ಬೆಂಗಳೂರು | ವಿಮಾನ ನಿಲ್ದಾಣದಲ್ಲಿ ಸುಮಾರು ₹1 ಕೋಟಿ ಮೌಲ್ಯದ ಚಿನ್ನಾಭರಣ ವಶ

Date:

Advertisements

ಬೆಂಗಳೂರು ವಿಮಾನ ಕಸ್ಟಮ್ಸ್‌ ಏರ್ ಇಂಟೆಲಿಜೆನ್ಸ್‌ ಅಧಿಕಾರಿಗಳು ಸೋಮವಾರ ಮಹಿಳೆ ಸೇರಿದಂತೆ ನಾಲ್ವರು ಪ್ರಯಾಣಿಕರಿಂದ ₹1 ಕೋಟಿ ಮೌಲ್ಯದ 1.5 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಈ ಎಲ್ಲ ಪ್ರಯಾಣಿಕರು ಗಲ್ಫ್ ರಾಷ್ಟ್ರಗಳು ಮತ್ತು ಮಲೇಷ್ಯಾದಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಭಾರತೀಯರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈಗ ದಾಖಲಾದ ಎಲ್ಲ ಪ್ರಕರಣಗಳಲ್ಲಿಯೂ ಬಟ್ಟೆಯೊಳಗೆ ಚಿನ್ನವನ್ನು ಮರೆಮಾಚಲಾಗಿದೆ. ಕಾರ್ಯವಿಧಾನ ಒಂದೇ ರೀತಿಯಾಗಿದೆ.

Advertisements

ಕೌಲಾಲಂಪುರದಿಂದ ಏರ್ ಏಷ್ಯಾ ವಿಮಾನದಲ್ಲಿ (ಎಕೆ-053) ರಾತ್ರಿ 11 ಗಂಟೆ ಸುಮಾರಿಗೆ ಬೆಂಗಳೂರಿನ ಏರ್‌ಪೋರ್ಟ್‌ಗೆ ಬಂದಿಳಿದ 30 ವರ್ಷದ ಯುವಕನ ಬಳಿ 197.43 ಗ್ರಾಂ ತೂಕದ ಚಿನ್ನ ಪತ್ತೆಯಾಗಿದೆ. ಇದರ ಒಟ್ಟು ಮಾರುಕಟ್ಟೆ ಮೌಲ್ಯ ₹12,55,655 ಆಗಿದೆ. ದೇಶದೊಳಗೆ ಕಚ್ಚಾ ಚಿನ್ನವನ್ನು ಯಾವುದೇ ರೂಪದಲ್ಲಿ ತರುವುದನ್ನು ನಿಷೇಧಿಸಲಾಗಿದೆ.

ಈತ ಬೆಂಗಳೂರಿನಲ್ಲಿ ಐಟಿ ಮತ್ತು ಹಾರ್ಡ್‌ವೇರ್ ಉಪಕರಣಗಳನ್ನು ಮಾರಾಟ ಮಾಡುತ್ತಿದ್ದನು.

ಮತ್ತೊಂದು ಘಟನೆಯಲ್ಲಿ, ಏರ್ ಅರೇಬಿಯಾ ವಿಮಾನದಲ್ಲಿ (ಜೆ 9-431) ಕುವೈತ್‌ನಿಂದ ಆಗಮಿಸಿದ ಮಹಿಳಾ ಪ್ರಯಾಣಕಿ ಒಟ್ಟು 196.73 ಗ್ರಾಂ ತೂಕದ ಕಚ್ಚಾ ಚಿನ್ನದ ಕಟ್ ಚೈನ್‌ಗಳು, ಬಳೆಗಳು ಮತ್ತು ಪೆಂಡೆಂಟ್‌ಗಳನ್ನು ತನ್ನ ಬಟ್ಟೆಯೊಳಗೆ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ. ಇದರ ಮೌಲ್ಯ ₹12,51,203 ಇದೆ.

ಮದೀನಾ ಮತ್ತು ಬಹ್ರೇನ್‌ನಿಂದ ಆಗಮಿಸಿದ ಇನ್ನಿತರ ಇಬ್ಬರು ಪ್ರಯಾಣಿಕರು ವಿದೇಶಿ ಮೂಲದ ಕಚ್ಚಾ ಚಿನ್ನವನ್ನು ಚೈನ್‌ಗಳು ಮತ್ತು ಸಣ್ಣ ಚಿನ್ನದ ಬಾರ್‌ಗಳ ರೂಪದಲ್ಲಿ ಕಳ್ಳಸಾಗಣೆ ಮಾಡಲು ಯತ್ನಿಸಿದಾಗ ಸಿಕ್ಕಿಬಿದ್ದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಪಾಯಕಾರಿ ಶ್ವಾನ ತಳಿ ಸಂತಾನೋತ್ಪತ್ತಿ ನಿಷೇಧಿಸಿದ ಕೇಂದ್ರ: ಹೈಕೋರ್ಟ್ ತಡೆ

ಈ ಇಬ್ಬರಿಂದಲೂ ₹74,64,986 ಮೌಲ್ಯದ ಒಟ್ಟು 1.167 ಕೆಜಿ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ಪ್ರಯಾಣಿಕರು ಮದೀನಾದಿಂದ ಏರ್ ಅರೇಬಿಯಾ ವಿಮಾನಗಳ ಮೂಲಕ ಶಾರ್ಜಾಕ್ಕೆ (G9-176) ಮತ್ತು ಶಾರ್ಜಾದಿಂದ ಬೆಂಗಳೂರಿಗೆ (G9-496) ಬಹ್ರೇನ್‌ನಿಂದ ಗಲ್ಫ್ ಏರ್ (GF-282) ಮೂಲಕ ಬೆಂಗಳೂರಿಗೆ ಬಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X