ಚಿಕ್ಕಮಗಳೂರು | ನ್ಯಾಯ ಸಿಗದಿದ್ದಕ್ಕೆ ಮನನೊಂದು ಕೋರ್ಟ್​ ಆವರಣದಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

Date:

ನ್ಯಾಯ ಸಿಗದೆ ಇದ್ದಿದ್ದಕ್ಕೆ ನೊಂದ ಯುವಕನೊಬ್ಬ ಕೋರ್ಟ್‌ ಆವರಣದಲ್ಲಿಯೇ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ನಡೆದಿದೆ.

- Advertisement -

ಮಲ್ಲಿಕಾರ್ಜುನ (34) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ಕಡೂರು ತಾಲೂಕಿನ ದೇವರಕಾರೇಹಳ್ಳಿಯ ನಿವಾಸಿ. ಜಮೀನು ವಿವಾದದ ಹಿನ್ನೆಲೆ, ಮಲ್ಲಿಕಾರ್ಜುನ್ ನ್ಯಾಯಾಲಯ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ದೇಶದ ಬೃಹತ್ ಉದ್ಯಮ ಸಂಸ್ಥೆ ಟಾಟಾ ಸನ್ಸ್ ಬೋರ್ಡ್...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ನ್ಯಾಯಾಲಯದಲ್ಲಿ ವಿಚಾರಣೆ ಬಳಿಕ ತಮ್ಮ ಪರವಾಗಿ ತೀರ್ಪು ಬಾರದ ಹಿನ್ನೆಲೆ, ಕೋರ್ಟ್‌ ಆವರಣದಲ್ಲಿಯೇ ವಿಡಿಯೋ ರೆಕಾರ್ಡ್‌ ಮಾಡಿ ವಿಷ ಸೇವನೆ ಮಾಡಿದ್ದಾನೆ. ಬಳಿಕ, ಅಸ್ವಸ್ಥಗೊಂಡ ಯುವಕನನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

“ತಂದೆಯ ನಿಧನದ ಬಳಿಕ ಜಮೀನು ಲಪಟಾಯಿಸಲು ನನ್ನ ಮೇಲೆ ಸುಳ್ಳು ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೇ, ನಮ್ಮ ವಕೀಲರು ಕೂಡ ಇದರಲ್ಲಿ ಶಾಮೀಲಾಗಿದ್ದಾರೆ” ಎಂದು ಮಲ್ಲಿಕಾರ್ಜುನ್ ಆರೋಪ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಐದು ಕಡೆ ಪ್ರವೇಶ, ನಿರ್ಗಮನ ಜತೆಗೆ 18 ಕಿ.ಮೀ ಸುರಂಗ ರಸ್ತೆ ನಿರ್ಮಾಣ; ಬಿಬಿಎಂಪಿ ಪ್ರಸ್ತಾಪ

ನಾನು ಕೈ ಕಾಲು ಮುಗಿದರೂ ನ್ಯಾಯಾಲಯದಲ್ಲಿ ನನ್ನನ್ನು ಏನು ಕೇಳಲಿಲ್ಲ. ಜಮೀನು ಉಳಿಸಿಕೊಳ್ಳಲು ₹20 ಲಕ್ಷ ಸಾಲ ಮಾಡಿದ್ದೇನೆ. ಅಲ್ಲದೇ, ಈ ಬಗ್ಗೆ ಸಿಎಂ, ಡಿಸಿಎಂ ಹಾಗೂ ಸಚಿವರಿಗೆ ಪತ್ರ ಬರೆದಿದ್ದೇನೆ. ಆದರೂ, ನನ್ನ ಪತ್ರಕ್ಕೆ ಸ್ಪಂದನೆ ಸಿಕ್ಕಿಲ್ಲ. ಅಮ್ಮ ನನ್ನನ್ನು ಕ್ಷಮಿಸು, ನೀನು ಚೆನ್ನಾಗಿರು. ನನ್ನ ಸಾವಿಗೆ ಎಂ.ಬಿ.ಷಡಕ್ಷರಪ್ಪ ತಮ್ಮಂದಿರು, ಅವರ ಅಣ್ಣನ ಮಕ್ಕಳು ಮತ್ತು ರಾಜು ಕಾರಣ” ಎಂದು ಹೇಳಿದ್ದಾರೆ.

“ನನಗೆ ನ್ಯಾಯ ಸಿಕ್ಕಿಲ್ಲ. ಈ ಔಷಧಿ ಕುಡಿದು ನ್ಯಾಯಾಲಯದಲ್ಲೇ ಸಾಯುತ್ತಿದ್ದೇನೆ” ಎಂದು ಮಲ್ಲಿಕಾರ್ಜುನ್​ ವಿಷ ಸೇವಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...

ಯಾದಗಿರಿ | ಎರಡು ವರ್ಷವಾದರೂ ಪೂರ್ಣಗೊಳ್ಳದ ರಸ್ತೆ ಕಾಮಗಾರಿ: ರೈತ ಸಂಘ ಆಕ್ರೋಶ

ಸುರಪುರ ತಾಲೂಕಿನ ರುಕ್ಕಾಪೂರದಿಂದ ಬೇವಿನಾಳ ಎಸ್.ಎಚ್. ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆಯ...

ಕಲಬುರಗಿ | ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಗೈರು ಆರೋಪ: ಕರ್ತವ್ಯಲೋಪದ ವಿರುದ್ಧ ಕ್ರಮಕ್ಕೆ ಆಗ್ರಹ

ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತುರ್ತು ಸಂದರ್ಭದಲ್ಲಿ...