ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

Date:

Advertisements

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ.

ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ಭರ್ತಿಯಾಗಿದೆ.

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು 1979 ರಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮಕ್ಕೆ ಮೊದಲು ಚಾಲನೆ ನೀಡಿದ್ದರು. ಅಂದಿನಿಂದ ಇಂದಿನವರೆಗೂ ಜೂನ್ ತಿಂಗಳಲ್ಲಿ ಯಾವ ಸಿಎಂ ಕೂಡ ಬಾಗಿನ ಸಲ್ಲಿಸಿರಲಿಲ್ಲ. ಹೀಗಾಗಿ ಜೂನ್‌ ತಿಂಗಳಿನಲ್ಲೇ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ ಪಾತ್ರವಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 4ನೇ ಬಾರಿ ಕೆಆರ್‌ಎಸ್‌ಗೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದಾರೆ.

Advertisements

ಇದನ್ನು ಓದಿದ್ದೀರಾ?  ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಬಾಗಿನ ಕಾರ್ಯಕ್ರಮ ಹಿನ್ನೆಲೆ ಕನ್ನಡ ಬಾವುಟದಿಂದ ಕನ್ನಂಬಾಡಿ ಕಟ್ಟೆಯನ್ನು ಶೃಂಗರಿಸಲಾಗಿತ್ತು. ಮೈಸೂರಿನ ಸರ್ಕಾರಿ ಅತಿಥಿ ಗೃಹದಿಂದ ಬಸ್ಸಿನಲ್ಲಿ ಸಿಎಂ, ಡಿಸಿಎಂ ಹಾಗೂ ಸಚಿವ ಸಂಪುಟ ಸದಸ್ಯರು ಒಂದೇ ಬಸ್ ನಲ್ಲಿ ಪ್ರಯಾಣಿಸಿ ಕೆಆರ್‌ಎಸ್‌ಗೆ ಆಗಮಿಸಿದರು.

ಸಿಎಂ ಜೊತೆಗೆ ಕಾವೇರಿ ಮಾತೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಬಾಗಿನ ಅರ್ಪಿಸಿದರು. ಸಿಎಂಗೆ ಸಚಿವರಾದ, ಚಲುವರಾಯಸ್ವಾಮಿ, ಮಹದೇವಪ್ಪ, ಬೋಸರಾಜು, ವೆಂಕಟೇಶ್ ಹಾಗೂ ಶಾಸಕರು ಜೊತೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X