ಗೋಪಾಲಯ್ಯಗೆ ಜೀವ ಬೆದರಿಕೆ | ‘₹15 ಲಕ್ಷ ವಾಪಾಸ್ ಕೇಳಲು ಕರೆ ಮಾಡಿದ್ದೆ’ ಎಂದ ಆರೋಪಿ

Date:

Advertisements

ಶಾಸಕ ಕೆ ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ ಅವರನ್ನು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ, ‘₹15 ಲಕ್ಷ ವಾಪಾಸ್ ಕೇಳಲು ಕರೆ ಮಾಡಿದ್ದೆ’ ಎಂದು ಪದ್ಮರಾಜ್ ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಸಚಿವ, ಬಿಜೆಪಿ ಶಾಸಕ ಕೆ.ಗೋಪಾಲಯ್ಯಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ವಿಚಾರಣೆ ವೇಳೆ ಪದ್ಮರಾಜು ಅವರು, “ಶಾಸಕ ಗೋಪಾಲಯ್ಯ ಅವರಿಗೆ ₹15 ಲಕ್ಷ ಹಣ ನೀಡಿದ್ದೇನೆ. ಅವರು ನನಗೆ ಹಣ ಇನ್ನು ನೀಡಿಲ್ಲ. ಒಂದು‌ ಟ್ರಸ್ಟ್​​ಗೆ ₹5 ಲಕ್ಷ ಹಣ ಹಾಕಲು ಹೇಳಿದರು. ಹೀಗಾಗಿ, ಟ್ರಸ್ಟ್ ಖಾತೆಗೆ ಅಕೌಂಟ್ ಮೂಲಕ ₹5 ಲಕ್ಷ ವರ್ಗಾವಣೆ ಮಾಡಿದ್ದೇನೆ. ಗೋಪಾಲಯ್ಯ ಅವರು ಸಚಿವರಾಗಿದ್ದಾಗ ಕಾಮಗಾರಿ ಟೆಂಡರ್ ವಿಚಾರವಾಗಿ ನಗದು ರೂಪದಲ್ಲಿ ₹10 ಲಕ್ಷ ಹಣ ನೀಡಿದ್ದೇನೆ” ಎಂದು ಹೇಳಿದ್ದಾರೆ.

Advertisements

“ಈ ಹಿಂದೆ ಹಣ ವಾಪಾಸ್ ನೀಡಿ ಎಂದು ಕೇಳೋದಕ್ಕೆ ಗೋಪಾಲಯ್ಯ ಅವರ ಮನೆ ಬಳಿ ತೆರಳಿದ್ದೇನು. ಆದರೆ, ಅವರು ಇರಲಿಲ್ಲ. ಹಾಗಾಗಿ, ಕರೆ ಮಾಡಿದೆ. ಮೊದಲಿಗೆ ಗೋಪಾಲಯ್ಯ ಅವರು ಅವಾಚ್ಯ ಶಬ್ದಗಳಿಂದ ಬೈದಿದ್ದರು. ಬಳಿಕ ನಾನು ಬೈದಿದ್ದೇನೆ” ಎಂದು ತಿಳಿಸಿದ್ದಾರೆ. ಸದ್ಯ ಕಾಮಾಕ್ಷಿಪಾಳ್ಯ ಪೊಲೀಸರು ಬ್ಯಾಂಕ್ ಖಾತೆ ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪದ್ಮರಾಜು ಬಳಿಯಿದ್ದ ಮೊಬೈಲ್ ಅನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮಂಗಳವಾರ ರಾತ್ರಿ 11 ಗಂಟೆಗೆ ಗೋಪಾಲಯ್ಯಗೆ ಕರೆ ಮಾಡಿ ಪದ್ಮರಾಜು, ಕೊಲೆ ಬೆದರಿಕೆ ಹಾಕಿದ್ದಾಗಿ ಪೊಲೀಸ್​ ಠಾಣೆಗೆ ಕೆ.ಗೋಪಾಲಯ್ಯ ದೂರು ನೀಡಿದ್ದರು.

ಈ ಸಂಬಂಧ ಶಾಸಕ ಕೆ.ಗೋಪಾಲಯ್ಯ ಅವರು, ವಿಧಾನಸಭೆ ಸ್ಪೀಕರ್​ಗೆ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಅವರಿ​ಗೂ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸ್ಯಾಂಕಿ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪದ್ಮರಾಜು​​ ಬೆದರಿಕೆ ಹಾಕಿದ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಗೃಹಸಚಿವ ಪರಮೇಶ್ವರ ಅವರಿಗೂ ದೂರು ನೀಡುತ್ತೇನೆ. ಪದ್ಮರಾಜು ಅವರನ್ನು ಗಡಿಪಾರು ಮಾಡುವಂತೆ ಆಗ್ರಹಿಸುತ್ತೇನೆ ಎಂದು ಗೋಪಾಲಯ್ಯ ಹೇಳಿದ್ದಾರೆ.

ವಿಧಾನಸಭೆ ಶೂನ್ಯವೇಳೆಯಲ್ಲಿ ಶಾಸಕ ಗೋಪಾಲಯ್ಯ ಅವರು ಮಾಜಿ ಕಾರ್ಪೊರೇಟರ್ ಪದ್ಮರಾಜ್ ಕೊಲೆ ಬೆದರಿಕೆ ವಿಚಾರವನ್ನು ಪ್ರಸ್ತಾಪಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X