ಬೆಂಗಳೂರು | ವಿದೇಶಿ ಕರೆನ್ಸಿಗಾಗಿ ಮಹಿಳೆ ಕೊಲೆ; ಇಬ್ಬರ ಬಂಧನ

Date:

Advertisements

ವಿದೇಶಿ ಮಹಿಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಜರೀನಾ ಮೃತ ಮಹಿಳೆ. ಈಕೆ ಮೂಲತಃ ಉಜ್ಬೇಕಿಸ್ತಾನದವರು. ಬಿಡಿಎ ಸೇತುವೆ ಬಳಿಯ ಖಾಸಗಿ ಸ್ಟಾರ್ ಹೋಟೆಲ್​ನ ಕೊಠಡಿಯಲ್ಲಿ ಅವರು ಮೃತಪಟ್ಟಿದ್ದರು.

ಮಹಿಳೆ ಬಳಿಯಿದ್ದ ವಿದೇಶಿ ಹಣ ಮತ್ತು ಮೊಬೈಲ್​ಗಾಗಿ ಹೋಟೆಲ್​ನಲ್ಲಿ‌ ಹೌಸ್ ಕೀಪಿಂಗ್​ ಆಗಿ ಕೆಲಸ ಮಾಡುತ್ತಿದ್ದ ಆರೋಪಿಗಳಿಬ್ಬರು ರೂಮ್ ಸರ್ವಿಸ್​ಗೆ ಹೋಗಿದ್ದಾಗ ಮಹಿಳೆಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ.

Advertisements

ಬಳಿಕ, ಆಕೆ ಬಳಿಯಿದ್ದ ಹಣ ಮತ್ತು ಮೊಬೈಲ್​ ಕದ್ದು ಪರಾರಿಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡ ಪೊಲೀಸರು ವಿಶೇಷ ತಂಡ ರಚಿಸಿ ಶೋಧ ಕಾರ್ಯ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಇಬ್ಬರು ಆರೋಪಿಗಳು ಅಸ್ಸಾಂ ಮೂಲದವರು ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳಿಂದ ಪೊಲೀಸರು ₹13,000 ಸಾವಿರ ನಗದು, ₹2,000 ಮುಖಬೆಲೆಯ ಉಜ್ಬೇಕಿಸ್ಥಾನದ ಎರಡು ನೋಟುಗಳು ₹5,000 ಮುಖ‌ಬೆಲೆಯ ಒಂದು ನೋಟನ್ನು ಸೀಜ್ ಮಾಡಿದ್ದಾರೆ.

ಏನಿದು ಪ್ರಕರಣ?  

ವಿದೇಶಿ ಮಹಿಳೆ ಜರೀನಾ ಕಳೆದ ನಾಲ್ಕು ದಿನದ ಹಿಂದೆ ಉಜ್ಬೇಕಿಸ್ತಾನದಿಂದ ಪ್ರವಾಸಿ ವೀಸಾದಡಿ ಬೆಂಗಳೂರಿಗೆ ಬಂದಿದ್ದರು. ಕಳೆದ ಆರು ದಿನಗಳಿಂದ ಶೇಷಾದ್ರಿಪುರಂ ಬಳಿಯಿರುವ ಜಗದೀಶ್ ಹೋಟೆಲ್​ನಲ್ಲಿ ತಂಗಿದ್ದರು. ಮಾರ್ಚ್‌ 13ರಂದು ಸಾಯಂಕಾಲ ಹೋಟೆಲ್ ಸಿಬ್ಬಂದಿ ಎಷ್ಟೇ ಕೂಗಿದರೂ ಮಹಿಳೆ ಬಾಗಿಲು ತೆರೆದಿಲ್ಲ. ಹೀಗಾಗಿ, ಮಾರ್ಚ್‌ 13ರ ಮಧ್ಯರಾತ್ರಿ ಮಾಸ್ಟರ್ ಕೀ ಬಳಸಿ ಹೋಟೆಲ್ ಸಿಬ್ಬಂದಿ ಕೊಠಡಿಯ ಬಾಗಿಲು ತೆಗೆದಾಗ ಮಹಿಳೆಯ ಶವ ಪತ್ತೆಯಾಗಿದೆ.

ಕೊಲೆಯಾಗಿರುವ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಶೇಷಾದ್ರಿಪುರಂ ಪೊಲೀಸರು, ಎಫ್​ಎಸ್​ಎಲ್ ತಂಡ ಹಾಗೂ ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಕೇಂದ್ರ ವಿಭಾಗ ಡಿಸಿಪಿ ಶೇಖರ್ ಟೆಕ್ಕಣ್ಣನವರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಹೋಟೆಲ್ ಸಿಸಿಟಿವಿ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪೊಲೀಸರು ಪರಿಶೀಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉಸಿರುಗಟ್ಟಿಸಿ ವಿದೇಶಿ ಮಹಿಳೆ ಕೊಲೆ; ಶಂಕೆ

ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬೌರಿಂಗ್ ಆಸ್ಪತ್ರೆಗೆ ರವಾನಿಸಿದ್ದರು‌. ಬಳಿಕ, ಅನುಮಾನಾಸ್ಪದ ಸಾವಿನಡಿ‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X