ಕಾವೇರಿ ವಿಚಾರ | ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ: ಡಿ ಕೆ ಶಿವಕುಮಾರ್

Date:

Advertisements

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಾಧಿಕಾರದ ತೀರ್ಮಾನದ ವಿಚಾರವಾಗಿ ಮಾಧ್ಯಮಗಳು ರೇಸ್ ಕೋರ್ಸ್ ರಸ್ತೆಯ ತಾಜ್ ವೆಸ್ಟ್ ಎಂಡ್ ಬಳಿ ಶುಕ್ರವಾರ ಪ್ರಶ್ನಿಸಿದಾಗ ಉತ್ತರಿಸಿದರು.

“ಕಾವೇರಿ ನೀರಿನ ವಿಚಾರವಾಗಿ ಮುಂದೆ ಏನು ಮಾಡಬೇಕು ಎಂದು ಅನಿಲ್ ದಿವಾನ್, ಕಾತರಕಿ ಸೇರಿದಂತೆ ಕಾನೂನು ತಜ್ಞರ ತಂಡ ಜತೆ ಚರ್ಚೆ ಮಾಡಿದ್ದು, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಮಾತುಕತೆ ನಡೆಸುತ್ತೇವೆ” ಎಂದರು.

Advertisements

ಮುಡಾ ವಿಚಾರದಲ್ಲಿ ರಾಜಕೀಯ

ಮೂಡಾ ಹಗರಣದ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಅವರ ಆರೋಪದಲ್ಲಿ ಹುರುಳಿಲ್ಲ. ಸಮಯ ಬಂದಾಗ ನಾವು ಏನು ಉತ್ತರ ನೀಡಬೇಕೋ ನೀಡುತ್ತೇವೆ. ಮುಡಾದಲ್ಲಿ ಏನೇ ಹಗರಣ ನಡೆದಿದ್ದರೂ ಅದು ಬಿಜೆಪಿ ಅವಧಿಯಲ್ಲಿ ನಡೆದಿದೆ. ಈ ರಾಜಕೀಯ ಆರೋಪಗಳನ್ನು ನಾವು ಸಮರ್ಥವಾಗಿ ಎದುರಿಸುತ್ತೇವೆ” ಎಂದು ತಿಳಿಸಿದರು.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಇ.ಡಿ ವಿಚಾರಣೆ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ವಾಲ್ಮೀಕಿ ನಿಗಮದ ಹಗರಣದ ಕುರಿತು ಎಸ್ಐಟಿ ವಿಚಾರಣೆ ನಡೆಸುತ್ತಿದೆ. ಇ.ಡಿ ವಿಚಾರಣೆ ಅವಶ್ಯಕತೆ ಇರಲಿಲ್ಲ. ಅವರ ತನಿಖೆ ಬಗ್ಗೆ ತಿಳಿದು ನಂತರ ಮಾತನಾಡುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X