ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ಸೇವಾವಧಿ ವಿಸ್ತರಣೆಗೆ ಚಿಂತನೆ; ಯುವಜನರಿಗೆ ಎಲ್ಲಿದೆ ಅವಕಾಶ?

Date:

Advertisements

ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರ ನಿವೃತ್ತಿ ವಯಸ್ಸನ್ನು 60ರಿಂದ 65ಕ್ಕೆ ಏರಿಸುವ ಚಿಂತನೆಯನ್ನು ಸರ್ಕಾರ ನಡೆಸಿದೆ. ಜಯದೇವ ಹೃದಯ ರಕ್ತನಾಳ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ವೈದ್ಯರೊಂದಿಗೆ ನಡೆಸಿದ ಸಂವಾದದ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಈ ಮಾಹಿತಿಯನ್ನು ನೀಡಿದ್ದಾರೆ.

ಸಂವಾದದ ವೇಳೆ ಹಿರಿಯ ವೈದ್ಯರುಗಳು ಸೇವಾವಧಿ ವಿಸ್ತರಿಸಬೇಕು ಎಂದು ಪ್ರಸ್ತಾಪಿಸಿದರು. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸಲೆಂದು ಹಲವು ವರ್ಷಗಳು ಕಷ್ಟಪಟ್ಟು ಕೆಲಸ ಮಾಡಲಾಗಿರುತ್ತದೆ. ಆದರೆ 20-25 ವರ್ಷ ಕಾಲ ಮಾತ್ರ ಈ ಸೇವೆ ಸಲ್ಲಿಸಲು ಅವಕಾಶ ಸಿಗುತ್ತದೆ. ಈ ನಿಟ್ಟಿನಲ್ಲಿ ಸೇವಾವಧಿ ವಿಸ್ತರಿಸಬೇಕು ಎಂದು ಮನವಿ ಮಾಡಿದರು.

ಇದನ್ನು ಓದಿದ್ದೀರಾ? ಕಳ್ಳರಾದರೇ ಸರ್ಕಾರಿ ವೈದ್ಯರು; ವೈದ್ಯರಿಗೆ 4 ಬಾರಿ ಬಯೋಮೆಟ್ರಿಕ್ ಅಸ್ತ್ರವೇಕೆ?

Advertisements

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ಸೇವಾವಧಿಯನ್ನು ಐದು ವರ್ಷಗಳ ಕಾಲ ವಿಸ್ತರಿಸುವ ನಿರ್ಧಾರ ಮಾಡಲಾಗುವುದು. ಅನುಭವಿ ವೈದ್ಯರನ್ನು ಹೆಚ್ಚು ಕಾಲ ಉಳಿಸಿಕೊಳ್ಳಲು ನಾವು ಉತ್ಸುಕರಾಗಿದ್ದೇವೆ ಎಂದಿದ್ದಾರೆ. ಆದರೆ ಸದ್ಯ ರಾಜ್ಯ ಸಚಿವರ ಈ ದ್ವಂದ್ವ ನಿಲುವು ಚರ್ಚೆಗೆ ಗ್ರಾಸವಾಗಿದೆ.

ಇತ್ತೀಚೆಗಷ್ಟೇ ಸರ್ಕಾರಿ ವೈದ್ಯರು ತಮ್ಮ ಕೆಲಸದ ಅವಧಿಯಲ್ಲಿ 4 ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸರ್ಕಾರ ನಿಯಮ ರೂಪಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸಲ್ಲ, ಬೆಳಿಗ್ಗೆ ಹಾಜರಾತಿ ಹಾಕಿ ಬಳಿಕ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುವ ಆರೋಪಗಳಿವೆ. ಈ ಆರೋಪ ನಿಜವೂ ಹೌದು. ಸರ್ಕಾರಿ ವೈದ್ಯರ ಸೇವೆಯ ಮೇಲೆ ನಿಗಾ ವಹಿಸುವ ನಿಟ್ಟಿನಲ್ಲಿ ಸರ್ಕಾರ ನಾಲ್ಕು ಬಾರಿ ಬಯೋಮೆಟ್ರಿಕ್ ನೀಡಬೇಕು ಎಂದು ಸೂಚಿಸಿದೆ.

ಇದನ್ನು ಓದಿದ್ದೀರಾ? ಮಂಗಳೂರು | ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು

ಈಗ ಅದೇ ಸರ್ಕಾರ ಈ ವೈದ್ಯರುಗಳ ಸೇವಾವಧಿಯನ್ನು ವಿಸ್ತರಿಸುವ ನಿರ್ಧಾರವನ್ನು ಮಾಡಿದೆ. ಒಂದೆಡೆ ಸರ್ಕಾರಿ ವೈದ್ಯರು ವೇತನ ಪಡೆಯುತ್ತಾರೆ, ಆದರೆ ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬ ಕಾರಣಕ್ಕೆ ಕ್ರಮ ಕೈಗೊಳ್ಳುವುದು. ಮತ್ತೊಂದೆಡೆ ಅದೇ ವೈದ್ಯರಿಗೆ ಇನ್ನೂ ಐದು ವರ್ಷಗಳ ಕಾಲ ವೇತನ ಪಡೆಯಲು ಅವಕಾಶ ನೀಡಿ ಸೇವಾವಧಿ ವಿಸ್ತರಣೆ ಮಾಡುವುದು!

ವೃತ್ತಿಪರರಿಗೆ, ನುರಿತರಿಗೆ ಅವಕಾಶ ನೀಡಬೇಕೆಂಬುದು ಸರಿ. ಆದರೆ ಯುವಜನರಿಗೆ, ಮುಂದಿನ ಪೀಳಿಗೆಗೆ ಕಲಿಕೆಯ ಅವಕಾಶ ಎಲ್ಲಿದೆ? ವೈದ್ಯಕೀಯ ಶಿಕ್ಷಣ ಪಡೆದ ಲಕ್ಷಾಂತರ ವಿದ್ಯಾರ್ಥಿಗಳು ಇಂದಿಗೂ ಉದ್ಯೋಗದ ಹುಡುಕಾಟದಲ್ಲಿದ್ದಾರೆ. ಈ ಯುವಜನರಿಗೆ ಸರಿಯಾದ ತರಬೇತಿ ನೀಡಿ, ಉದ್ಯೋಗವಕಾಶ ಕಲ್ಪಿಸಬೇಕಾಗಿದ್ದು ಸರ್ಕಾರದ ಜವಾಬ್ದಾರಿಯಾಗಿದೆ. ಆದರೆ ಯುವಜನರಿಗೆ ಅವಕಾಶ ನೀಡದೆ 60 ವರ್ಷ ದಾಟಿದ ಹಿರಿಯ ನಾಗರಿಕರಿಗೆ ಮತ್ತಷ್ಟು ಅವಕಾಶ ನೀಡುವುದು ಹೇಗೆ ಸರಿ? ಈ ಹಿರಿಯ ವೈದ್ಯರನ್ನು ಯುವಕರಿಗೆ ತರಬೇತಿ ನೀಡಲು ನೇಮಿಸಬಹುದಲ್ಲವೇ?

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X