ಜನವರಿ 5 ರಿಂದ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ

Date:

Advertisements

2024ನೇ ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ ಜನವರಿ 5 ರಿಂದ 7ರವರೆಗೆ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ನಡೆಯಲಿದೆ.

ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳವನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ಆಯೋಜಿಸಿದೆ.

ಸ್ವಾವಲಂಬನೆ, ಗ್ರಾಮೀಣಾಭಿವೃದ್ಧಿ ಮತ್ತು ಪ್ರಕೃತಿ ಸಂರಕ್ಷಣೆಗೆ ಒತ್ತು ನೀಡಲು 2004 ರಲ್ಲಿಯೇ ಪ್ರತ್ಯೇಕ ಸಾವಯವ ಕೃಷಿ ನೀತಿಯನ್ನು ಹೊರತಂದು ರಾಜ್ಯಾದ್ಯಂತ ಹಲವಾರು ಸಾವಯವ ಕೃಷಿ ಉತ್ತೇಜನಾ ಕಾರ್ಯಕ್ರಮಗಳನ್ನು ಕರ್ನಾಟಕ ಸರ್ಕಾರ ಪ್ರಾರಂಭಿಸಿದೆ. ಸುಮಾರು 2 ದಶಕಗಳಿಂದ ಉತ್ತಮ ಪರ್ಯಾಯ ಪದ್ದತಿಯಾಗಿ ಉತ್ತೇಜಿಸಲಾಗುತ್ತಿದೆ.

Advertisements

ಕಳೆದ ದಶಕದಲ್ಲಿ ಉಂಟಾಗಿದ್ದ ಬರಗಾಲದಿಂದ ರಾಜ್ಯ ಸರ್ಕಾರ ಪರ್ಯಾಯ ಮಾರ್ಗಗಳ ಬಗ್ಗೆ ಚಿಂತನೆ ನಡೆಸಿ, ಸಿರಿಧಾನ್ಯಗಳಿಗೆ ಹೆಚ್ಚಿನ ಒತ್ತು ನೀಡಿ 2017ರಲ್ಲಿ ಪರಿಷ್ಕೃತ ಸಾವಯವ ನೀತಿಯನ್ನು ಹೊರತಂದಿದೆ. ಅಂದಿನಿಂದ, ರಾಜ್ಯ ಸರ್ಕಾರವು ಸಾಂಪ್ರದಾಯಿಕ ಮತ್ತು ಸಾವಯವ ಪದ್ದತಿಯಲ್ಲಿ ಬೆಳೆದ ಸಿರಿಧಾನ್ಯಗಳನ್ನು ‘ಪ್ರಜ್ಞಾವಂತ ಆಹಾರ’ವಾಗಿ ಉತ್ತೇಜಿಸುತ್ತಿದೆ.

ಸಿರಿಧಾನ್ಯದ ಪ್ರಮುಖ ಉದ್ದೇಶ

  • ಸಿರಿಧಾನ್ಯಗಳು ಬಹು ಉಪಯೋಗಗಳನ್ನು (ಆಹಾರ, ಮೇವು, ಇಂಧನ) ಹೊಂದಿದ್ದು, ಸಾಮಾನ್ಯವಾಗಿ ಬರಗಾಲದ ಸಮಯದಲ್ಲಿ ಕೊನೆಯ ಬೆಳೆಯಾಗಿ ಸಹ ರೈತರಿಗೆ ಉತ್ತಮ ಅಪಾಯ ನಿರ್ವಹಣೆ ತಂತ್ರವಾಗಿವೆ.
  • ಸಿರಿಧಾನ್ಯಗಳು ಪೌಷ್ಟಿಕಾಂಶ ಮತ್ತು ಆರೋಗ್ಯ ಸಮಸ್ಯೆಗಳನ್ನು (ಕಬ್ಬಿಣ, ಸತು, ಫೋಲಿಕ್ ಆಮ್ಲ, ಕ್ಯಾಲ್ಸಿಯಂ ಕೊರತೆ, ಮಧುಮೇಹ ಮತ್ತು ಇತರೆ) ನಿವಾರಿಸುವ ಶಕ್ತಿಯನ್ನು ಹೊಂದಿವೆ.
  • ಸಿರಿಧಾನ್ಯಗಳು ಕಡಿಮೆ ನೀರಿನ ಹೆಜ್ಜೆಗುರುತನ್ನು ಹೊಂದಿರುವುದರಿಂದ ಹಾಗೂ ಅತ್ಯಂತ ಶುಷ್ಕ ವಾತಾವರಣದಲ್ಲಿಯೂ ಬದುಕಬಲ್ಲವು ಮತ್ತು ಹವಾಮಾನ ಬದಲಾವಣೆಯನ್ನು ನಿಭಾಯಿಸುವಲ್ಲಿ ಶಕ್ತಿಯನ್ನು ಹೊಂದಿವೆ.
  • ಸಾವಯವ ಮತ್ತು ಸಿರಿಧಾನ್ಯಗಳನ್ನು “ಭವಿಷ್ಯದ ಪೀಳಿಗೆಯನ್ನು ಪೋಷಿಸುವ ಸಾಂಪ್ರದಾಯಿಕ ಪ್ರಜ್ಞಾವಂತ ಆಹಾರ” ಎಂದು ಜನಪ್ರಿಯಗೊಳಿಸುವುದು ರಾಜ್ಯ ಸರ್ಕಾರದ ಧ್ಯೇಯೋದ್ದೇಶವಾಗಿದೆ.

ಸಿರಿಧಾನ್ಯ ಪ್ರದೇಶ 15.61 ಲಕ್ಷ ಹೆಕ್ಟೇರ್

ಪ್ರಸ್ತುತ ರಾಜ್ಯದ ಒಟ್ಟು ಸಿರಿಧಾನ್ಯ ಪ್ರದೇಶ 15.61 ಲಕ್ಷ ಹೆಕ್ಟೇರ್ ಇದೆ. ಪ್ರಮುಖ ಸಿರಿಧಾನ್ಯಗಳು 15.26 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆಯಲಾಗುತ್ತದೆ. ಈ ಪೈಕಿ ರಾಗಿ-8.28 ಲಕ್ಷ ಹೆಕ್ಟೇರ್, ಜೋಳ 5.67 ಲಕ್ಷ ಹೆಕ್ಟೇರ್ ಮತ್ತು ಸಜ್ಜೆ 1.31 ಲಕ್ಷ ಹೆಕ್ಟೇರ್ ಹಾಗೂ ಹಾರಕ, ನವಣೆ, ಸಾಮೆ, ಊದಲು, ಕೊರಲು, ಬರಗು ಕಿರುಧಾನ್ಯ/ಸಿರಿಧಾನ್ಯಗಳು 0.35 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗುತ್ತದೆ.

ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಸಂಪರ್ಕವನ್ನು ಕಲ್ಪಿಸಲು ಮತ್ತು ರೈತರು, ಖರೀದಿದಾರರು, ಮಾರಾಟಗಾರರು, ರಫ್ತುದಾರರಿಗೆ ವಿಫುಲ ಅವಕಾಶಗಳನ್ನು ಒದಗಿಸಲು 2017, 2018, 2019 ಮತ್ತು 2023 ರಲ್ಲಿ ಆಯೋಜಿಸಲಾಗಿದ್ದ ಸಾವಯವ ಮತ್ತು ಸಿರಿಧಾನ್ಯಗಳ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವಾಣಿಜ್ಯ ಮೇಳವು ಭಾಗವಹಿಸಿದ ಹೆಚ್ಚಿನ ಸಂಖ್ಯೆಯ ಪಾಲುದಾರರನ್ನು ಆಕರ್ಷಿಸಿ, ಆಸಕ್ತಿ ಹುಟ್ಟು ಹಾಕುವ ಮೂಲಕ ಉತ್ತಮ ಯಶಸ್ಸನ್ನು ಕಂಡಿದೆ. ಇದೇ ಆಸಕ್ತಿಯನ್ನು ಉಳಿಸಿ ಮುಂದಿನ ಮಟ್ಟಕ್ಕೆ ಕೊಂಡೊಯ್ಯಲು ಸಿರಿಧಾನ್ಯ ಮತ್ತು ಸಾವಯವ ಅಂತಾರಾಷ್ಟ್ರೀಯ ವಾಣಿಜ್ಯ ಮೇಳ 2024ನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆ ಆಯೋಜಿಸಿದೆ.

ಈ ಸುದ್ದಿ ಓದಿದ್ದೀರಾ? ಕನ್ನಡಕ್ಕೆ ಮತ್ತೊಂದು ಡಿಜಿಟಲ್ ಮಾಧ್ಯಮ: ‘ಕನ್ನಡ ಪ್ಲಾನೆಟ್’ ವೆಬ್‌ಸೈಟ್‌ ಲೋಕಾರ್ಪಣೆ

ಮೇಳ ಆಯೋಜನೆಯಲ್ಲಿ ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮ ನಿಯಮಿತ (ಕೆಪೆಕ್) ಸಂಸ್ಥೆಯು ಮೇಳ ಆಯೋಜನೆಯ ನೋಡಲ್ ಏಜೆನ್ಸಿಯಾಗಿರುತ್ತದೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಜಿಐಜೆಡ್‌ (GIZ), ಸಿಎಫ್‌ಟಿಆರ್‌ಐ (CFTRI), (ಐಐಎಮ್‌ಆರ್‌) IIMR ಸಂಶೋಧನಾ ಸಂಸ್ಥೆಗಳು ಮೇಳದ ಆಯೋಜನೆಯಲ್ಲಿ ಸಹಭಾಗಿಗಳಾಗಿವೆ.

ಮೂರು ದಿನದ ಮೇಳದಲ್ಲಿ ಏನಿರಲಿದೆ?

  • ಸಾವಯವ ಮತ್ತು ಸಿರಿಧಾನ್ಯಗಳ ಸಂಸ್ಥೆಗಳು, ಮಾರುಕಟ್ಟೆದಾರರು, ರಫ್ತುದಾರರು, ಚಿಲ್ಲರೆ ಮಾರಾಟಗಾರರು, ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಸಾವಯವ ಪರಿಕರಗಳ ಸಂಸ್ಥೆಗಳು, ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ವಸ್ತು ಪ್ರದರ್ಶನದಲ್ಲಿ ಭಾಗವಹಿಸುತ್ತಿವೆ.
  • ಮೇಳದಲ್ಲಿ ಉತ್ತರ ಪ್ರದೇಶ, ಪಂಜಾಬ್, ಆಂಧ್ರ ಪ್ರದೇಶ, ಮಹಾರಾಷ್ಟ್ರ, ಒಡಿಸ್ಸಾ, ತಮಿಳುನಾಡು ಮತ್ತು ಮೇಘಾಲಯ ಮುಂತಾದ ರಾಜ್ಯಗಳು ಮೇಳದಲ್ಲಿ ಭಾಗವಹಿಸುತ್ತಿವೆ. ವಸ್ತು ಪ್ರದರ್ಶನದಲ್ಲಿ 281 ಮಳಿಗೆಗಳು ಇದ್ದು ಈಗಾಗಲೇ 248 ಮಳಿಗೆಗಳು ನೋಂದಣಿಯಾಗಿವೆ.
  • ಕರ್ನಾಟಕದ ಸಿರಿಧಾನ್ಯ ಮತ್ತು ಸಾವಯವ ಉತ್ಪನ್ನಗಳನ್ನು “Millets beyond boarders; Karnataka welcomes the world” ಎಂಬ ಶೀರ್ಷಿಕೆಯೊಂದಿಗೆ ಪ್ರದರ್ಶಿಸಲಾಗುತ್ತದೆ.
  • ಸಿರಿಧಾನ್ಯ / ಸಾವಯವ ರೈತ ಗುಂಪುಗಳು, ಪ್ರಾಂತೀಯ ಒಕ್ಕೂಟಗಳು, ಹಾಗೆಯೇ ರಾಜ್ಯ ಮತ್ತು ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಂಸ್ಥೆಗಳು ಸೇರಿದಂತೆ ಒಟ್ಟು 81 ಮಳಿಗೆಗಳು ಇರುತ್ತವೆ.
  • ಉತ್ಪಾದಕರು-ಮಾರುಕಟ್ಟೆಗಾರರ ಸಭೆ ರಾಜ್ಯದ ಸಾವಯವ ಮತ್ತು ಸಿರಿಧಾನ್ಯಗಳ – ಉತ್ಪನ್ನಗಳಿಗೆ ಮಾರುಕಟ್ಟೆ ಸಂಪರ್ಕ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮೇಳದಲ್ಲಿ ಉತ್ಪಾದಕರ- ಮಾರುಕಟ್ಟೆದಾರರ ಸಮಾಲೋಚನಾ ಸಭೆಗಳನ್ನು ಏರ್ಪಡಿಸಲಾಗುತ್ತದೆ.
  • ಅಂತಾರಾಷ್ಟ್ರೀಯ ಸಮ್ಮೇಳನವನ್ನು ಜಿಐಜೆಡ್‌ (GIZ), ಐಐಎಮ್‌ಆರ್‌ (IIMR) ಹಾಗೂ ಐಸಿಸಿಓಎ (ICCOA) & B “Transformation into organic and agroecology- based agriculture in Karnataka” ಎಂಬ ಶೀರ್ಷಿಕೆಯಡಿ ಸಮ್ಮೇಳನದಲ್ಲಿ 35ಕ್ಕಿಂತ ಹೆಚ್ಚು ಪ್ರಖ್ಯಾತ ಉಪನ್ಯಾಸಕರು ಮಾಹಿತಿ ನೀಡಲಿದ್ದಾರೆ. ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರು/ವಿದ್ಯಾರ್ಥಿಗಳು ಹಾಗೂ ಇತರ ಪಾಲುದಾರರು ಭಾಗವಹಿಸಲಿದ್ದಾರೆ.
  • ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಬೆಳೆಯುವ ರೈತರಿಗಾಗಿ ಕನ್ನಡ ಭಾಷೆಯಲ್ಲಿ ಮೂರು ದಿನಗಳ ರೈತರ ಕಾರ್ಯಾಗಾರವನ್ನು ಕೃ.ವಿ.ವಿ ಸಂಶೋಧನಾ ವಿಭಾಗದಿಂದ ಆಯೋಜಿಸಲಾಗುತ್ತದೆ.
  • ಕಾರ್ಯಾಗಾರದಲ್ಲಿ ಸಾವಯವ ಪದ್ಧತಿ, ಸಾವಯವ ಮಾರುಕಟ್ಟೆ ಪ್ರವೃತ್ತಿ, ಬೇಡಿಕೆ, ಸಾವಯವ ಪ್ರಮಾಣೀಕರಣ ಪ್ರಕ್ರಿಯೆ, ನೈಸರ್ಗಿಕ ಕೃಷಿ, ಸಿರಿಧಾನ್ಯಗಳ ಬಗ್ಗೆ ವಿಷಯ ತಜ್ಞರು ಉಪನ್ಯಾಸ ನೀಡಲಿದ್ದಾರೆ.
  • ಮೂರು ದಿನಗಳ ಮೇಳದ ಅವಧಿಯಲ್ಲಿ ಸುಮಾರು 10 ವಿವಿಧ ಸಿರಿಧಾನ್ಯ ಹೋಟಲ್/ ರೆಸ್ಟೋರೆಂಟ್‌ಗಳ ಮಳಿಗೆಗಳಲ್ಲಿ ವೈವಿಧ್ಯಮಯ ಮತ್ತು ರುಚಿಕರವಾದ ಸಿರಿಧಾನ್ಯಗಳ ಊಟ ಮತ್ತು ಉಪಾಹಾರಗಳನ್ನು ಸವಿಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಮೇಳದ ಪ್ರಚಾರದಲ್ಲಿ ಪೂರ್ವಬಾವಿ ಕಾರ್ಯಕ್ರಮ

  • ಸಿರಿಧಾನ್ಯ ನಡಿಗೆ, ಸಿರಿಧಾನ್ಯ ಅಡುಗೆ ಸ್ಪರ್ಧೆ, ಕ್ರೀಡಾಕೂಟ ಸೇರಿದಂತೆ ಸಿರಿಧಾನ್ಯ ಮೇಳವನ್ನು ಜಿಲ್ಲಾ ಮಟ್ಟದಲ್ಲಿ ಆಯೋಜಿಸಲಾಗಿದೆ.
  • ಗ್ರಾಹಕರಲ್ಲಿ ಅರಿವು ಮೂಡಿಸುವ ಉದ್ದೇಶದೊಂದಿಗೆ 2023ರ ಡಿ.17 ರಂದು ಕಬ್ಬನ್ ಪಾರ್ಕ್‌ನಲ್ಲಿ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ. ನಟಿ ಸಪ್ತಮಿಗೌಡ ಇವರು ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಿದ್ದು, ಕಾರ್ಯಕ್ರಮದಲ್ಲಿ 2500 ಕ್ಕೂ ಹೆಚ್ಚು ಜನರು ಭಾಗವಹಿಸಿದ್ದಾರೆ.
  • 2022-23 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯದಿಂದ ₹36 ಕೋಟಿ ಮೌಲ್ಯದ 7,764 ಎಮ್‌ಟಿ ಪ್ರಮಾಣದ ಸಿರಿಧಾನ್ಯ ಮತ್ತು ಸಿರಿಧಾನ್ಯ ಮೌಲ್ಯವರ್ಧಿತ ಉತ್ಪನ್ನಗಳನ್ನು ರಫ್ತು ಮಾಡಲಾಗಿದೆ.
  • ಅಮೇರಿಕಾ, ಆಸ್ಟ್ರೇಲಿಯ, ಯುಎಇ, ಕೆನಡಾ, ಕತಾರ್, ಥೈಲ್ಯಾಂಡ್, ಸಿಂಗಾಪುರ ಮುಂತಾದವು ಸಿರಿಧಾನ್ಯಗಳ ಪ್ರಮುಖ ರಫ್ತು ತಾಣಗಳಾಗಿವೆ. ರಫ್ತು ಮಾಡಲಾಗುತ್ತಿರುವ ಜೋಳ, ಸಜ್ಜೆ, ರಾಗಿ ಮತ್ತು ಇತರ ಸಿರಿಧಾನ್ಯಗಳನ್ನು ಪ್ರಮುಖವಾಗಿ ಬಳ್ಳಾರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಹಾವೇರಿ ಮತ್ತು ಚಿತ್ರದುರ್ಗ ಜಿಲ್ಲೆಗಳಿಂದ ಪಡೆಯಲಾಗುತ್ತಿದೆ.
  • ಸಿರಿಧಾನ್ಯಗಳ ಪೈಕಿ ಪ್ರಸ್ತುತ ಪೌಷ್ಟಿಕಭರಿತ ಹಾಗೂ ಗ್ಲುಟನ್ ಮುಕ್ತ ಸಜ್ಜೆ ಹಿಟ್ಟಿಗೆ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ಬೇಡಿಕೆಯಿದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಪರಿಗಣಿಸಲಾಗಿದೆ. ಅಲ್ಲದೇ ಗೋಧಿ ಹಿಟ್ಟಿಗೆ ಪರ್ಯಾಯವಾಗಿ ಇದನ್ನು ಪ್ರಪಂಚದಾದ್ಯಂತ ಬಳಸಲಾಗುತ್ತದೆ. ಸಜ್ಜೆಯ ಜೊತೆಗೆ ಜೋಳ ಮತ್ತು ರಾಗಿಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X