ಕಾಂಗ್ರೆಸ್ ಸರ್ಕಾರದ ಲ್ಯಾಂಡ್ ಜಿಹಾದ್: ಮುಸ್ಲಿಮರ ಓಲೈಕೆಗೆ ಮಿತಿ ಬೇಡವೇ: ಆರ್‌ ಅಶೋಕ್‌ ಪ್ರಶ್ನೆ

Date:

Advertisements

”ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಬೆಲೆಬಾಳುವ ಪಶುಸಂಗೋಪನೆ ಇಲಾಖೆಯ ಎರಡು ಎಕರೆ ಜಾಗವನ್ನು ಮುಸ್ಲಿಮರಿಗೆ ನೀಡುವ ಹುನ್ನಾರ ಮಾಡುತ್ತಿದ್ದೀರಲ್ಲ ಸಿಎಂ ಸಿದ್ದರಾಮಯ್ಯನವರೇ, ಮುಸ್ಲಿಮರ ಓಲೈಕೆಗೆ ಒಂದು ಇತಿ ಮಿತಿ ಬೇಡವೇ” ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಪ್ರಶ್ನಿಸಿದ್ದಾರೆ.

ಸರ್ಕಾರದ ನಡಾವಳಿ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ದನ ಕರುಗಳಿಗೆ ಚಿಕಿತ್ಸೆ ನೀಡುವ ಸರ್ಕಾರಿ ಪಶು ಚಿಕಿತ್ಸಾಲಯವನ್ನು ಮುಚ್ಚಿಸಿ ಅದನ್ನ ಮುಸ್ಲಿಂರಿಗೆ ಕೊಡುವ ಅನಿವಾರ್ಯತೆ ಆದರೂ ಏನಿತ್ತು? ಜಾನುವಾರುಗಳಿಗೆ ಮಾತ್ರ ಆ ಚಿಕಿತ್ಸಾಲಯ ಸ್ಥಾಪಿಸಿಲ್ಲ. ಇತರೆ ಸಾಕು ಪ್ರಾಣಿಗಳ ಚಿಕಿತ್ಸೆಗೂ ಸ್ಥಾಪಿಸಲಾಗಿತ್ತು” ಎಂದಿದ್ದಾರೆ.

“ನಗರದ ಹೃದಯಭಾಗದಲ್ಲಿರುವ ಐನೂರು ಕೋಟಿಗೂ ಹೆಚ್ಚು ಬೆಲೆ ಬಾಳುವ ಜಾಗವನ್ನು ಹಸ್ತಾಂತರ ಮಾಡಲು ನಾವು ಬಿಡುವುದಿಲ್ಲ. ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಕಾಂಗ್ರೆಸ್‌ ಸರ್ಕಾರದ ಲ್ಯಾಂಡ್ ಜಿಹಾದ್ ಎಂದು ಕರೆಯಬಹುದೇ?” ಎಂದು ವಾಗ್ದಾಳಿ ನಡೆಸಿದ್ದಾರೆ.‌

Advertisements

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಬಿಬಿಎಂಪಿ ದಾಖಲೆ ರೂಂ ಗೆ ಬೆಂಕಿ ಬಿದ್ದು ಎಲ್ಲಾ ಅವ್ಯವಹಾರಗಳನ್ನು ಸುಟ್ಟು ಹಾಕಿದರೆಂದು ಮಾಧ್ಯಮಗಳಲ್ಲಿ ಬಂದಿತ್ತು,,ಆ ಘಟನೆಯ ಹಿಂದೆ ಯಾರ ಕೈವಾಡವಿತ್ತು ಬಹಿರಂಗವಾಗಿಲ್ಲ ಆಗ ನೀವೇ ಸರ್ಕಾರದಲ್ಲಿ ಇದ್ದವರು,, ಗೊತ್ತಿದ್ದರೆ ಜನರಿಗೆ ಹೇಳಿ ಮಾಜಿಗಳೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X