ಕಾವೇರಿ ಹೋರಾಟದಲ್ಲಿ ಬಿಜೆಪಿ ಸಂಸದರು ನನಗೆ ಬೆಂಬಲ ನೀಡಿಲ್ಲ: ಬಿಜೆಪಿ ವಿರುದ್ಧ ಗುಡುಗಿದ ಮಾಜಿ ಪ್ರಧಾನಿ ದೇವೇಗೌಡ

Date:

Advertisements

ಲೋಕಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಇತ್ತ ಬಿಜೆಪಿ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕರ್ನಾಟಕದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ತುಮಕೂರಿನ ಕೊರಟಗೆರೆಯಲ್ಲಿ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಸಭೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಬಿಜೆಪಿ ವಿರುದ್ಧವೇ ಗುಡುಗಿದ ಘಟನೆ ನಡೆದಿದೆ.

ಹೌದು, ಈ ಮೈತ್ರಿ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಅವರು ಕಾವೇರಿ ಹೋರಾಟಕ್ಕೆ ಬಿಜೆಪಿಯ 17 ಜನ ಸಂಸದರು ನನಗೆ ಬೆಂಬಲ ನೀಡಿರಲಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಸದ್ಯ ದೇವೇಗೌಡರ ಈ ಹೇಳಿಕೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

2024ರ ಲೋಕಸಭಾ ಚುನಾವಣೆಗಾಗಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್, ಮೈತ್ರಿ ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದೆ. ಇತ್ತೀಚೆಗೆ ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲೂ ಕೂಡ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಭಾಷಣ ಮಾಡಿ, ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು.

Advertisements

ಇದೀಗ, ತುಮಕೂರಿನ ಕೊರಟಗೆರೆಯಲ್ಲಿ ಸೋಮವಾರ ನಡೆದ ಬಿಜೆಪಿ-ಜೆಡಿಎಸ್ ಮೈತ್ರಿ ಸಭೆಯಲ್ಲಿ ಕಾವೇರಿ ಹೋರಾಟದ ದಿನಗಳನ್ನ ನೆನಪಿಸಿಕೊಂಡ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಬಿಜೆಪಿಯ ವಿರುದ್ಧವೇ ಹೇಳಿಕೆ ನೀಡಿದ್ದಾರೆ.

“’ಈ ಹಿಂದೆ ಪಾರ್ಲಿಮೆಂಟಿನಲ್ಲಿ ಕಾವೇರಿ ಹೋರಾಟಕ್ಕೆ ಬಿಜೆಪಿಯ 17 ಜನ ಸಂಸದರು ನನಗೆ ಬೆಂಬಲ ನೀಡಿರಲಿಲ್ಲ” ಎಂದು ಬಿಜೆಪಿ ವೇದಿಕೆಯಲ್ಲಿ ಬಿಜೆಪಿ ಈ ಹಿಂದೆ ಕಾವೇರಿ ಹೋರಾಟಕ್ಕೆ ಬೆಂಬಲ ನೀಡದ್ದನ್ನು ದೇವೇಗೌಡರು ತಿಳಿಸಿದ್ದಾರೆ.

ಮುಂದುವರೆದು ಮಾತನಾಡಿದ ಅವರು, “ಪಾರ್ಲಿಮೆಂಟ್‌ನಲ್ಲಿ ಒಬ್ಬ ದೇವೇಗೌಡ. 17 ಜನ ಬಿಜೆಪಿ ಸಂಸದರು ಇದ್ದರು. 12 ಜನ ಕಾಂಗ್ರೆಸ್ ಸಂಸದರು ಕೂಡ ಇದ್ದರು. ಕಾಂಗ್ರೆಸ್‌ನ 12ರಲ್ಲಿ ನಾಲ್ಕು‌ ಜನ ಮಂತ್ರಿಗಳು ಇದ್ದರು. ಮಲ್ಲಿಕಾರ್ಜುನ ಖರ್ಗೆ, ಎಸ್.ಎಂ ಕೃಷ್ಣ, ವೀರಪ್ಪ ಮೊಯ್ಲಿ, ಕೆ.ಎಚ್.ಮುನಿಯಪ್ಪ ಇವರೆಲ್ಲ ಇದ್ದರೂ ಕೂಡ ಒಬ್ಬ ಏಕಾಂಗಿ ದೇವೇಗೌಡ. ಆದರೂ ಹೋರಾಟ ನಡೆಸಿದೆ” ಎಂದು ಹೇಳಿದ್ದಾರೆ.

“ಅಂದಿನ ಮನಮೋಹನ್ ಸಿಂಗ್ ಪ್ರಧಾನ ಮಂತ್ರಿ ಅವರು, ನಾವೇನು ಮಾಡೋಣ ದೇವೇಗೌಡ್ರೆ, 40 ಜನ ತಮಿಳುನಾಡಿನ ಎಂಪಿಗಳಿದ್ದಾರೆ‌. ನನ್ನ ಸರ್ಕಾರ ಹೋಗುತ್ತದೆ. ನೀವು ಕೋರ್ಟ್‌ಗೆ ಹೋಗಿ ಅಂದಿದ್ದರು‌” ಎಂದು ಹಿಂದಿನ ಘಟನೆಯನ್ನು ನೆನಪಿಸಿಕೊಂಡರು.

ಈ ಸುದ್ದಿ ಓದಿದ್ದೀರಾ? ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

“ಅಂದಿನ ನಾಲ್ಕು ಜನ ಮಂತ್ರಿಗಳೂ ಬದುಕಿದ್ದಾರೆ. ಬಿಜೆಪಿಯ ಅನಂತ್ ಕುಮಾರ್ ತೀರಿ ಹೋಗಿದ್ದಾರೆ. ನಾನು ಅನಂತ್ ಕುಮಾರ್ ಅವರಲ್ಲಿ, ನೀವು 17 ಜನ ಎಂಪಿಗಳಿದ್ದೀರಿ. ನಾವೆಲ್ಲಾ ಒಟ್ಟಾಗಿ ಹೋರಾಟ ಮಾಡೋಣ ಎಂದಿದ್ದೆ‌. ಅದಕ್ಕೆ ನಾಳೆ ನಮ್ಮ ಪಾರ್ಟಿ ಮೀಟಿಂಗ್‌ನಲ್ಲಿ ಕೇಳಿ, ನಾವು ಬೆಂಬಲ‌ ಕೊಡಬೇಕು ಎಂದು ವಾಜಪೇಯಿಯವರು ಹೇಳಿದರೆ ಕೊಡುತ್ತೇವೆ ಅಂದಿದ್ದರು. ಆದರೆ, ಅವರು ಮಾರನೆಯ ದಿನ ಬೆಳಗ್ಗೆ ಬರಲೇ ಇಲ್ಲ” ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ತಿಳಿಸಿದ್ದಾರೆ.

ಈ ಹೇಳಿಕೆ ನೀಡುವ ಮೂಲಕ ಬಿಜೆಪಿ ಸಭೆಯಲ್ಲೇ, ಕಾವೇರಿ ಹೋರಾಟಕ್ಕೆ ಬಿಜೆಪಿ ಸಂಸದರು ಬೆಂಬಲ ನೀಡಿರಲಿಲ್ಲ ಎಂದು ಅಸಮಾಧಾನ ತೋಡಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X