ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

Date:

Advertisements

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಈ ಹಿನ್ನೆಲೆ, ನದಿಗಳಿಗೆ ಒಳಹರಿವು ಸಂಪೂರ್ಣ ಕಡಿಮೆಯಾಗಿದೆ. ಇದೀಗ ಪೂರ್ವ ಮುಂಗಾರು ಆರಂಭವಾಗಿದ್ದು, ರಾಜ್ಯದ ಕೆಲವೆಡೆ ತುಂತುರು ಮಳೆಯಾಗುತ್ತಿದೆ. ಸದ್ಯ ಜಲಾಶಯಗಳ ನೀರಿನ ಮಟ್ಟ ಕುಸಿತ ಕಂಡಿದೆ.

ಬೇಸಿಗೆ ಕಾಲ ಆರಂಭಕ್ಕೂ ಮುನ್ನವೇ ರಾಜ್ಯದಲ್ಲಿ ಬಿರು ಬಿಸಿಲಿನ ವಾತಾವರಣ ತುಂಬಿತ್ತು. ಇದೀಗ, ದಿನೇದಿನೆ ಏರಿಕೆಯಾಗುತ್ತಿರುವ ತಾಪಮಾನದಿಂದ ಜನರು ಬಿಸಿಲಿನ ಶಾಖಕ್ಕೆ ಕಂಗಾಲಾಗಿದ್ದಾರೆ. ಜಲಾಶಯಗಳಲ್ಲಿ ನೀರು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಸದ್ಯ ಕೆಆರ್​ಎಸ್​ ಡ್ಯಾಂನಲ್ಲಿ ಕೇವಲ 12.08 ಟಿಎಂಸಿ ನೀರು ಮಾತ್ರ ಇದೆ. ಇನ್ನು ರಾಜ್ಯದ ಅತಿ ದೊಡ್ಡ ಜಲಾಶಯ ಎಂಬ ಖ್ಯಾತಿ ಗಳಿಸಿರುವ ತುಂಗಭದ್ರಾ ಆಣೆಕಟ್ಟಿನಲ್ಲಿ ಕೇವಲ 3.87 ಟಿಎಂಸಿ ನೀರು ಇದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಗ್ರಾಮಾಂತರ | ಕಾಂಗ್ರೆಸ್‌ನ ಡಿ.ಕೆ. ಸುರೇಶ್ ಪರ ನಟ ದರ್ಶನ್ ಪ್ರಚಾರ

Advertisements

ಏಪ್ರಿಲ್ 20ರಂದು ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಎಷ್ಟಿದೆ?

  • ಆಲಮಟ್ಟಿ ಜಲಾಶಯದ ಗರಿಷ್ಠ ನೀರಿನ ಮಟ್ಟ 519.6 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 123.08 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 33.07 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 27.51 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 902 ಕ್ಯೂಸೆಕ್ ಹೊರಹರಿವು ಇದೆ.
  • ತುಂಗಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 497.71 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 105.79 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 3.87 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 3.09 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 200 ಕ್ಯೂಸೆಕ್ ಹೊರಹರಿವು ಇದೆ.
  • ಮಲಫ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ 633.8 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.73 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 08.39 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 10.76 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 194 ಕ್ಯೂಸೆಕ್ ಹೊರಹರಿವು ಇದೆ.
  • ಕೆ ಆರ್‌ ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 38.04 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 49.45 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 12.08 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 17.91 ಟಿಎಂಸಿ ಇತ್ತು. 7 ಕ್ಯೂಸೆಕ್ ಒಳಹರಿವು ಇದ್ದು, 330 ಕ್ಯೂಸೆಕ್ ಹೊರಹರಿವು ಇದೆ.
  • ಲಿಂಗನಮಕ್ಕಿ ಜಲಾಶಯದ ಗರಿಷ್ಠ ನೀರಿನ ಮಟ್ಟ 554.44 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 151.75 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 23.64 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 37.41 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 2652 ಕ್ಯೂಸೆಕ್ ಹೊರಹರಿವು ಇದೆ.
  • ಕಬಿನಿ ಜಲಾಶಯದ ಗರಿಷ್ಠ ನೀರಿನ ಮಟ್ಟ 696.13 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 19.52 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 08.10 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 05.64 ಟಿಎಂಸಿ ಇತ್ತು. 14 ಕ್ಯೂಸೆಕ್ ಒಳಹರಿವು ಇದ್ದು, 800 ಕ್ಯೂಸೆಕ್ ಹೊರಹರಿವು ಇದೆ.
  • ಭದ್ರಾ ಜಲಾಶಯದ ಗರಿಷ್ಠ ನೀರಿನ ಮಟ್ಟ 657.73 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 71.54 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 17.54 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 35.99 ಟಿಎಂಸಿ ಇತ್ತು. 75 ಕ್ಯೂಸೆಕ್ ಒಳಹರಿವು ಇದ್ದು, 793 ಕ್ಯೂಸೆಕ್ ಹೊರಹರಿವು ಇದೆ.
  • ಘಟಪ್ರಭಾ ಜಲಾಶಯದ ಗರಿಷ್ಠ ನೀರಿನ ಮಟ್ಟ 662.91 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 51 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 19.91 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 13.17 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 3096 ಕ್ಯೂಸೆಕ್ ಹೊರಹರಿವು ಇದೆ.
  • ಹೇಮಾವತಿ ಜಲಾಶಯದ ಗರಿಷ್ಠ ನೀರಿನ ಮಟ್ಟ 890.58 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 37.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 9.87 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 18.91 ಟಿಎಂಸಿ ಇತ್ತು. 7 ಕ್ಯೂಸೆಕ್ ಒಳಹರಿವು ಇದ್ದು, 330 ಕ್ಯೂಸೆಕ್ ಹೊರಹರಿವು ಇದೆ.
  • ವರಾಹಿ ಜಲಾಶಯದ ಗರಿಷ್ಠ ನೀರಿನ ಮಟ್ಟ 594.36 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 31.1 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 5.22 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 5.16 ಟಿಎಂಸಿ ಇತ್ತು. 0 ಕ್ಯೂಸೆಕ್ ಒಳಹರಿವು ಇದ್ದು, 0 ಕ್ಯೂಸೆಕ್ ಹೊರಹರಿವು ಇದೆ.
  • ಹಾರಂಗಿ ಜಲಾಶಯದ ಗರಿಷ್ಠ ನೀರಿನ ಮಟ್ಟ 871.38 ಮೀ ಇದ್ದು, ಒಟ್ಟು ನೀರಿನ ಸಾಮರ್ಥ್ಯ 8.5 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 3.11 ಟಿಎಂಸಿ ಇದೆ. ಕಳೆದ ವರ್ಷ ನೀರಿನ ಮಟ್ಟ 2.77 ಟಿಎಂಸಿ ಇತ್ತು. 153 ಕ್ಯೂಸೆಕ್ ಒಳಹರಿವು ಇದ್ದು, 200 ಕ್ಯೂಸೆಕ್ ಹೊರಹರಿವು ಇದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X