ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

Date:

Advertisements

ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣವನ್ನು ಬಹಿರಂಗವಾಗಿ ಖಂಡಿಸಿದ ಕೆಲವೇ ಕೆಲವರಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಅವರು ಕೂಡ ಒಬ್ಬರು. ಇವರು ಈ ಬಗ್ಗೆ ಪದೇ ಪದೆ ದನಿ ಎತ್ತುತ್ತಾ ಬರುತ್ತಿದ್ದಾರೆ. ಮತ್ತೊಮ್ಮೆ ಕುರಿತು ಪೋಸ್ಟ್ ಮಾಡಿದ್ದಾರೆ.

ದರ್ಶನ್ ಬಂಧನ ವಿಚಾರದಲ್ಲಿ ಪೊಲೀಸರು ಯಾವುದೇ ಪ್ರಭಾವ, ಆಮಿಷಕ್ಕೆ ಒಳಗಾಗದೆ ಸರಿಯಾಗಿ ಕೆಲಸ ಮಾಡಿ ಪ್ರಕರಣದಲ್ಲಿ ಅಮಾಯಕ, ಮುಗ್ಧರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಆರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ.

ಈ ಬಗ್ಗೆ ಮತ್ತೇ ಪೋಸ್ಟ್‌ ಮಾಡಿದ ಅವರು, “ಕಾನೂನು ಉಲ್ಲಂಘಿಸಿ ಶ್ರೀಮಂತರು ಹಾಗೂ ಶಕ್ತಿಶಾಲಿಗಳು ಸುದ್ದಿಯಲ್ಲಿದ್ದಾರೆ. ಇವರ ಹಿಂಸಾತ್ಮಕ ಕೃತ್ಯಗಳಿಂದ ಬಡವರು, ಮಹಿಳೆಯರು ಮತ್ತು ಮಕ್ಕಳು ಬದುಕು ನಾಶವಾಗಿದೆ. ಇಂಥ ಅಪರಾಧ ಕೃತ್ಯಗಳನ್ನು ಹೊರಗಡೆ ತಂದ ನಮ್ಮ ರಾಜ್ಯದ ಪೊಲೀಸರು ಹಾಗೂ ಮಾಧ್ಯಮಗಳಿಗೆ ಹ್ಯಾಟ್ಸ್ಆಫ್” ಎಂದಿದ್ದಾರೆ.

Advertisements

ಮುಂದುವರೆದು, “ಈ ವಿಚಾರಣೆಯನ್ನು ತೀವ್ರಗೊಳಿಸಿ, ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಕ್ಕಾಗ ನ್ಯಾಯ ಖಂಡಿತ ಸಿಗುತ್ತದೆ. ನ್ಯಾಯವು ಮೇಲುಗೈ ಸಾಧಿಸದಿದ್ದರೆ, ನಾವು ಸಾರ್ವಜನಿಕರಿಗೆ ಯಾವ ಸಂದೇಶವನ್ನು ನೀಡುತ್ತೇವೆ?” ಎಂದು ಪ್ರಜ್ವಲ್ ರೇವಣ್ಣ, ನಟ ದರ್ಶನ್, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸೂರಜ್ ರೇವಣ್ಣ ಪ್ರಕರಣವನ್ನು ಉಲ್ಲೇಖಿಸಿ ಹೇಳಿದ್ದಾರೆ.

ಟ್ವೀಟ್‌ನ ಕೊನೆಯಲ್ಲಿ ರಮ್ಯಾ ಅವರು ಪ್ರಜ್ವಲ್ರೇವಣ್ಣ, ದರ್ಶನ್‌, ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಗೂ ಸೂರಜ್ರೇವಣ್ಣ ಅವರ ಹೆಸರನ್ನು ಹ್ಯಾಷ್ಟ್ಯಾಗ್‌ನಲ್ಲಿ ಬಳಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಜಾಹೀರಾತು ನಿಯಮ ತಿದ್ದುಪಡಿ | ಒಂದು ವಾರದೊಳಗೆ ಸಾರ್ವಜನಿಕ ಚರ್ಚೆಗೆ ಬರಲಿದೆ ಹೊಸ ನೀತಿ : ಡಿಸಿಎಂ ಡಿಕೆಶಿ

ಸದ್ಯ ಇವರು ಮಾಡಿದ ಎಕ್ಸ್ ಪೋಸ್ಟ್​​ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು ನೆಟ್ಟಿಗರು ಕಮೆಂಟ್ಸ್ಮಾಡುತ್ತಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಪ್ರಜ್ವಲ್ರೇವಣ್ಣ ನ್ಯಾಯಾಂಗ ಬಂಧನದಲ್ಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಪೊಲೀಸ್ಕಸ್ಟಡಿಯಲ್ಲಿದ್ದಾರೆ. ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ದಾಖಲಾಗಿದೆ. ಇದೀಗ, ಮಾಜಿ ಪ್ರಧಾನಿ ದೇವೇಗೌಡರ ಮತ್ತೊಬ್ಬ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್‌.ಡಿ.ರೇವಣ್ಣ ಪುತ್ರ ಸೂರಜ್ರೇವಣ್ಣ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಕುರುಬ ಸಮಾಜದ ಕುಲಶಾಸ್ತ್ರ ಅಧ್ಯಯನವನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲು ಒತ್ತಾಯ

ರಾಜ್ಯ ಸರ್ಕಾರ ಪಶುಪಾಲಕರ ಹಾಗೂ ಕುರಿಗಾರರ ದೌರ್ಜನ್ಯ ಕಾಯ್ದೆ ಜಾರಿಗೆ ತಂದಿರುವ...

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

Download Eedina App Android / iOS

X