರಿದ್ದು, ಇನ್ನು ಎರಡರಿಂದ ಮೂರು ತಿಂಗಳು ಈ ಸಮಸ್ಯೆ ಹೀಗೆ ಇರಲಿದೆಯೇ ಎಂಬ ಪ್ರಶ್ನೆ ಎದುರಾಗಿದೆ. ಈ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಮುಂದಾಗಿರುವ ಬೆಂಗಳೂರು ಜಲಮಂಡಳಿ ಕೆರೆಗಳಲ್ಲಿ ಫಿಲ್ಟರ್ ಬೋರ್‌ವೆಲ್ ಅಳವಡಿಸಲು ತಯಾರಿ ನಡೆಸಿದೆ.

ಹೌದು, ಬೆಂಗಳೂರಿನ ಎಂಟು ಕೆರೆಗಳಲ್ಲಿ ಫಿಲ್ಟರ್‌ ಬೋರ್‌ವೆಲ್‌ ಅಳವಡಿಸುವುದಕ್ಕೆ ಬೆಂಗಳೂರು ಜಲಮಂಡಳಿ ಐಐಎಸ್​ಸಿ ಸಹಯೋಗದಲ್ಲಿ ತಯಾರಿ ನಡೆಸಿದೆ.

ಫಿಲ್ಟರ್‌ ಬೋರ್‌ವೆಲ್‌ ಅಳವಡಿಸುವುದಕ್ಕೆ ಮೊದಲಿಗೆ ನಾಯಂಡಹಳ್ಳಿ ಕೆರೆ, ಚಿಕ್ಕ ಬಾಣಾವರ ಕೆರೆ, ವರ್ತೂರು ಕೆರೆ ಸೇರಿದಂತೆ ಎಂಟು ಕೆರೆಗಳನ್ನು ಆಯ್ಕೆ ಮಾಡಲಾಗಿದೆ. ಈ ಕೆರೆಗಳ ನೀರನ್ನು 10 ರಿಂದ 15 ದಿನಗಳಲ್ಲಿ ಸಂಗ್ರಹಿಸಲಾಗುತ್ತದೆ. ಬಳಿಕ, ತಜ್ಞರು ಈ ಕೆರೆಯ ನೀರಿನ ಗುಣಮಟ್ಟ ಪರಿಶೀಲಿಸಲಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾರ್ಚ್‌ 10ರ ಭಾನುವಾರ ಬೆಳಗ್ಗೆ 6 ಗಂಟೆಗೇ ಆರಂಭ ನಮ್ಮ ಮೆಟ್ರೋ

ಈ ಕೆರೆಯ ನೀರು ಕುಡಿಯಲು ಯೋಗ್ಯವೆಂದಾದರೆ, ಬಳಿಕ ಬೋರ್​​ವೆಲ್​ ಕೊರೆಯಲಾಗುತ್ತದೆ. ನಂತರ ನೀರು ಶುದ್ಧೀಕರಣ ಮಾಡಿ, ಬಳಿಕ ಮನೆ ಮನೆಗೆ ಸರಬರಾಜು ಮಾಡಲಾಗುತ್ತದೆ ಎಂದು ಜಲಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

Download Eedina App Android / iOS

X