ಕನ್ನಡ ನಾಮಫಲಕ | ಕರವೇ ವಿರುದ್ದ ಮತ್ತೆ ಮೂರು ಪ್ರಕರಣ ದಾಖಲು

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕ ಧ್ವಂಸ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವಿರುದ್ದ ಮತ್ತೆ ಮೂರು ಪ್ರಕರಣ ದಾಖಲಾಗಿವೆ.

ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಅಂಗಡಿ ಮುಂಗಟ್ಟುಗಳ ಮುಂದಿನ ಬೋರ್ಡ್ ಒಡೆದು ಹಾಕಿದ್ದಕ್ಕೆ ಸಾದಹಳ್ಳಿಯ ಬ್ಲೂಂ ಹೋಟೆಲ್ ಸೇರಿದಂತೆ ಶೋರೂಂ ಮಾಲೀಕರು ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿಟಿವಿ ಮತ್ತು ವಿಡಿಯೋ ಆಧರಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

Advertisements

ಬೆಂಗಳೂರಿನಲ್ಲಿರುವ ವಾಣಿಜ್ಯ ಅಂಗಡಿಗಳ ನಾಮಫಲಕಗಳು ಶೇ.60 ರಷ್ಟು ಇರಬೇಕೆಂದು ಡಿ.27ರಂದು ಕರವೇ ಆಗ್ರಹಿಸಿ ಪ್ರತಿಭಟನೆ ನಡೆಸಿತ್ತು. ಈ ವೇಳೆ, ಹಲವು ಅಂಗಡಿ-ಮುಂಗಟ್ಟುಗಳ ಬೋರ್ಡ್‌ ಒಡೆದು ಹಾಕಲಾಗಿತ್ತು. ಅಲ್ಲದೇ, ಹೂ ಕುಂಡ ಸೇರಿದಂತೆ ಶೋ ರೂಂ ಗಾಜುಗಳು ಪುಡಿಪುಡಿಯಾಗಿದ್ದವು. ಈ ಘಟನೆಗೆ ಸಂಬಂಧಿಸಿದಂತೆ, ಈಗಾಗಲೇ, 10 ಎಫ್​ಐಆರ್​ ದಾಖಲಾಗಿದ್ದು, ಕರವೇ ಅಧ್ಯಕ್ಷ ನಾರಾಯಣಗೌಡ ಸೇರಿ 53 ಜನರನ್ನ ಬಂಧಿಸಿ ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ಕೆಲವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ.

ಕರವೇ ಕಾರ್ಯಕರ್ತರನ್ನು ಬಂಧನ ಮಾಡಿದಕ್ಕೆ ಕನ್ನಡಪರ ಸಂಘಟನೆಗಳು ರಾಜ್ಯದ ಹಲವೆಡೆ ಪ್ರತಿಭಟನೆ ನಡೆಸುತ್ತಿವೆ. ಸರ್ಕಾರದ ನಡೆಗೆ ಕಿಡಿಕಾರಿವೆ.

ಈ ಸುದ್ದಿ ಓದಿದ್ದೀರಾ? ‘ಶಾಲೆಗೆ ಬನ್ನಿ ಶನಿವಾರ, ಸ್ವಚ್ಛಗೊಳಿಸೋಣ ಸರಸರ’ ಆಂದೋಲನ ಪ್ರಾರಂಭಿಸಲು ಸಕಾಲ: ನಿರಂಜನಾರಾಧ್ಯ ವಿ.ಪಿ.

“ಬಂಧನದಲ್ಲಿರುವ ಎಲ್ಲರನ್ನು ಬಿಡುಗಡೆ ಮಾಡಬೇಕು. ಜತೆಗೆ, ಹೋರಾಟಗಾರರ ಮೇಲೆ ಹಾಕಲಾಗಿರುವ ಕೇಸ್​ ಹಿಂಪಡೆಯಬೇಕು. ಒಂದು ವೇಳೆ ಬಿಡುಗಡೆ ಮಾಡದಿದ್ದರೆ, ಬೆಂಗಳೂರು ನಗರ ಬಂದ್​ ಕರೆಗೆ ಮತ್ತೊಂದು ಸುತ್ತಿನ ಸಭೆ ಮಾಡಲಾಗುವುದು. ಇನ್ನು ಫೆ.28ಕ್ಕೆ ವಾಣಿಜ್ಯ ಅಂಗಡಿಗಳ ನಾಮಫಲಕ ಕನ್ನಡದಲ್ಲಿರಬೇಕು. ಇಲ್ಲದಿದ್ರೆ ಮತ್ತೆ ನಾಮಫಲಕಗಳ ವಿರುದ್ಧ ಹೋರಾಟ ಮಾಡಲಾಗುವುದು” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X