ದಾವಣಗೆರೆ | ಕಲ್ಯಾಣ ಕರ್ನಾಟಕ ಸೇರಿ 16 ಸಾವಿರ ಶಿಕ್ಷಕರ ನೇಮಕಕ್ಕೆ ಹಣಕಾಸು ಇಲಾಖೆ ಒಪ್ಪಿಗೆ

Date:

Advertisements

“ಕಲ್ಯಾಣ ಕರ್ನಾಟಕಕ್ಕೆ 5.5 ಸಾವಿರ ಶಿಕ್ಷಕರು, 2020ನೇ ಸಾಲಿನವರೆಗೆ ಅನುದಾನಿತ ಶಾಲೆಗಳಿಗೆ 6ಸಾವಿರ ಶಿಕ್ಷಕರು,  ಇನ್ನುಳಿದ ಭಾಗಕ್ಕೆ 5.5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲು ಈಗಾಗಲೇ ಹಣಕಾಸು ಇಲಾಖೆಯಿಂದ ಒಪ್ಪಿಗೆ ಸಿಕ್ಕಿದ್ದು ಸದ್ಯದಲ್ಲಿಯೇ ನೇಮಕಾತಿಯ ಪ್ರಕ್ರಿಯೆ ನಡೆಯಲಿದೆ” ಎಂದು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧುಬಂಗಾರಪ್ಪ ತಿಳಿಸಿದರು.

1001731214
ಚನ್ನಗಿರಿಯಲ್ಲಿ ಕಾಂಗ್ರೆಸ್ ಮುಖಂಡರೊಂದಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಸುದ್ದಿವಾಹಿನಿಗಳ ಜೊತೆ ಮಾತನಾಡಿದ ಅವರು “2025-26ರ  ಬಜೆಟ್ ನಲ್ಲಿ ಶಿಕ್ಷಣ‌ ಕ್ಷೇತ್ರಕ್ಕೆ ಅಧಿಕ ಅನುದಾನ ನೀಡಿದ್ದೇವೆ. ರಾಜ್ಯದಲ್ಲಿ ಕೆಪಿಎಸ್ ಶಾಲೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು ಪ್ರಸ್ತುತ 300 ಕೆ.ಪಿ.ಎಸ್ ಶಾಲೆಗಳಿದ್ದು ಪ್ರಸ್ತುತ ವರ್ಷದಲ್ಲಿ 500ಕ್ಕೂ ಹೆಚ್ಚು ಕೆ.ಪಿ.ಎಸ್ ಶಾಲೆಗಳನ್ನು ತೆರೆಯುವ ತಯಾರಿ ನಡೆಸಲಾಗಿದೆ. ಅಧುನಿಕ ತಂತ್ರಜ್ಞಾನದಿಂದ ಇಂದಿನ ಮಕ್ಕಳ ಕಲಿಕೆಯಲ್ಲಿ ಕುಂಠಿತವಾಗುತ್ತಿದ್ದು, ಮಾನವೀಯ ಮೌಲ್ಯಗಳು ಸಹ ಕ್ಷೀಣಿಸುತ್ತಿವೆ. ‌ಮುಂದಿನ ವರ್ಷದಿಂದ 1ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಭೋದನೆ ಮಾಡುವ ಉದ್ದೇಶ ಹೊಂದಲಾಗಿದೆ” ಎಂದರು.

1001731219

“ಪಠ್ಯ ಪುಸ್ತಕ ರಚನಾ ಸಮಿತಿಯ ತಂತ್ರಜ್ಞರು ಸಭೆಯನ್ನು ಮುಂದಿನ ವಾರದಿಂದ ಕರೆಯಲಿದ್ದೇವೆ. ಎಲ್ಲಾ ತಂತ್ರಜ್ಞರ ಜೊತೆ ಚರ್ಚಿಸಿ ಈ ಕಾಲಘಟ್ಟದಲ್ಲಿ ಮಕ್ಕಳಿಗೆ ಅಗತ್ಯವಾದ ನೈತಿಕ ಶಿಕ್ಷಣ, ಮೌಲ್ಯಗಳನ್ನು, ಪರಿಸರದ ಕಾಳಜಿ ಇತ್ಯಾದಿಗಳನ್ನು ಬೆಳೆಸುವ ಪಠ್ಯ, ಕಾರ್ಯಕ್ರಮಗಳನ್ನು  ಅಂತಿಮಗೊಳಿಸಿ ಅದಕ್ಕೆ ಬೇಕಾದ ಪಟ್ಟಿಯನ್ನು ತಂತ್ರಜ್ಞರು ತಯಾರಿಸಲಿದ್ದಾರೆ. ವಾರದಲ್ಲಿ ಎರಡು ದಿನ ನೈತಿಕ ಶಿಕ್ಷಣ, ಎರಡು ದಿನ ಬರವಣಿಗೆ, ಎರಡು ದಿನ ಓದುವ ಹವ್ಯಾಸಗಳ ಬಗ್ಗೆ ತಿಳಿಸಲಾಗುವುದು. ಎಲ್.ಕೆ.ಜಿ, ಯು.ಕೆ.ಜಿ ಶಾಲೆಗಳಿಗೂ ರಾಜ್ಯದಲ್ಲಿ ಅಧಿಕ ಬೇಡಿಕೆ ಇದ್ದು ಅವುಗಳನ್ನು ತೆರೆಯಲು ಸಿದ್ಧತೆಗಳು ನಡೆಯುತ್ತಿವೆ. ಆದರೆ ಅಲ್ಲೂ ಹೆಚ್ಚಿನ ಆದ್ಯತೆ ಕನ್ನಡಕ್ಕೆ ಇರಲಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಜಾತಿ ತಾರತಮ್ಯ, ಎಸ್ಡಿಎಂಸಿ ಅಧ್ಯಕ್ಷನಿಂದ ಮುಖ್ಯ ಶಿಕ್ಷಕನ ವಿರುದ್ಧ ದೂರು, ಕ್ರಮಕ್ಕೆ ಆಗ್ರಹ.

“ಕಳೆದ ವಿಧಾನಸಭಾ ಚುನಾವಣಾ ವೇಳೆ ನಾನು ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿಯ ಉಪಾಧ್ಯಕ್ಷನಾಗಿದ್ದು, ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಯಂತೆ ರಾಜ್ಯದ ಎಲ್ಲಾ ಸರ್ಕಾರಿ ನೌಕರರಿಗೆ ಒ.ಪಿ.ಎಸ್ ಅನ್ನು ಮುಂದಿನ ದಿನಗಳಲ್ಲಿ ಜಾರಿಗೊಳಿಸಲು ತೀರ್ಮಾನಿಸಲಾಗಿದೆ” ಎಂದು ಮಾಹಿತಿ ನೀಡಿದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಂಚಾರ ನಿಯಮ ಉಲ್ಲಂಘನೆ : ಶಾಲಾ ಬಸ್, ಆಟೋ, ವಾಹನಗಳಿಗೆ ದಂಡ

ದಾವಣಗೆರೆ ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜಿನ ಬಸ್‍ಗಳು...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

ದಾವಣಗೆರೆ | ಗಣೇಶ ಚತುರ್ಥಿ, ಈದ್ ಮಿಲಾದ್ ಹಬ್ಬ ಸಾಂಪ್ರದಾಯಿಕ, ಸೌಹಾರ್ಧತೆಯಿಂದ ಆಚರಿಸಿ; ಡಿಸಿ ಜಿ.ಎಂ.ಗಂಗಾಧರಸ್ವಾಮಿ

"ಕಲೆ ಸಾಂಸ್ಕೃತಿಕತೆಗೆ ಹೆಸರುವಾಸಿಯಾದ ದೇಶದಲ್ಲಿ ಪರಿಸರ ಸ್ನೇಹಿ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪರಿಸರ...

Download Eedina App Android / iOS

X