ನೀರಿನ ಕೊರತೆ | ನಿತ್ಯದ ಊಟಕ್ಕೆ ಬಾಳೆ ಎಲೆ, ಪೇಪರ್ ಪ್ಲೇಟ್ ಬಳಸುತ್ತಿರುವ ಬೆಂಗಳೂರಿನ ಜನ

Date:

Advertisements

ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಎದುರಾಗಿದೆ. ನಗರದ ಕೆಲವೆಡೆ ಜನರು ಕುಡಿಯುವ ನೀರಿಗಾಗಿ ಪರದಾಡುವಂತಹ ಸ್ಥಿತಿ ಎದುರಾಗಿದೆ. ಹೀಗಾಗಿ, ಜನರು ಬಾಳೆಎಲೆ ಹಾಗೂ ಪೇಪರ್ ಪ್ಲೇಟ್‌ಗಳ ಬಳಕೆಯನ್ನು ಹೆಚ್ಚಾಗಿ ಮಾಡುತ್ತಿದ್ದಾರೆ. ನೀರಿನ ಕೊರತೆಯ ತೀವ್ರ ಬಿಕ್ಕಟ್ಟಿನ ನಡುವೆ, ಬಾಳೆ ಎಲೆ ಹಾಗೂ ಪೇಪರ್ ಪ್ಲೇಟ್‌ಗಳ ಬೆಲೆ ಗಗನಕ್ಕೇರಿವೆ.

ನೀರಿನ ಅಭಾವ ಹಿನ್ನೆಲೆಯಲ್ಲಿ ಜನರು ಬಾಳೆಎಲೆ ಹಾಗೂ ಪೇಪರ್ ಪ್ಲೇಟ್‌ಗಳ ಬಳಕೆಯನ್ನು ಹೆಚ್ಚಾಗಿ ಮಾಡುತ್ತಿದ್ದಾರೆ. ಹೀಗಾಗಿ, ಮಾರಾಟಗಾರರೂ ಇವುಗಳ ಬೆಲೆಯನ್ನು ಹೆಚ್ಚಳ ಮಾಡಿದ್ದಾರೆ. ಮಲ್ಲೇಶ್ವರಂ ಮಾರಾಟಗಾರರು ಮಾರಾಟದ ಬೆಲೆಯನ್ನು ಶೇ.30ರಷ್ಟು ಹೆಚ್ಚಳ ಮಾಡಿದ್ದಾರೆ.

ಮಲ್ಲೇಶ್ವರಂನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹೆಚ್ಚಿನ ಜನರು ನೀರಿನ ಸಮಸ್ಯೆಯನ್ನು ನಿಭಾಯಿಸಲು ಹಾಗೂ ನೀರಿನ ಬಳಕೆಯನ್ನು ಕಡಿಮೆ ಮಾಡಲು ಬಾಳೆ ಎಲೆಗಳು ಮತ್ತು ಪೇಪರ್ ಪ್ಲೇಟ್‌ಗಳನ್ನು ಬಳಕೆ ಮಾಡುತ್ತಿದ್ದಾರೆ.

Advertisements

ಮಲ್ಲೇಶ್ವರಂನ 10ನೇ ಕ್ರಾಸ್‌ನಲ್ಲಿ ವ್ಯಾಪಾರ ನಡೆಸುತ್ತಿರುವ ನೀಲಮ್ಮ ಅವರು ಮಾತನಾಡಿ, “ಕಳೆದ ಬಾರಿ ಓಣಂ ಸಮಯದಲ್ಲಿ ಉತ್ತಮ ಮಾರಾಟವನ್ನು ಮಾಡಿದ್ದೇವು. ಈ ಹಿಂದೆ, ಬಾಳೆ ಎಲೆಗಳು ಪ್ರತಿ ಎಲೆಗೆ ₹6 ರಿಂದ ₹8 ನಡುವೆ ಬೆಲೆ ಇತ್ತು. ಬಾಳೆ ಎಲೆಗಳ ಗಾತ್ರದಲ್ಲಿ ವ್ಯತ್ಯಾಸವಿತ್ತು. ಆದರೆ, ಕಳೆದೊಂದು ತಿಂಗಳಿಂದ ಒಂದು ಎಲೆಯನ್ನು ₹9 ರಿಂದ ₹13ಗೆ ಅಥವಾ ಆರು ಎಲೆಗಳ ಸೆಟ್‌ಗೆ ₹70ಗೆ ಮಾರಾಟ ಮಾಡುತ್ತಿದ್ದೇವೆ. ಹಲವು ವರ್ಷಗಳಿಂದಲೂ ಇಷ್ಟು ಮಟ್ಟದ ವ್ಯಾಪಾರವನ್ನು ನೋಡಿರಲಿಲ್ಲ” ಎಂದು ಹೇಳಿದರು.

“ಕಳೆದ 6 ತಿಂಗಳಿನಿಂದ ಮಾರಾಟ ಸೀಮಿತವಾಗಿತ್ತು. ಹಬ್ಬ, ಮದುವೆ ಹಾಗೂ ಸಮಾರಂಭದ ಸಮಯದಲ್ಲಿ ಮಾತ್ರ ಹೆಚ್ಚು ಮಾರಾಟವಾಗುತ್ತಿತ್ತು. ಆದರೆ, ಈಗ ಜನರು ತಮ್ಮ ದಿನಚರಿಯ ಭಾಗವಾಗಿ ಎಲೆಗಳನ್ನು ಪ್ಲೇಟ್‌ಗಳಾಗಿ ಬಳಸುತ್ತಿದ್ದಾರೆ” ಎಂದು ನೀಲಮ್ಮ ಹೇಳಿದರು.

ಬಾಳೆ ಎಲೆ ಮಾರಾಟಗಾರ ಕರುಪಸ್ವಾಮಿ ಮಾತನಾಡಿ, “ಫೆಬ್ರವರಿ ಮಧ್ಯದಿಂದ ಅಡಿಕೆ ಎಲೆಗಳ ತಟ್ಟೆಗಳು ಮತ್ತು ಬಾಳೆ ಎಲೆಗಳ ಮಾರಾಟದಲ್ಲಿ ಏರಿಕೆ ಕಾಣುತ್ತಿದ್ದೇವೆ. ಬೆಲೆ ಏರಿಕೆಯ ಹೊರತಾಗಿಯೂ, ಗ್ರಾಹಕರು ಖರೀದಿಸಲು ಸಿದ್ಧರಿದ್ದಾರೆ” ಎಂದರು.

“ಪ್ರತಿ ತಿಂಗಳು ಸಾಮಾನ್ಯವಾಗಿ ನಾವು ಸುಮಾರು 2,000 ಎಲೆಗಳು ಮತ್ತು ಮೂರು ವಿಭಿನ್ನ ಗಾತ್ರದ 200 ಕ್ಕೂ ಹೆಚ್ಚು ಅರೆಕಾ ಎಲೆಗಳ ಸೆಟ್‌ಗಳನ್ನು ಮಾರಾಟ ಮಾಡುತ್ತಿದ್ದೇವು. ಆಗ ಕೇವಲ ಸಮಾರಂಭ ಅಥವಾ ಇನ್ನಿತರ ಕಾರ್ಯಕ್ರಮಗಳಿಗೆ ಎಲೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಜನರನ್ನು ವ್ಯಾಪಾರದ ಕೇಂದ್ರವಾಗಿ ಗುರುತಿಸಿಕೊಂಡಿದ್ದೇವು. ಆದರೆ, ಈಗ ಜನರು ಕೂಡ ಖರೀದಿ ಮಾಡುತ್ತಿದ್ದಾರೆ. ಮಾರಾಟ ಹೆಚ್ಚಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ‘ಡಿಹೈಡ್ರೇಶನ್’ ಪ್ರಕರಣಗಳಲ್ಲಿ ಹೆಚ್ಚಳ; ಓಆರ್‌ಎಸ್‌ ಮಾರಾಟದಲ್ಲಿ ಶೇ.60 ಏರಿಕೆ

ಬಾಳೆ ಎಲೆ ಗ್ರಾಹಕ ಶೇಖರ್ ಮಾತನಾಡಿ, “ನಮ್ಮ ಕುಟುಂಬದವರು ಸಮಾರಂಭಗಳಲ್ಲಿ ಮಾತ್ರ ಬಾಳೆ ಎಲೆಗಳನ್ನು ಬಳಸುತ್ತಿದ್ದರು. ಆದರೆ, ಈಗ ನಾವು ಅದನ್ನು ಪ್ಲೇಟ್‌ ಆಗಿ ಪರ್ಯಾಯವಾಗಿ ಬಳಸುತ್ತಿದ್ದೇವೆ. ಮಲ್ಲೇಶ್ವರಂ ಮತ್ತು ರಾಜಾಜಿನಗರದ ಸುತ್ತಮುತ್ತಲಿನ ಜನರು ನೀರಿನ ಟ್ಯಾಂಕರ್‌ಗಳ ಮೇಲೆ ಅವಲಂಬಿತರಾಗಿದ್ದಾರೆ. ಅನೇಕ ಕುಟುಂಬಗಳು ನೀರಿನ ಬಳಕೆಯನ್ನು ಕಡಿಮೆ ಮಾಡಲು ಊಟಕ್ಕೆ ಪ್ಲೆಟ್‌ಗಳ ಬದಲಾಗಿ ಎಲೆಗಳನ್ನು ಬಳಕೆ ಮಾಡುತ್ತಿದ್ದಾರೆ” ಎಂದರು.

ಮೂಲ: ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X