5 ಕೋಟಿ ವಂಚನೆ ಪ್ರಕರಣ: 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ಚೈತ್ರಾ ಕುಂದಾಪುರ

Date:

Advertisements

ವಿಧಾನ ಸಭೆ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸಹಿತ ಆರು ಮಂದಿಗೆ 14 ದಿನಗಳ ಕಾಲ ಸಿಸಿಬಿ ಕಸ್ಟಡಿಗೆ ನೀಡಲು ಬೆಂಗಳೂರಿನ ಎಸಿಎಂಎಂ ಕೋರ್ಟ್‌ ಆದೇಶಿಸಿದೆ.

ಹಿಂದುತ್ವದ ಕುರಿತು ಉಗ್ರ ಭಾಷಣದ ಮೂಲಕ ಸಾಮಾಜಿಕ ಸಾಮರಸ್ಯ ಹಾಳು ಮಾಡುತ್ತಿದ್ದ ಚೈತ್ರಾ ಉದ್ಯಮಿಯೊಬ್ಬರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ 5 ಕೋಟಿ ರೂಪಾಯಿ ವಂಚಿಸಿದ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಉಡುಪಿಯಲ್ಲಿ ಬಂಧಿಸಿದ್ದರು. ಇಬ್ಬರು ಆರೋಪಿಗಳನ್ನು ಸೆ.23ರವರೆಗೂ ಸಿಸಿಬಿ ಕಸ್ಟಡಿಗೆ ನೀಡಲು ಕೋರ್ಟ್‌ ಆದೇಶ ನೀಡಿದೆ.

ಪೊಲೀಸರು ಕಳೆದ ರಾತ್ರಿ ಉಡುಪಿ ಶ್ರೀ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮಿಂಚಿನ ಕಾರ್ಯಾಚರಣೆಯಲ್ಲಿ ಚೈತ್ರಾ ಅವರನ್ನು ಬಂಧಿಸಿದ್ದರು. ಅಲ್ಲದೇ ಈಕೆಯ ಗೆಳೆಯ ಶ್ರೀಕಾಂತ್ ನಾಯಕ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

Advertisements

ಚೈತ್ರಾ ಕುಂದಾಪುರ ಪ್ರಕರಣ | ನಾನು ಆಶ್ರಯ ನೀಡಿಲ್ಲ, ನೋಟಿಸ್ ಬಂದಿಲ್ಲ: ಕಾಂಗ್ರೆಸ್‌ನ ಸುರಯ್ಯಾ ಅಂಜುಮ್‌

ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ 2023 ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ನೀಡುವುದಾಗಿ ಚೈತ್ರಾ 5 ಕೋಟಿ ರೂ. ವಂಚಿಸಿದ್ದರು.

ಚೆಫ್ ಟಾಕ್ ಸಂಸ್ಥೆ ಮುಖ್ಯಸ್ಥನಾಗಿರುವ ಗೋವಿಂದ ಬಾಬು ಪೂಜಾರಿ ಬೈಂದೂರು ವಿಧಾನಸಭೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಟಿಕೆಟ್ ಸಿಗದೆ ವಂಚನೆಗೆ ಒಳಗಾದ ಗೋವಿಂದ ಬಾಬು ಪೂಜಾರಿ ಅವರು ಬೆಂಗಳೂರು ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X