ಬೆಂಗಳೂರು | ಮುಖ್ಯ ರಸ್ತೆಯಲ್ಲಿ ಯುವಕನ ಅಪಾಯಕಾರಿ ವ್ಹೀಲಿಂಗ್: ಕ್ರಮ ಕೈಗೊಳ್ಳಿ ಎಂದ ನೆಟ್ಟಿಗರು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವ್ಹೀಲಿಂಗ್ ಮಾಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ವ್ಹೀಲಿಂಗ್ ಮಾಡುವುದು ಅಪಾಯಕಾರಿ ಎಂದು ಪೊಲೀಸರು ಎಷ್ಟೇ ಹೇಳಿದರೂ ಈ ಯುವಕರ ಹುಚ್ಚಾಟಕ್ಕೆ ಬ್ರೇಕ್ ಬಿದ್ದಿಲ್ಲ. ಇದೀಗ, ನಗರದ ಹೊಸೂರು ಹೆದ್ದಾರಿಯ ಚಂದಾಪುರ ಜಂಕ್ಷನ್ ಬಳಿ ಯುವಕನೊಬ್ಬ ಅಪಾಯಕಾರಿ ದ್ವಿಚಕ್ರ ವಾಹನದ ವ್ಹೀಲಿಂಗ್ ಮಾಡುತ್ತಿದ್ದ ವಿಡಿಯೋವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಮಾರ್ಚ್ 13ರಂದು ಬೆಳಿಗ್ಗೆ 9:50ರ ಸುಮಾರಿಗೆ ನಗರದ ಹೊಸೂರು ರಾಷ್ಟ್ರೀಯ ಹೆದ್ದಾರಿ ಚಂದಾಪುರ ಜಂಕ್ಷನ್ ಬಳಿ ಯುವಕನೊಬ್ಬ ಈ ಅಪಾಯಕಾರಿ ವ್ಹೀಲಿಂಗ್ ಮಾಡಿದ್ದಾನೆ. ಈ ಯುವಕ ವ್ಹೀಲಿಂಗ್ ಮಾಡೋದಕ್ಕೆ ನಂಬರ್ ಫ್ಲೇಟ್ ಇಲ್ಲದ ದ್ವಿಚಕ್ರ ವಾಹನ ಬಳಕೆ ಮಾಡಿದ್ದಾನೆ. ಈತ ಪ್ರಮುಖ ರಸ್ತೆಯಲ್ಲಿ ಮುಂದೆ ವೀಲ್ಹಿಂಗ್ ಮಾಡುತ್ತಿದ್ದರೇ, ಆತನ ಇತರ ಮೂರು ಜನ ಸ್ನೇಹಿತರು ಹೆಲ್ಮೆಟ್‌ ಹಾಕದೇ ಒಂದೇ ಬೈಕ್‌ನಲ್ಲಿ ಕುಳಿತು ಆತನನ್ನು ಹಿಂಬಾಲಿಸಿ, ವಿಡಿಯೋ ಮಾಡಿದ್ದಾರೆ. ಈ ಯುವಕನ ಹುಚ್ಚಾಟವನ್ನು ಸಾರ್ವಜನಿಕರೊಬ್ಬರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಉದ್ಯಾನವನ ಬನ್ನೇರುಘಟ್ಟ ಕಾಡಂಚಿನಲ್ಲಿ ಮಹಿಳೆಯ ಅಂಗಾಂಗ ಪತ್ತೆ

Advertisements

ಎಕ್ಸ್‌ನ ‘ಥರ್ಡ್‌ ಐ’ ಎಂಬ ಹೆಸರಿನ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. “ಈ ಅಪಾಯಕಾರಿ ಸಾಹಸವನ್ನು ಮಾರ್ಚ್‌ 13ರಂದು ಬೆಳಿಗ್ಗೆ 9:50ರ ಸುಮಾರಿಗೆ ಹೊಸೂರು ರಾಷ್ಟ್ರೀಯ ಹೆದ್ದಾರಿಯ ಚಂದಾಪುರ ಜಂಕ್ಷನ್ ಬಳಿ ನಡೆಸಲಾಯಿತು. ಸ್ಟಂಟ್ ಮಾಡಿದ ಸವಾರ ನಂಬರ್ ಪ್ಲೇಟ್ ಇಲ್ಲದ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದು, ಬೈಕ್ ಹಿಂಬಾಲಿಸಿಕೊಂಡು ಬಂದ ಆತನ ಸ್ನೇಹಿತರು ವಿಡಿಯೋ ಶೂಟ್ ಮಾಡಿದ್ದಾರೆ. ಅವರ ವಾಹನ ಸಂಖ್ಯೆ AP39 EC1411” ಎಂದು ಬರೆದುಕೊಂಡಿದ್ದಾರೆ. ಅಲ್ಲದೇ, ಈ ವಿಡಿಯೋವನ್ನು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ಯಾಗ್ ಮಾಡಲಾಗಿದೆ.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪೊಲೀಸರು, ಈ ಪ್ರಕರಣ ಗಮನಿಸುವಂತೆ ಬೆಂಗಳೂರು ಗ್ರಾಮಾಂತರದ ಎಸ್​ಪಿಗೆ ಟ್ಯಾಗ್ ಮಾಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X