ಚಿಕ್ಕಮಗಳೂರು | ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಮೇಲೆ ಹುಲಿ ದಾಳಿ

Date:

  • ಹುಲಿ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಆಗ್ರಹ
  • ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ – ಪರಿಶೀಲನೆ

ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿ ಕೊಡೆಬೈಲ್ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲಕ್ಷ್ಮಣಗೌಡ ಎಂಬುವವರ ಹಸುವಿನ ಮೇಲೆ ಭಾನುವಾರ ಹುಲಿ ದಾಳಿ ನಡೆಸಿದೆ. ಮನೆಯ ಸಮೀಪವೇ ಇರುವ ಕೊಟ್ಟಿಯಲ್ಲಿ ಕಟ್ಟಿದ ಹಸುವಿನ ಮೇಲೆ ಹುಲಿ ದಾಳಿ ಮಾಡಿದೆ. ಹಸುವಿಗೆ ತೀವ್ರವಾಗಿ ಗಾಯಗೊಳಿಸಿದೆ.

ಗಾಯಗೊಂಡಿದ್ದ ಹಸು ತೀವ್ರ ರಕ್ತಸ್ರಾವದಿಂದ ಬಳಲಿದ್ದು, ಭಾನುವಾರ ರಾತ್ರಿ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಮಹಜರು ನಡೆಸಿದ್ದಾರೆ.

“ಈ ಹಿಂದೆಯೂ ತಮ್ಮ ನಾಲ್ಕು ಹಸುಗಳು ಹುಲಿ ದಾಳಿಗೆ ಬಲಿಯಾಗಿದ್ದವು” ಎಂದು ಲಕ್ಷ್ಮಣಗೌಡ ತಿಳಿಸಿದ್ದಾರೆ.

ಬಣಕಲ್ ಹೋಬಳಿಯಾದ್ಯಂತ ಹುಲಿದಾಳಿಗೆ ನಿರಂತರವಾಗಿ ಜಾನುವಾರುಗಳು ಬಲಿಯಾಗುತ್ತಿವೆ. ಕೆಲ ದಿನಗಳ ಹಿಂದೆ ಬಿನ್ನಡಿ ಗ್ರಾಮದಲ್ಲಿ ಒಂದು ಹಸು ಹುಲಿದಾಳಿಗೆ ಬಲಿಯಾಗಿತ್ತು.

ಹುಲಿ ದಾಳಿಯನ್ನು ತಡೆಯಲು ಅರಣ್ಯ ಇಲಾಖೆ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇಲ್ಲಿ ದಾಳಿನಡೆಸುತ್ತಿರುವ ಹುಲಿಯನ್ನು ಸೆರೆಹಿಡಿದು ಬೇರೆಡೆಗೆ ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ ಬರ ಪರಿಸ್ಥಿತಿ, ರೈತರ ಸಂಕಷ್ಟ ಪರಿಹರಿಸುವ ಚರ್ಚೆಗಳಿಗೆ ಸದನದಲ್ಲಿ ಪ್ರಾಮುಖ್ಯತೆ ನೀಡಿ; ಎಎಪಿ ಒತ್ತಾಯ

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸೋಮವಾರದಿಂದ 16ನೇ ವಿಧಾನಸಭೆಯ ವಿಧಾನ ಮಂಡಲಗಳ ಚಳಿಗಾಲದ...

ಬೆಂಗಳೂರಿನ ಈ ಪ್ರದೇಶದಲ್ಲಿ ವಾಹನ ಸಂಚಾರ ನಿಷೇಧ!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಹೊಸದೇನಲ್ಲ ಎಂಬಂತೆ ಆಗಿದೆ. ಬೆಂಗಳೂರಿನ...

ಹಾಸನ | ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ; ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಾಳೆಕೆರೆ ಫಾರೆಸ್ಟ್‌ನಲ್ಲಿ ಸೋಮವಾರ ನಡೆದ...

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...