ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

Date:

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸಮುದಾಯ ಮಳೆ ಕೋಯ್ಲು (ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌) ಪ್ರಾರಂಭಿಸಲು ಚಿಂತಿಸಿದೆ.

“ಬೆಂಗಳೂರು ನಗರದಲ್ಲಿ ಕಟ್ಟಡಗಳಲ್ಲಿ ಮಳೆ ನೀರು ಕೋಯ್ಲು ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ಕಟ್ಟಡಗಳಲ್ಲಿನ ಜಾಗದ ಕೊರತೆ ಹಾಗೂ ನಿರ್ಲಕ್ಷದಿಂದ ಇದರ ಸರಿಯಾದ ಅನುಷ್ಠಾನ ಸಾಧ್ಯವಾಗಿಲ್ಲ. ಬಹುತೇಕ ಕಡೆಗಳಲ್ಲಿ ಕೇವಲ ಅಗತ್ಯ ಅನುಮತಿ ಪಡೆದುಕೊಳ್ಳಲು ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿದ್ದು, ಮಳೆ ನೀರನ್ನ ಸಂಗ್ರಹಿಸಿ ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ” ಎಂದು ಜಲಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

“ಇದರಿಂದ ಮಳೆಗಾಲದಲ್ಲಿ ಒಳಚರಂಡಿ ವ್ಯವಸ್ಥೆ ಒತ್ತಡಕ್ಕೆ ಒಳಗಾಗಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ. ಅಲ್ಲದೇ, ಇದರಿಂದ ಅಮೂಲ್ಯ ನೀರು ವ್ಯರ್ಥವಾಗಿ ಹರಿದು ಚರಂಡಿ ಪಾಲಾಗುತ್ತಿದೆ. ನೀರು ವ್ಯರ್ಥವಾಗದಂತೆ ಅಮೂಲ್ಯ ಮಳೆ ನೀರನ್ನ ಸಂಗ್ರಹಿಸಿ ಅದನ್ನ ಅಂತರ್ಜಲ ವೃದ್ದಿಗೆ ಬಳಸಿಕೊಳ್ಳಲು ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ ಯೋಜನೆಯನ್ನು ಜಲಮಂಡಳಿ ರೂಪಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

“ಅಪಾರ ಪ್ರಮಾಣದಲ್ಲಿ ಹರಿದು ಹೋಗುವ ಮಳೆ ನೀರನ್ನ ಸಮರ್ಪಕವಾದ ವ್ಯವಸ್ಥೆಯ ಮೂಲಕ ಕೆರೆಗಳಿಗೆ ಹರಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಅದರಲ್ಲೂ ಕೆರೆಗಳಿಂದ 500 ಮೀಟರ್‌ ಸುತ್ತಳತೆಯಲ್ಲಿರುವಂತಹ ಅಪಾರ್ಟ್‌ಮೆಂಟ್‌ಗಳು, ಸಾರ್ವಜನಿಕ ಪ್ರದೇಶಗಳು ಹಾಗೂ ದೊಡ್ಡ ಕಟ್ಟಡಗಳಿಂದ ಪೈಪ್‌ಲೈನ್‌ ಮೂಲಕ ಕೆರೆಗಳಿಗೆ ನೇರವಾಗಿ ಮಳೆ ನೀರನ್ನ ತುಂಬಿಸುವ ಚಿಂತನೆ ನಮ್ಮದಾಗಿದೆ” ಎಂದಿದ್ದಾರೆ.

“ಇದರಿಂದ ಕೆರೆಗಳಿಗೆ ಅಮೂಲ್ಯ ಮಳೆ ನೀರು ತುಂಬುವ ವ್ಯವಸ್ಥೆ ಮಾಡುವುದು ಸಾಧ್ಯವಾಗಲಿದ್ದು, ಅಂತರ್ಜಲ ವೃದ್ದಿಗೂ ಸಹಕಾರಿಯಾಗಲಿದೆ. ಮೊದಲ ಹಂತದಲ್ಲಿ ವರ್ತೂರು, ಬೆಳ್ಳಂದೂರು ಭಾಗದಲ್ಲಿ ಈ ಯೋಜನೆಯನ್ನ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಮಂಡಳಿ ಚಿಂತನೆ ನಡೆಸಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

ಎನ್‌ಡಿಆರ್‌ಎಫ್ ಮಾನದಂಡಗಳ ಪ್ರಕಾರ ರಾಜ್ಯಕ್ಕೆ ರೂ.18,172 ಕೋಟಿ ಬರ ಪರಿಹಾರ ಬಿಡುಗಡೆಯಾಗಬೇಕಿತ್ತು....

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...