ಚಿಕ್ಕಬಳ್ಳಾಪುರ | ರಕ್ತ ಪರೀಕ್ಷೆಯ ವರದಿಯಲ್ಲಿ ಝೀಕಾ ವೈರಸ್ ಪತ್ತೆಯಿಲ್ಲ; ದಿನೇಶ್ ಗುಂಡೂರಾವ್

Date:

Advertisements

ರಾಜ್ಯದಲ್ಲಿಯೇ ಪ್ರಥಮ ಬಾರಿ ಝೀಕಾ ವೈರಸ್ ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟದಲ್ಲಿನ ಸೊಳ್ಳೆಯೊಂದರಲ್ಲಿ ಕಂಡು ಬಂದಿದ್ದ ಹಿನ್ನೆಲೆ, ತಲಕಾಯಲಬೆಟ್ಟ ಗ್ರಾಮದ ಐದು ಕಿ.ಮೀ ವ್ಯಾಪ್ತಿಯಲ್ಲಿರುವ 5 ಗ್ರಾಮಗಳ 37 ಗರ್ಭಿಣಿಯರು ಹಾಗೂ 11 ಜ್ವರ ಪೀಡಿತರ ಒಟ್ಟು 48 ಮಂದಿಯ ರಕ್ತ ಮಾದರಿಯನ್ನು ಸಂಗ್ರಹ ಮಾಡಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇದೀಗ ಝೀಕಾ ವೈರಸ್ ಪತ್ತೆಗಾಗಿ ಕಳುಹಿಸಿದ್ದ 27 ಮಾದರಿಯ ಫಲಿತಾಂಶ ಬಂದಿದ್ದು, ಅದರಲ್ಲಿ ವೈರಸ್‌ ಇಲ್ಲದಿರುವುದು ಪತ್ತೆಯಾಗಿದೆ.

ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಎಕ್ಸ್‌ನಲ್ಲಿ, “ಸೊಳ್ಳೆಗಳಲ್ಲಿ ಝೀಕಾ ವೈರಾಣು ಪತ್ತೆಯಾಗಿದ್ದ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸ್ಥಳೀಯರ ರಕ್ತ ಪರೀಕ್ಷೆಯ ವರದಿಯಲ್ಲಿ ಝೀಕಾ ವೈರಸ್ ಪತ್ತೆಯಾಗಿಲ್ಲ. 23 ಗರ್ಭಿಣಿಯರು ಸೇರಿದಂತೆ 27 ಮಂದಿಯ ರಕ್ತ ಮಾದರಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಸಂಸ್ಥೆಗೆ ಕಳುಹಿಸಲಾಗಿತ್ತು” ಎಂದು ಹೇಳಿದ್ದಾರೆ.

“ಇದೀಗ, ರಕ್ತ ತಪಾಸಣೆಯ ವರದಿಯು ಇಲಾಖೆಯ ಕೈ ಸೇರಿದ್ದು, ಝೀಕಾ ವೈರಾಣು ಪತ್ತೆಯಾಗಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ” ಎಂದು ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಟಾಕಿ ಅವಘಡಗಳ ಚಿಕಿತ್ಸೆಗೆ 24 ಗಂಟೆ ತುರ್ತು ಸೇವೆ ನೀಡಲು ಸಜ್ಜಾದ ಆಸ್ಪತ್ರೆಗಳು

“ನಮ್ಮ ಆರೋಗ್ಯ ಇಲಾಖೆಯಿಂದ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಗರ್ಭಿಣಿಯರ ಆರೋಗ್ಯದ ಮೇಲೆ ವಿಶೇಷ ನಿಗಾ ಇಡಲಾಗಿದೆ. ಝೀಕಾ ವೈರಸ್‌ ಕುರಿತು ಆತಂಕ ಪಡಬೇಕಾದ ಅಗತ್ಯವಿಲ್ಲ. ಆದರೆ, ಎಲ್ಲರೂ ಎಚ್ಚರ ವಹಿಸಬೇಕಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X