ಗೃಹಜ್ಯೋತಿ | ಉಚಿತ ವಿದ್ಯುತ್ ಬಿಲ್​ನಿಂದ ಆಧಾರ್ ಡೀಲಿಂಕ್ ಮಾಡುವುದು ಹೇಗೆ?

Date:

Advertisements

ರಾಜ್ಯದ ಜನರಿಗೆ ವಿಧಾನಸಭಾ ಚುನಾವಣೆ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅಸ್ತಿತ್ವಕ್ಕೆ ತರುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಐದು ಗ್ಯಾರಂಟಿ ಯೋಜನೆಗಳ ಪೈಕಿ ಗೃಹಜ್ಯೋತಿ ಯೋಜನೆಯ ಲಾಭವನ್ನು ಕೋಟ್ಯಾಂತರ ಜನರು ಉಪಯೋಗಿಸುತ್ತಿದ್ದಾರೆ. ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು ಈ ಯೋಜನೆಯಾಗಿದೆ.

ಜನರು ಈ ಯೋಜನೆಯ ಲಾಭ ಪಡೆಯಲು ಕಡ್ಡಾಯವಾಗಿ ಪ್ರತಿ ಬೆಸ್ಕಾಂ ಖಾತೆಗೂ ತಮ್ಮ ಆಧಾರ್‌ ಲಿಂಕ್ ಮಾಡಿಸಲೇಬೇಕು. ಆಗ ಮಾತ್ರ ಗ್ರಾಹಕರು ‘ಗೃಹ ಜ್ಯೋತಿ’ ಯೋಜನೆಯ ಲಾಭ ಪಡೆಯಬಹುದು. ಮನೆ ಮಾಲೀಕರು ಹೀಗೆ ಲಾಭ ಪಡೆದರೇ, ಸಮಸ್ಯೆಇಲ್ಲ. ಆದರೆ, ಬಾಡಿಗೆದಾರರು ಸಾಮಾನ್ಯವಾಗಿ ಒಂದು-ಮನೆಯಿಂದ ಬೇರೆ ಮನೆಗೆ ಸ್ಥಳಾಂತರವಾಗುತ್ತಾರೆ. ಅವರು ಒಂದು ಬಾರಿ ಬಾಡಿಗೆ ಇರುವ ಮನೆಗೆ ಆಧಾರ ಲಿಂಕ್ ಮಾಡಿಸಿ, ಗೃಹಜ್ಯೋತಿ ಯೋಜನೆ ಪಡೆದುಕೊಂಡರೆ, ಮುಂದೆ ಈ ಮನೆ ಬಿಟ್ಟು ಬೇರೆ ಮನೆಗೆ ಹೋದಮೇಲೆ ಹೇಗೆ ಮತ್ತೆ ಯೋಜನೆಯ ಲಾಭ ಪಡೆಯುವುದು ಎಂಬುದು ಚಿಂತೆಗೀಡು ಮಾಡಿತ್ತು.

ಇದೇ, ವಿಚಾರವಾಗಿ ಬಹಳಷ್ಟು ಬಾಡಿಗೆದಾರರು ಪರಿತಪಿಸುತ್ತಿದ್ದಾರೆ. ಇದೀಗ, ಗ್ರಾಹಕರ ಚಿಂತೆಗೆ ಒಂದು ಪರಿಹಾರ ದೊರತಿದೆ.

Advertisements

ಬಾಡಿಗೆದಾರರ ಸಮಸ್ಯೆಗಳ ಬಗ್ಗೆ ಅರಿತಿರುವ ಸರ್ಕಾರ ಮತ್ತು ಎಸ್ಕಾಂ ಗೃಹಜ್ಯೋತಿ ಯೋಜನೆಯಲ್ಲಿ ವಿದ್ಯುತ್ ಬಿಲ್‌ನಿಂದ ಆಧಾರ್ ಲಿಂಕ್‌ ಅನ್ನು ಡೀಲಿಂಕ್ ಮಾಡುವ ಅವಕಾಶ ಕಲ್ಪಿಸಿದೆ.

ಆಧಾರ ಲಿಂಕ್‌ ಅನ್ನು ಡೀಲಿಂಕ್ ಮಾಡಲು ಗ್ರಾಹಕರು ನೇರವಾಗಿ ಎಸ್ಕಾಂ ಕಚೇರಿಗೆ ತೆರಳಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಡೀಲಿಂಕ್ ಮಾಡಿಕೊಳ್ಳಬಹುದು. ಇನ್ನು ಆನ್​ಲೈನ್​ನಲ್ಲಿಯೂ ಕೂಡ ಗ್ರಾಹಕರು ಸೇವಾ ಸಿಂಧು ಪೋರ್ಟಲ್​ನ ಮೂಲಕ ಡೀಲಿಂಕ್‌ ಮಾಡಿಕೊಳ್ಳುವ ಅವಕಾಶ ಆದಷ್ಟೂ ಬೇಗ ಸಿಗಲಿದೆ ಎನ್ನಲಾಗಿದೆ.

ಗ್ರಾಹಕರು ನೇರವಾಗಿ ತಮ್ಮ ಮನೆಯ ಸಮೀಪವಿರುವ ಎಸ್ಕಾಂ ಕಚೇರಿಗೆ ತೆರಳಿ ಆಧಾರ ಡೀಲಿಂಕ್ ಮಾಡಲು ಮನೆಯ ವಿದ್ಯುತ್ ಬಿಲ್, ಲಿಂಕ್ ಆಗಿರುವ ಆಧಾರ್ ಕಾರ್ಡ್ ಪ್ರತಿ, ನಿಮ್ಮ ಭಾವಚಿತ್ರ, ಬಾಡಿಗೆ ಕರಾರು ಪತ್ರಗಳನ್ನು ತೆಗೆದುಕೊಂಡು ಹೋಗಬೇಕು.

ಹಾಗೆಯೇ, ಗೃಹಜ್ಯೋತಿ ಸ್ಕೀಮ್​ಗೆ ಅರ್ಜಿ ಸಲ್ಲಿಸಲಾಗಿದ್ದ ಅಪ್ಲಿಕೇಶನ್ ನಂಬರ್ ಮತ್ತು ಮೊಬೈಲ್ ನಂಬರ್​ನ ಮಾಹಿತಿಯನ್ನು ಕಚೇರಿಯಲ್ಲಿ ತಿಳಿಸಬೇಕಾಗುತ್ತದೆ.

ಈ ಸುದ್ದಿ ಓದಿದ್ದೀರಾ? ಉತ್ತಮ ನಡೆ | ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ

ಸದ್ಯ ಸೇವಾ ಸಿಂಧು ಪೋರ್ಟ್‌ನಲ್ಲಿ ಅಥವಾ ಆನ್‌ಲೈನ್‌ನಲ್ಲಿ ಈ ಯೋಜನೆಯಲ್ಲಿ ಆಧಾರ ಡೀಲಿಂಕ್ ಮಾಡುವ ಸೌಲಭ್ಯ ಸಧ್ಯಕ್ಕೆ ಇಲ್ಲ. ಶೀಘ್ರದಲ್ಲೇ ಇದು ಲಭ್ಯವಾಗಲಿದೆ.

ಆನ್‌ಲೈನ್‌ಲ್ಲಿ ಮುಂದಿನ ದಿನಗಳಲ್ಲಿ ಆಧಾರ ಡೀಲಿಂಕ್ ಆಡಿಸುವುದಾದರೇ, ಆಗ ಸೇವಾ ಸಿಂಧು ವೆಬ್​ಸೈಟ್ sevasindhugs1.karnataka.gov.in/gruhajyothi ​ಗೆ ತೆರಳಿ ಯೋಜನೆ ಕ್ಯಾನ್ಸಲ್ ಮಾಡಬಹುದು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ನಗರದ ವಿವಿಧ ಬಡಾವಣೆಗಳಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಅಡಿಗಲ್ಲು

ರಾಯಚೂರು ನಗರದ ವಾರ್ಡ್ ನಂ.34ರ ಬಂದೇನವಾಜ ಕಾಲೋನಿ, ದೇವರಾಜ ಅರಸ್ ಕಾಲೋನಿ,...

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

Download Eedina App Android / iOS

X