ಬಿಎಂಟಿಸಿ | ವಜ್ರ ಬಸ್‌ಗೂ ರಿಯಾಯಿತಿ ವಿದ್ಯಾರ್ಥಿ ಪಾಸ್ ವಿತರಣೆ

Date:

Advertisements

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ವಜ್ರ ಬಸ್‌ಗಳಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಮಾಸಿಕ ಬಸ್ ಪಾಸ್ ವಿತರಿಸುತ್ತಿದೆ. ವಜ್ರ ಮಾಸಿಕ ಬಸ್ ಪಾಸ್ ದರ ₹1,800 ಇದ್ದು, ವಿದ್ಯಾರ್ಥಿಗಳಿಗೆ ₹1,200ಗೆ ಪಾಸ್ ವಿತರಿಸಲು ಸಂಸ್ಥೆ ನಿರ್ಧರಿಸಿದೆ.

ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸ್‌ಗಳನ್ನು ವಾಸಸ್ಥಳದಿಂದ ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕ್ರಮ ಕೈಗೊಳ್ಳಲಾಗಿದ್ದು, ಮಾಸಿಕ ಬಸ್ ಪಾಸ್ ಪಡೆಯುವ ವಿದ್ಯಾರ್ಥಿಗಳು ವಜ್ರ ಸೇರಿದಂತೆ ಸಾಮಾನ್ಯ ಬಸ್‌ಗಳಲ್ಲಿ ಅನಿಯಮಿತವಾಗಿ ಪ್ರಯಾಣಿಸಬಹುದು ಎಂದು ಹೇಳಿದೆ.

ವಜ್ರ ವಿದ್ಯಾರ್ಥಿ ಪಾಸ್ ಪಡೆಯುವ ವಿಧಾನ

Advertisements

ಸಂಸ್ಥೆಯ ವೆಬ್‌ಸೈಟ್‌ www.mybmtc.karnataka.gov.in ನಲ್ಲಿ ವಿದ್ಯಾರ್ಥಿ ಬಸ್‌ ಪಾಸ್‌ ಅರ್ಜಿಯು ಲಭ್ಯವಿದೆ. ಸದರಿ ಅರ್ಜಿಯನ್ನು ಭರ್ತಿ ಮಾಡಿ, ಸಂಬಂಧಿಸಿದ ಶಾಲಾ/ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಬೇಕು. ನಂತರ ದೃಢೀಕರಿಸಿದ ಅರ್ಜಿಯನ್ನು ಸಂಸ್ಥೆಯ ಕೆಳಕಂಡ ಬಸ್‌ ನಿಲ್ದಾಣದಲ್ಲಿ ಸಲ್ಲಿಸಿ, ಪಾಸಿನ ಮೊತ್ತವನ್ನು ಪಾವತಿಸಿ, ವಜ್ರ ವಿದ್ಯಾರ್ಥಿ ಪಾಸ್‌ ಅನ್ನು ಪಡೆಯಬಹುದು ಎಂದು ಸಂಸ್ಥೆ ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಎಲ್ಲ ಆಸ್ತಿಗಳನ್ನು ಡಿಜಿಟಲೀಕರಣ ಮಾಡಿ; ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಎಲ್ಲೆಲ್ಲಿ ಬಸ್ ಪಾಸ್ ಪಡೆಯಬಹುದು?

ಕೆಂಪೇಗೌಡ ಬಸ್ ನಿಲ್ದಾಣ, ಬನಶಂಕರಿ ಟಿಟಿಎಂಸಿ, ವೈಟ್ ಫೀಲ್ಡ್ ಟಿಟಿಎಂಸಿ, ದೊಮ್ಮಲೂರು ಟಿಟಿಎಂಸಿ, ಹೆಬ್ಬಾಳ, ಕೆಂಗೇರಿ ಟಿಟಿಎಂಸಿ, ಶಿವಾಜಿನಗರ ಬಸ್ ನಿಲ್ದಾಣ, ಕಾಡುಗೋಡಿ ಬಸ್ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿ, ಯಲಹಂಕ ಹಳೆ ಬಸ್ ನಿಲ್ದಾಣ, ಶಾಂತಿನಗರ ಟಿಟಿಎಂಸಿ, ಸರ್ಜಾಪುರ ಬಸ್ ನಿಲ್ದಾಣಗಳಲ್ಲಿ ಬಸ್‌ ಪಾಸ್‌ ಪಡೆಯಬಹುದಾಗಿದೆ ಎಂದು ಬಿಎಂಟಿಸಿ ಪ್ರಕಟಣೆ ಮೂಲಕ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X