ಬೀದರ್‌ | ಹಣೆಗೆ ಪಿಸ್ತೂಲ್ ಇಟ್ಟು 3.50 ಕೋಟಿ ಸುಲಿಗೆ : ಜಿ.ಪಂ. ಮಾಜಿ ಸದಸ್ಯ ಸೇರಿ ಮೂವರ ಬಂಧನ

Date:

Advertisements

ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು ತಮ್ಮ ಇಬ್ಬರು ಸ್ನೇಹಿತರೊಂದಿಗೆ 3.50 ಕೋಟಿ ರೂ. ನಗದು ಇಟ್ಟುಕೊಂಡು ನ.28 ರಂದು ರಾತ್ರಿ 8.50 ಸುಮಾರಿಗೆ ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಮೂಲಕ ಮಹಾರಾಷ್ಟ್ರದ ಫಂಡರಪುರಕ್ಕೆ ಹೋಗುತ್ತಿದ್ದರು. ಹಾಲು ಖರೀದಿಸಿದ ರೈತರಿಗೆ ಹಣ ನೀಡಲು ಹೋಗುತ್ತಿದ್ದರು. ಈ ವೇಳೆ ನಾಲ್ವರು ದ್ವಿಚಕ್ರ ವಾಹನಗಳಲ್ಲಿ ಬಂದು, ಕಾರು ಅಡ್ಡಗಟ್ಟಿ ತಮ್ಮನ್ನು ಗುಂಡುರೆಡ್ಡಿ, ವಿಜಯರೆಡ್ಡಿ ಎಂದು ಹೇಳಿಕೊಂಡು ಗುಂಡುರೆಡ್ಡಿ ಎಂಬುವರು ಪಿಸ್ತೂಲ್ ತೆಗೆದು ಗಾಳಿಯಲ್ಲಿ ಎರಡು ಗುಂಡುಗಳನ್ನು ಹಾರಿಸಿದ್ದಾರೆ.

ಬಳಿಕ ಉದ್ಯಮಿ ಉಮಾಶಂಕರ ಅವರ ಹಣೆಗೆ ಪಿಸ್ತೂಲ್ ಇಟ್ಟು ಅವರ ಬಳಿಯಿದ್ದ 3.50 ಕೋಟಿ ಹಣವನ್ನು ದೋಚಿದ್ದಾರೆ. ಈ ಬಗ್ಗೆ ಬುಧವಾರ ಬೆಳಗ್ಗೆ ಉಮಾಶಂಕರ ಅವರು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸುಲಿಗೆ, ಕೊಲೆಯತ್ನ, ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.

Advertisements

ಹುಮನಾಬಾದ್‌ ಡಿವೈಎಸ್ಪಿ ಜೆ.ಎಸ್.ನ್ಯಾಮೆಗೌಡರ್‌, ಮಂಠಾಳ ಸಿಪಿಐ ಕೃಷ್ಣಕುಮಾರ ಪಾಟೀಲ್‌, ಬಸವಕಲ್ಯಾಣ ಪಿಎಸ್‌ಐ ವಾಸೀಂ ಪಟೇಲ್‌ ನೇತ್ರತ್ವದಲ್ಲಿ ತಂಡ ರಚಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಪ್ರಕರಣ ಭೇದಿಸಿದ ತಂಡ 24 ಗಂಟೆಗಳಲ್ಲಿ ಆರೋಪಿಗಳಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಗುಂಡುರೆಡ್ಡಿ, ವಿಜಯ್ ರೆಡ್ಡಿ ಮತ್ತು ಸಂಜಯ ರೆಡ್ಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪರಾರಿಯಾಗಿರುವ ಒಬ್ಬನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಿಂದ 2.62 ಕೋಟಿ ರೂ. ಹಾಗೂ ಕೃತ್ಯಕ್ಕೆ ಬಳಸಿದ ಪಿಸ್ತೂಲ್ ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ‌ ಎಸ್.ಎಲ್. ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X