ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗ ಅಭಿವೃದ್ಧಿಪಡಿಸಿ: ತುಷಾರ್ ಗಿರಿ ನಾಥ್

Date:

Advertisements

“ಹೊರ ವರ್ತುಲ ರಸ್ತೆಯಲ್ಲಿ ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಕೂಡಲೇ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಬೇಕು” ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ, ಮೆಟ್ರೋ, ಜಲಮಂಡಳಿ ಹಾಗೂ ಒಆರ್‌ಆರ್‌ಸಿಎ ಖಾಸಗಿ ಸಂಸ್ಥೆಯ ಸಹಭಾಗಿತ್ವದಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, “ನಗರದ ಮಹದೇವಪುರ ವಲಯ ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ಪಾಲಿಕೆ ಹಾಗೂ ಮೆಟ್ರೋ ಅಧಿಕಾರಿಗಳು ಜಂಟಿ ಪರಿಶೀಲನೆ ನಡೆಸಿ ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಸರ್ವೀಸ್ ರಸ್ತೆ ಹಾಗೂ ಪಾದಚಾರಿ ಮಾರ್ಗವನ್ನು ಅಭಿವೃದ್ಧಿಪಡಿಸಬೇಕು” ಎಂದು ಸೂಚಿಸಿದರು.

“ಹೊರ ವರ್ತುಲ ರಸ್ತೆಗೆ ಸಂಪರ್ಕ ಕಲ್ಪಿಸುವ ಪ್ರಮುಖ 22 ರಸ್ತೆಗಳು ಸುಸ್ತಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಜತೆಗೆ ಹೊರ ವರ್ತುಲ ರಸ್ತೆಯಲ್ಲಿ ಬರುವ ಮೇಲುಸೇತುವೆಗಳಲ್ಲಿನ ಮೇಲ್ಪದರವನ್ನು ಸರಿಪಡಿಸಬೇಕು. ಪಣತ್ತೂರ್ ರಸ್ತೆ ಅಗಲೀಕರಣ ಕಾಮಗಾರಿಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕು” ಎಂದು ಸೂಚಿಸಿದರು.

Advertisements

“ಹೊರ ವರ್ತುಲ ರಸ್ತೆಯಲ್ಲಿ ಕೈಗೆತ್ತಿಕೊಂಡಿರುವ ಮೆಟ್ರೋ ಕಾಮಗಾರಿ ಪೂರ್ಣಗೊಂಡಲ್ಲಿ ಈ ಭಾಗದಲ್ಲಾಗುವ ಸಂಚಾರದಟ್ಟಣೆಯು ಕಡಿಮೆಯಾಗಲಿದೆ. ಮೆಟ್ರೋ ಕಾಮಗಾರಿ ಪೂರ್ಣಗೊಂಡಿರುವ ಕಡೆ ಹಾಕಿರುವ ಬ್ಯಾರಿಗೇಟ್‌ಗಳನ್ನು ತೆರವುಗೊಳಿಸಬೇಕು. ಸರ್ವೀಸ್ ರಸ್ತೆಯಲ್ಲಿ ವಾಹನ ಸವಾರರಿಗೆ ಸಂಚರಿಸಲು ಯಾವುದೇ ಅಡೆ-ತಡೆ ಆಗದಂತೆ ನೋಡಿಕೊಳ್ಳಕು” ಎಂದು ಹೇಳಿದರು.

“ನಗರದಲ್ಲಿ ಈಗಾಗಲೇ ಮಳೆಗಾಲ ಪ್ರಾರಂಭವಾಗಿದ್ದು, ರಾಜಕಾಲುವೆಗಳ ಸಮರ್ಪಕ ನಿರ್ವಹಣೆ ಮಾಡಿ, ಮಳೆಯಾಗುವ ಸಂದರ್ಭದಲ್ಲಿ ಎಲ್ಲಿಯೂ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ನಟ ದರ್ಶನ್ ವಿರುದ್ಧದ ಕೊಲೆ ಪ್ರಕರಣ; ಮತ್ತಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗತಿ

ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಮಹೇಶ್ವರ್ ರಾವ್ ಮಾತನಾಡಿ, “ಮೆಟ್ರೊ 2ಎ ಕಾಮಗಾರಿ ನಡೆಯುವ ರಸ್ತೆಯ ಮಿಡಿಯನ್ ನಿರ್ವಹಣೆ ಮೆಟ್ರೋ ವತಿಯಿಂದಲೇ ಮಾಡಲಿದ್ದು, ಬಿಬಿಎಂಪಿ ಹಾಗೂ ಮೆಟ್ರೊ ಸಮನ್ವಯದಲ್ಲಿ ಮೆಟ್ರೋ ಕಾಮಗಾರಿಯನ್ನು ನಾಗರಿಕರಿಗೆ ಹಾಗೂ ಐಟಿ ಉದ್ಯೋಗಿಗಳಿಗೆ ತೊಂದರೆ ಉಂಟಾಗದ ರೀತಿ ಕಾರ್ಯ ನಿರ್ವಹಿಸಲಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಮಹದೇವಪುರ ವಲಯ ಆಯುಕ್ತರಾದ ರಮೇಶ್, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ಮಹದೇವಪುರ ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ, ಮುಖ್ಯ ಅಭಿಯಂತರರಾದ ಲೋಕೇಶ್, ಒಆರ್‌ಆರ್‌ಸಿಎ ಉಪಾಧ್ಯಕ್ಷರಾದ ಅರ್ಚನಾ ಟಯಾದೆ, ಪಾಲಿಕೆ, ಮೆಟ್ರೋ, ಜಲಮಂಡಳಿ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X