ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

Date:

Advertisements

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಆಗಸ್ಟ್ 17 ಮತ್ತು 18ರಂದು ತೀವ್ರ ಮಳೆಯ ಸಾಧ್ಯತೆಯಿಂದ ರೆಡ್ ಅಲರ್ಟ್ ಜಾರಿಯಲ್ಲಿದೆ. ಆಗಸ್ಟ್ 19 ಮತ್ತು 20ರಂದು ಈ ಪ್ರದೇಶಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಮತ್ತು ಕೊಡಗು ಜಿಲ್ಲೆಗಳಿಗೆ ಆಗಸ್ಟ್ 17-18ರಂದು ರೆಡ್ ಅಲರ್ಟ್ ಜಾರಿಯಿದ್ದು, ಆಗಸ್ಟ್ 19-20ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ಮತ್ತು ಹಾಸನ ಜಿಲ್ಲೆಗಳಿಗೆ ಆಗಸ್ಟ್ 17ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆಗಸ್ಟ್ 19ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರಿಗೆ ರೆಡ್ ಅಲರ್ಟ್, ಜೊತೆಗೆ ಕೊಡಗು, ಹಾಸನ, ಧಾರವಾಡ, ಬಾಗಲಕೋಟೆ ಮತ್ತು ಬೆಳಗಾವಿಗೆ ಆರೆಂಜ್ ಅಲರ್ಟ್ ಜಾರಿಯಾಗಲಿದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಿಗೆ ಆಗಸ್ಟ್ 17-19ರವರೆಗೆ ಆರೆಂಜ್ ಅಲರ್ಟ್ ಮತ್ತು ಆಗಸ್ಟ್ 20ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪುಕೋಟೆಯಲ್ಲಿ ನಿಂತು ಮೋದಿ ಆರ್‌ಎಸ್‌ಎಸ್‌ಅನ್ನು ಹೊಗಳುವ ದರ್ದು ಏನು?

ಮೈಸೂರು ಮತ್ತು ಚಾಮರಾಜನಗರದಲ್ಲಿ ಆಗಸ್ಟ್ 17ರಂದು ಯೆಲ್ಲೋ ಅಲರ್ಟ್ ಜಾರಿಯಿದೆ. ಬೆಂಗಳೂರಿನಲ್ಲಿ ಆಗಸ್ಟ್ 21ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಂಗಾಳ ಕೊಲ್ಲಿಯ ಆಂಧ್ರಪ್ರದೇಶ ಮತ್ತು ಒಡಿಶಾ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದ ಈ ಭಾರೀ ಮಳೆಯ ಸಾಧ್ಯತೆ ಉಂಟಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಆಗುಂಬೆಯಲ್ಲಿ 14 ಸೆಂ.ಮೀ, ಕಮ್ಮರಡಿ, ಗೇರುಸೊಪ್ಪ, ಶೃಂಗೇರಿಯಲ್ಲಿ ತಲಾ 10 ಸೆಂ.ಮೀ, ಸಿದ್ದಾಪುರ, ಕೊಪ್ಪ, ಧರ್ಮಸ್ಥಳ ಮತ್ತು ಭಾಗಮಂಡಲದಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ನಾಗಪುರ ದೀಕ್ಷಾಭೂಮಿ ಯಾತ್ರೆಗೆ 7,700 ಯಾತ್ರಾರ್ಥಿಗಳ ಆಯ್ಕೆ – ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ

ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿಗೆ ಕಳುಹಿಸುವ...

Download Eedina App Android / iOS

X