ಬೆಂಗಳೂರು | ಎಂಟು ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆಯ ಇ-ಮೇಲ್

Date:

Advertisements

ಬೆಂಗಳೂರಿನ ಎಂಟು ಶಾಲೆಗಳ ಇ-ಮೇಲ್‌ಗಳಿಗೆ ಬಾಂಬ್‌ ಸ್ಪೋಟಿಸುವ ಬೆದರಿಕೆಯ ಸಂದೇಶಗಳು ಮಂಗಳವಾರ ಬಂದಿದ್ದವು. ಶಾಲೆಗಳ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಕಾರ್ಯ ಸನ್ನದ್ಧರಾದ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಸಂದೇಶವು ಹುಸಿ ಬೆದರಿಕೆ ಎಂದು ಪೊಲೀಸರು ದೃಢಪಡಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಶಾಲೆಗಳಿಂದ ಬಂದ ಕರೆಗಳನ್ನು ಅನುಸರಿಸಿ, ಪೊಲೀಸರು ಶಾಲಾ ಕ್ಯಾಂಪಸ್‌ಗಳಿಗೆ ಬಾಂಬ್‌ ಪತ್ತೆದಳ, ಬಾಂಬ್‌ ನಿಷ್ಕ್ರಿಯ ದಳ, ಶ್ವಾನದಳದೊಂದಿಗೆ ಧಾವಿಸಿ, ವ್ಯಾಪಕ ಶೋಧ ನಡೆಸಿದರು. ಆದರೆ, ಸ್ಫೋಟದ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ಇದೊಂದು ಹುಸಿ ಸಂದೇಶವೆಂದು ಗೊತ್ತಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರು ಸ್ಕಾಟಿಷ್ ಶಾಲೆ, ಭವನ್ ಬೆಂಗಳೂರು ಪ್ರೆಸ್ ಸ್ಕೂಲ್, ಚಿತ್ರಕೂಟ ಶಾಲೆ, ದೀಕ್ಷಾ ಹೈಸ್ಕೂಲ್, ಎಡಿಫೈ ಸ್ಕೂಲ್, ಗಂಗೋತ್ರಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್, ಗಿರಿಧನ್ವ ಶಾಲೆ ಮತ್ತು ಜೈನ್ ಹೆರಿಟೇಜ್ ಶಾಲೆಗಳಿಗೆ ಸೋಮವಾರ ಮಧ್ಯರಾತ್ರಿ ಇಮೇಲ್ ಮೂಲಕ ದುಷ್ಕರ್ಮಿಗಳು ಬಾಂಬ್ ಇರುವುದಾಗಿ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಮಂಗಳವಾರ ಬೆಳಗ್ಗೆ ಇಮೇಲ್ ನೋಡಿದ ಶಾಲಾ ಸಿಬ್ಬಂದಿ ಕೂಡಲೇ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

Advertisements

ಸೋಮವಾರ ರಾತ್ರಿ ಇ–ಮೇಲ್‌ನಲ್ಲಿ ಕಿಡಿಗೇಡಿಗಳು ಬೆದರಿಕೆಯ ಸಂದೇಶ ಕಳುಹಿಸಿದ್ದರು. ಮಂಗಳವಾರ ಬೆಳಿಗ್ಗೆ 7.30 ಸುಮಾರಿಗೆ ಶಾಲಾ ಸಿಬ್ಬಂದಿ ಇ–ಮೇಲ್‌ ಪರಿಶೀಲಿಸಿದಾಗ ಬೆದರಿಕೆ ಸಂದೇಶ ಬಂದಿರುವುದು ತಿಳಿದಿದೆ.

ನಾನು ನಿಮ್ಮ ಕಟ್ಟಡದ ಒಳಗೆ ಸ್ಫೋಟಕ ಸಾಧನಗಳನ್ನು ಇರಿಸಿದ್ದೇನೆ. ಮುಂದಿನ ಗಂಟೆಗಳಲ್ಲಿ ಅವು ಸ್ಫೋಟಗೊಳ್ಳುತ್ತವೆ ಎಂದು ಇ–ಮೇಲ್‌ನಲ್ಲಿ ಬರೆಯಲಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ರೈಲು ನಿಲ್ದಾಣಗಳಿಂದ 22 ಮಕ್ಕಳನ್ನು ರಕ್ಷಿಸಿದ ಆರ್‌ಪಿಎಫ್‌

ಭಾನುವಾರ ಆಸ್ಪತ್ರೆಗಳಿಗೆ ಕಳುಹಿಸಲಾದ ಮಾಹಿತಿಯನ್ನು ಅದು ಹೊಂದಿತ್ತು. Beeble.com ಡೊಮೇನ್‌ನಿಂದ ಕಳುಹಿಸಲಾದ ಇಮೇಲ್‌ಗಳು “ಕೋರ್ಟ್” ಎಂಬ ಗುಂಪಿನಿಂದ ಬಂದಿವೆ ಎನ್ನಲಾಗಿದೆ.

“ಈಗ ಬೇಸಿಗೆ ರಜೆಗಾಗಿ ಶಾಲೆಗಳನ್ನು ಮುಚ್ಚಲಾಗಿದೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿರಲಿಲ್ಲ. ಸಿಬ್ಬಂದಿ ಮಾತ್ರ ಇದ್ದರು. ನಾವು ಎಲ್ಲ ರೀತಿಯ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಅನುಸರಿಸಿದ್ದೇವೆ. ಯಾವುದೇ ಭಯವಿಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇಮೇಲ್ ಕಳುಹಿಸುವವರು ವರ್ಚುವಲ್ ಖಾಸಗಿ ನೆಟ್‌ವರ್ಕ್‌ಗಳನ್ನು ಬಳಸಿದ್ದರಿಂದ ಏಪ್ರಿಲ್ 2022 ಮತ್ತು ಡಿಸೆಂಬರ್ 2023 ರಲ್ಲಿ ಇದೇ ರೀತಿಯ ಸುಳ್ಳು ಬಾಂಬ್ ಬೆದರಿಕೆ ಇಮೇಲ್‌ಗಳನ್ನು ಸ್ವೀಕರಿಸಿದ ಶಾಲೆಗಳ ಹಿಂದಿನ ಪ್ರಕರಣಗಳ ತನಿಖೆಗಳು ಸ್ಥಗಿತಗೊಂಡಿವೆ.

ಈ ಹಿಂದೆಯೂ ನಗರದ ಶಾಲೆಗಳಿಗೆ ಇದೇ ರೀತಿಯ ಬೆದರಿಕೆ ಇ–ಮೇಲ್‌ಗಳು ಬಂದಿದ್ದವು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X