ದೇಶದ ಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿ ಉದ್ಘಾಟನೆ

Date:

Advertisements

ಕರ್ನಾಟಕವು ಮರುಬಳಕೆ ಮಾಡಬಹುದಾದ ಇಂಧನ ಉತ್ಪಾದನೆಗೆ ಒತ್ತು ಕೊಟ್ಟಿದ್ದು, ಸುಸ್ಥಿರ ಅಭಿವೃದ್ಧಿ ಸಾಧಿಸಲು ಇದೊಂದು ಪ್ರಮುಖ ಗುರಿಯಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಹೇಳಿದರು.

ದೊಡ್ಡಬಳ್ಳಾಪುರದ ಸಮೀಪ ಅಮೆರಿಕಾ ಮೂಲದ ಓಮಿಯಮ್ ಕಂಪನಿಯು ಸ್ಥಾಪಿಸಿರುವ ದೇಶದ ಪ್ರಪ್ರಥಮ ಗ್ರೀನ್ ಹೈಡ್ರೋಜನ್ ಎಲೆಕ್ಟ್ರೋಲೈಜರ್ ಗಿಗಾ ಫ್ಯಾಕ್ಟರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

“ಓಮಿಯಂ ಕಂಪನಿಯು 2,000 ಕೋಟಿ ರೂಪಾಯಿ ಹೂಡಿಕೆ ಮಾಡಿ, ಈ ಕಂಪನಿಯನ್ನು ಪ್ರಾರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇಲ್ಲಿ ಸದ್ಯಕ್ಕೆ ವರ್ಷಕ್ಕೆ 500 ಮೆಗಾವ್ಯಾಟ್ ಗ್ರೀನ್ ಹೈಡ್ರೋಜನ್ ಉತ್ಪಾದನೆ ಅಗಲಿದ್ದು, ಹಂತಹಂತವಾಗಿ 2,000 ಮೆಗಾವ್ಯಾಟ್ ಮಟ್ಟಕ್ಕೆ ಏರಿಸಲಾಗುವುದು. ಕಂಪನಿಯ ಉತ್ಪಾದನಾ ಚಟುವಟಿಕೆಯಿಂದ ಉದ್ಯೋಗಾವಕಾಶಗಳು ಕೂಡ ಸೃಷ್ಟಿಯಾಗಲಿವೆ” ಎಂದರು.

Advertisements

“ನೀರಿನಿಂದ ತಯಾರಾಗುವ ಗ್ರೀನ್-ಹೈಡ್ರೋಜನ್ ಅನ್ನು ಕಿಲೋಗ್ರಾಂ ಲೆಕ್ಕದಲ್ಲಿ ಅಳತೆ ಮಾಡಲಾಗುವುದು. ಇದರ ಸಂಗ್ರಹಣೆ ಮತ್ತು ಸಾಗಣೆ ಕೂಡ ಸುಲಭವಾಗಿದೆ. ಇದನ್ನು ರಸಗೊಬ್ಬರ ಮತ್ತು ಉಕ್ಕು ಉತ್ಪಾದನೆ, ವಾಹನಗಳಲ್ಲಿ ಎಥನಾಲ್ ಜತೆ ಮಿಶ್ರಣವಾಗಿ, ಸಂಸ್ಕರಣೆ ಪ್ರಕ್ರಿಯೆಗಳಲ್ಲಿ ಧಾರಾಳವಾಗಿ ಉಪಯೋಗಿಸಬಹುದು ಎಂದು” ವಿವರಿಸಿದರು.

“ರಾಜ್ಯವು ಕೈಗಾರಿಕಾ ಸ್ನೇಹಿಯಾಗಿದ್ದು, ಜಗತ್ತಿನ ಅತ್ಯುತ್ತಮ ಸಂಶೋಧನಾ ಸಂಸ್ಥೆಗಳು ಇಲ್ಲಿ ನೆಲೆಯೂರಿವೆ. ದೇಶದ ಆರ್ಥಿಕತೆಯನ್ನು 2030ರ ಹೊತ್ತಿಗೆ 5 ಟ್ರಿಲಿಯನ್ ಡಾಲರ್ ಮಟ್ಟಕ್ಕೆ ಕೊಂಡೊಯ್ಯುವ ಗುರಿಯಲ್ಲಿ ರಾಜ್ಯವು ನಿರ್ಣಾಯಕ ಪಾತ್ರ ವಹಿಸುತ್ತಿದೆ” ಎಂದರು.

“ರಾಜ್ಯದಲ್ಲಿ ವಿದ್ಯುತ್ ಚಾಲಿತ ವಾಹನಗಳು ಮತ್ತು ಪರಿಸರಸ್ನೇಹಿ ಹಾಗೂ ಮರುಬಳಕೆ ಮಾಡಬಹುದಾದ ಇಂಧನಗಳ ಉತ್ಪಾದನೆ ಭರದಿಂದ ನಡೆಯುತ್ತಿದೆ. ಇದನ್ನು ನಾವು ಪ್ರಮುಖ ವಲಯವಾಗಿ ಗುರುತಿಸಿದ್ದೇವೆ” ಎಂದು ತಿಳಿಸಿದರು.

“ರಚನಾತ್ಮಕ ಉಪಕ್ರಮಗಳ ಫಲವಾಗಿ ರಾಜ್ಯವು 2016ರಿಂದಲೂ ಹೂಡಿಕೆ ಆಕರ್ಷಣೆಯಲ್ಲಿ ಪ್ರಥಮ ಸ್ಥಾನದಲ್ಲಿದೆ” ಎಂದು ಸಚಿವ ಪಾಟೀಲ್‌ ಅವರು ವಿವರಿಸಿದರು.

ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಮಾತನಾಡಿ, ” ಗ್ರೀನ್ ಹೈಡ್ರೋಜನ್ ಉತ್ಪಾದನೆಗೆ ಭಾರತವು ಆದ್ಯತೆ ನೀಡಿದ್ದು, ಈ ಕ್ಷೇತ್ರದಲ್ಲಿ ಅಗ್ರಗಣ್ಯ ರಾಷ್ಟ್ರವಾಗಿದೆ. ಟಾಟಾ ಸಮೂಹ ಮತ್ತು ಎನ್ಟಿಪಿಸಿ ಕೂಡ ಇದರ ಲಾಭವನ್ನು ಮನಗಂಡಿವೆ” ಎಂದರು.

ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕ ಧೀರಜ್ ಮುನಿರಾಜು, ಶಾಸಕರೂ ಆದ ಕ್ರೆಡೆಲ್ ಅಧ್ಯಕ್ಷ ರಾಜೇಗೌಡ, ಕಂಪನಿಯ ಉನ್ನತ ಅಧಿಕಾರಿಗಳಾದ ಅಮಿ ಬಾಲಟೈನ್, ಅಶ್ವಿನ್ ವರ್ಮಾ ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X