ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

Date:

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಸಿಐಡಿ ಎರಡು ಬಾರಿ ತನಿಖೆ ನಡೆಸಿ ಬಿ-ರಿಪೋರ್ಟ್ ಸಲ್ಲಿಸಿದೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ಪ್ರಕರಣಗಳನ್ನು ಸಿಐಡಿ ವಹಿಸಿಕೊಂಡು ವಿವರವಾದ ತನಿಖೆ ನಡೆಸಿದ ನಂತರ ಸಾಕ್ಷ್ಯಾಧಾರಗಳ ಕೊರತೆ ಕಂಡುಬಂದ ಕಾರಣಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಲಾಗಿದೆ.

- Advertisement -

2024ರ ಜೂನ್ 16ರಂದು ಹೊಳೆನರಸೀಪುರ ತಾಲೂಕಿನ ಘನ್ನಿಕಡ ಫಾರ್ಮ್‌ಹೌಸ್‌ನಲ್ಲಿ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 27 ವರ್ಷದ ಜೆಡಿಎಸ್ ಕಾರ್ಯಕರ್ತ ಚೇತನ್ ಕೆ.ಎಸ್ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 377, 342, 506 ಹಾಗೂ 34ರಡಿ ಎಫ್‌ಐಆರ್ ದಾಖಲಾಗಿ ಸೂರಜ್ ಅವರನ್ನು ಜೂನ್ 23ರಂದು ಬಂಧಿಸಲಾಗಿತ್ತು. ನಂತರ ಜುಲೈ 2024ರಲ್ಲಿ ಅವರು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದಾದ ನಂತರ ಸೂರಜ್ ಅವರ ಆಪ್ತ ಶಿವಕುಮಾರ್ ಎರಡು ಪ್ರತಿ-ದೂರುಗಳನ್ನು ಸಲ್ಲಿಸಿದ್ದರು. ಒಂದು, ದೂರುದಾರ ಚೇತನ್ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ್ದಾರೆ ಎಂಬ ಎಕ್ಸ್‌ಟಾರ್ಷನ್ ಪ್ರಕರಣ. ಇನ್ನೊಂದು, ತಮ್ಮ ಮೇಲೆಯೂ ಸೂರಜ್ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ದೂರು. ಎಲ್ಲ ಪ್ರಕರಣಗಳನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇಶದ ಬೃಹತ್ ಉದ್ಯಮ ಸಂಸ್ಥೆ ಟಾಟಾ ಸನ್ಸ್ ಬೋರ್ಡ್...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಸಿಐಡಿ ತನಿಖೆಯಲ್ಲಿ ಸುಲಿಗೆ ಪ್ರಕರಣ ಕಟ್ಟುಕತೆ ಎಂಬ ಸತ್ಯ ಹೊರಬಂದಿದ್ದು, ಸೂರಜ್ ತಮ್ಮ ಆಪ್ತ ಶಿವಕುಮಾರ್ ಅವರನ್ನು ಪ್ರೋತ್ಸಾಹಿಸಿ ದೂರುದಾರನನ್ನು ಹಣ ಕೇಳುವಂತೆ ಮಾಡಿ ರೇಪ್ ಕೇಸ್ ಸೆಟಲ್ ಮಾಡಿಸಲು ಯತ್ನಿಸಿದ್ದಾರೆ ಎಂದು ಬಿ-ರಿಪೋರ್ಟ್‌ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ದೂರುದಾರನ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ಈ ಪ್ರಕರಣದಲ್ಲಿ ಬಿ-ರಿಪೋರ್ಟ್ ಸಲ್ಲಿಸಲಾಗಿದೆ. ಶಿವಕುಮಾರ್ ಅವರು ಸಲ್ಲಿಸಿದ್ದ ಲೈಂಗಿಕ ದೌರ್ಜನ್ಯ ದೂರಿನಲ್ಲೂ ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ-ರಿಪೋರ್ಟ್ ಸಲ್ಲಿಸಲಾಗಿದೆ. ಆದರೆ ಮುಖ್ಯ ಪ್ರಕರಣದಲ್ಲಿ ಅಂದರೆ ಚೇತನ್ ಅವರ ದೂರಿನಲ್ಲಿ ಸಿಐಡಿ ಚಾರ್ಜ್‌ಶೀಟ್ ಸಲ್ಲಿಸಿದೆ. ಸಂತ್ರಸ್ತ ಹೇಳಿಕೆ, ಸಾಕ್ಷಿಗಳು ಮತ್ತು ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಆಧಾರದಲ್ಲಿ ಸೆಕ್ಷನ್ 377ರ ಅನ್ವಯ ಆರೋಪ ಧೃಡಪಟ್ಟಿದೆ.

ಸಿಐಡಿ ಡೆಪ್ಯೂಟಿ ಎಸ್‌ಪಿ ಬಿ. ಉಮೇಶ್ ನ್ಯಾಯಾಲಯದಲ್ಲಿ ಪ್ರೈಮಾ ಫೇಸಿ ಸಾಕ್ಷ್ಯ ಸಾಕಷ್ಟಿಲ್ಲವಾದ್ದರಿಂದ ಬಿ-ರಿಪೋರ್ಟ್ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ. ನ್ಯಾಯಾಲಯ ಈ ವರದಿಯನ್ನು ಸ್ವೀಕರಿಸುವುದೇ ಇಲ್ಲವೇ ನಿರ್ಧರಿಸಲಿದೆ. ದೂರುದಾರರು ಆಕ್ಷೇಪಣೆ ಸಲ್ಲಿಸುವ ಹಕ್ಕನ್ನು ಹೊಂದಿದ್ದು, ಈ ಬೆಳವಣಿಗೆಯಿಂದ ಸೂರಜ್ ರೇವಣ್ಣಗೆ ಸುಲಿಗೆ ಮತ್ತು ಶಿವಕುಮಾರ್ ಅವರ ದೂರು ಪ್ರಕರಣಗಳಲ್ಲಿ ದೊಡ್ಡ ರಿಲೀಫ್ ಸಿಕ್ಕಿದೆ. ಮುಖ್ಯ ಪ್ರಕರಣದಲ್ಲಿ ಮಾತ್ರ ಚಾರ್ಜ್‌ಶೀಟ್ ಉಳಿದು ನ್ಯಾಯಾಲಯದ ವಿಚಾರಣೆ ಮುಂದುವರಿಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಫೀಜ್‌ಪೇಟ್‌ | ಮಹಿಳೆ ಮೇಲೆ ಹಲ್ಲೆಗೈದು, ಕೂದಲು ಹಿಡಿದು ಎಳೆದಾಡಿದ ಪೇದೆ; ಶಿಸ್ತು ಕ್ರಮಕ್ಕೆ ಶಿಫಾರಸು

ತೆಲಂಗಾಣದ ಹಫೀಜ್‌ಪೇಟ್ ರೈಲು ನಿಲ್ದಾಣದಲ್ಲಿ ಮಹಿಳೆಯೊಬ್ಬರ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ...

ಐದು ದಿನಗಳಲ್ಲಿ 12 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ತಮಿಳು ಸರ್ಕಾರ–ರಾಜಭವನ ಸಂಬಂಧದಲ್ಲಿ ಹೊಸ ತಿರುವು

ಡಿಎಂಕೆ ಆಡಳಿತವಿದ್ದಾಗ ಮಸೂದೆಗಳು, ವಿಶ್ವವಿದ್ಯಾಲಯಗಳು ಹಾಗೂ ರಾಜ್ಯಪಾಲರ ಅಧಿಕಾರದ ವಿಚಾರದಲ್ಲಿ ನಿರಂತರ...

ರಾಹುಲ್‌ ಇಂದೋರ್‌ ಸಮಾವೇಶಕ್ಕೆ 29 ಭದ್ರತಾ ಷರತ್ತು: ಕಾಂಗ್ರೆಸ್ ಆಕ್ರೋಶ

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ‘ಛಾತ್ರೋಂ ಕಿ...

ಬಾಗಲಕೋಟೆ | ಕರ್ತವ್ಯಲೋಪ ಆರೋಪದಡಿ ಡಿಎಚ್‌ಒ ಡಾ. ರಾಜಕುಮಾರ್ ಯರಗಲ್ ಅಮಾನತು

ಕರ್ತವ್ಯಲೋಪ, ಆಡಳಿತಾತ್ಮಕ ನಿರ್ಲಕ್ಷ್ಯ ಹಾಗೂ ಇಲಾಖೆಯ ಸೂಚನೆಗಳನ್ನು ಪಾಲಿಸದೆ ಕಾರ್ಯನಿರ್ವಹಿಸಿದ ಆರೋಪದ...