ಸೈಬರ್ ವಂಚನೆ | ಪಾರ್ಟ್‌ ಟೈಮ್‌ ಜಾಬ್‌ನಲ್ಲಿ ಹೂಡಿಕೆ ಮಾಡಿ ₹23 ಲಕ್ಷ ಕಳೆದುಕೊಂಡ ಟೆಕ್ಕಿ

Date:

Advertisements

ಸಾಫ್ಟ್‌ವೇರ್ ಎಂಜಿನಿಯರ್‌ರೊಬ್ಬರು ಪಾರ್ಟ್‌ ಟೈಮ್‌ ಜಾಬ್‌ನಲ್ಲಿ ಹೂಡಿಕೆ ಮಾಡಿ ಬರೋಬ್ಬರಿ ₹23.23ಲಕ್ಷ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಣ ಕಳೆದುಕೊಂಡಿರುವ ಸೌಮ್ಯ(28) (ಹೆಸರು ಬದಲಾಯಿಸಲಾಗಿದೆ) ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ ಸೌಮ್ಯ, “ಶೀತಲ್ ಎಂಬ ಹೆಸರಿನ ಅಪರಿಚಿತ ವ್ಯಕ್ತಿ ವಾಟ್ಸಾಪ್‌ ಮೂಲಕ ನನ್ನನ್ನು ಸಂಪರ್ಕಿಸಿ, ಚಟ್ನಿ ಎಂಬ ಹೆಸರಿನ ರೆಸ್ಟೋರೆಂಟ್‌ಗೆ ರಿವ್ಯೂ ಬರೆದು ಸ್ಕ್ರೀನ್ ಶಾಟ್ ಕಳಿಸಿದರೇ, ಹಣ ನೀಡಲಾಗುವುದು ಎಂದು ಹೇಳಿದ್ದಾರೆ. ಬಳಿಕ ಅದರಂತೆಯೇ, ರಿವ್ಯೂ ಬರೆದು ಶೀತಲ್ ಎಂಬ ವ್ಯಕ್ತಿಯಿಂದ ₹200 ಪಡೆದುಕೊಂಡಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

Advertisements

“ಬಳಿಕ, ಐದು ಟೆಲಿಗ್ರಾಮ್ ಗುಂಪುಗಳಿಗೆ ಸೇರು, ಅದರಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ಹೇಳಿ ಆಮಿಷವೊಡ್ಡಿದ್ದಾರೆ. ಅದರಂತೆಯೇ, ಸೌಮ್ಯ ಟೆಲಿಗ್ರಾಮ್ ಗ್ರೂಪ್‌ಗಳಿಗೆ ಸೇರಿದ್ದಾರೆ. ಮೊದಲಿಗೆ ₹1000 ಹೂಡಿಕೆ ಮಾಡಿ, 1300 ಲಾಭ ಪಡೆದಿದ್ದಾರೆ. ಇನ್ನು ಹೆಚ್ಚಿನ ಹಣ ಹಾಕಿದರೇ, ದುಪ್ಪಟ್ಟು ಲಾಭ ಪಡೆಯಬಹುದು ಎಂದು ಹೇಳಿ ನಂಬಿಸಿದ್ದಾರೆ. ಅದರಂತಯೇ ಸೌಮ್ಯ ಕೂಡ ಐದು ಐಸಿಐಸಿಐ ಬ್ಯಾಂಕ್ ಖಾತೆಗಳು, ಒಂದು ಫೆಡರಲ್ ಬ್ಯಾಂಕ್ ಖಾತೆ ಹಾಗೂ ಕೆಲವು ಯುಪಿಐ ಐಡಿಗಳಿಗೆ ₹23,23,315 ಹಣ ವರ್ಗಾವಣೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ

ನೀರೀಕ್ಷೆ ಮಾಡಿದ ದುಪ್ಪಟ್ಟು ಹಣವನ್ನು ಹಿಂಪಡೆಯುವ ವೇಳೆ, ವಂಚಕರು ಇನ್ನೂ ಹೆಚ್ಚಿನ ಹೂಡಿಕೆ ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡ ಸೌಮ್ಯ ನವೆಂಬರ್ 9 ರಂದು ವೈಟ್‌ಫೀಲ್ಡ್ ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್ (ಸಿಇಎನ್) ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾಳೆ.

“ಕರೆ ಮಾಡಿದ ನಂಬರ್​ ಅನ್ನು ಆನ್‌ಲೈನ್​ನಲ್ಲಿ ಹುಡುಕಾಡಿದಾಗ ಅಮೆರಿಕದಿಂದ ಬಂದಿರಬಹುದು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ಸಿಇಎನ್ ಪೊಲೀಸರು ಮಾಹಿತಿ ತಂತ್ರಜ್ಞಾನ (ಐಟಿ) ಕಾಯ್ದೆಯ ಸೆಕ್ಷನ್ 66 (ಡಿ) ಮತ್ತು ಐಪಿಸಿ ಸೆಕ್ಷನ್ 419 ಮತ್ತು 420 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ. ತನಿಖೆ ನಡೆಯುತ್ತಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X