ಕೈ ಹಿಡಿಯದ ಕಮಲ ಶಾಸಕರು: ಹಲವು ಕ್ಷೇತ್ರಗಳ ಗೊಂದಲಕ್ಕೆ ಬಹುತೇಕ ತೆರೆ

Date:

  • ಮೊದಲ ಪಟ್ಟಿಯಲ್ಲಿ ಹಾಲಿ, ಮಾಜಿ ಶಾಸಕರಿಗೆ ಕೈ ಟಿಕೆಟ್
  • ಫಲ ನೀಡಿದ ಯಡಿಯೂರಪ್ಪ, ಅಮಿತ್‌ ಶಾ ಸಂಧಾನ

ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಲಿ ಶಾಸಕರು ಕೈ ಹಿಡಿಯುತ್ತಾರೆ ಎಂಬ ಗಾಳಿ ಸುದ್ದಿ ಹರಡಿತ್ತು. ಆದರೆ, ಇವರ್ಯಾರು ಕಾಂಗ್ರೆಸ್‌ ಸೇರದ ಹಿನ್ನಲೆಯಲ್ಲಿ ಮಾಜಿ ಶಾಸಕರಿಗೆ ಟಿಕೆಟ್‌ ಘೋಷಣೆ ಮಾಡಿದೆ.

ಬಿಜೆಪಿ ಹಾಲಿ ಶಾಸಕರಾದ ಹಿರಿಯೂರಿನ ಕೆ ಪೂರ್ಣಿಮಾ ಶ್ರೀನಿವಾಸ್‌, ಹೊಸದುರ್ಗ ಕ್ಷೇತ್ರದ ಶಾಸಕ ಗೂಳಿಹಟ್ಟಿ ಡಿ ಶೇಖರ್ ಮತ್ತು ಗೋವಿಂದರಾಜ ನಗರದ ಶಾಸಕ ವಿ ಸೋಮಣ್ಣ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು.

ಆದರೆ, ಯಡಿಯೂರಪ್ಪ ಹಾಗೂ ಅಮಿತ್‌ ಶಾ ನಡೆಸಿದ ರಾಜಿ ಸಂಧಾನದಿಂದ ಇವರ್ಯಾರು ಕೈ ಹಿಡಿಯದೇ, ಬಿಜೆಪಿಯಲ್ಲಿಯೇ ಉಳಿದುಕೊಂಡಿದ್ದರಿಂದ ಕೈ ನಾಯಕರು ಈ ಕ್ಷೇತ್ರಗಳಿಗೆ ತಮ್ಮ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ.

ಕಳೆದ ವಾರ ಬಿಜೆಪಿ ಎಂಎಲ್ಸಿ ಸ್ಥಾನ ತೊರೆದು ಕಾಂಗ್ರೆಸ್‌ ಸೇರಿದ್ದ ಪುಟ್ಟಣ್ಣ ಅವರಿಗೆ ರಾಜಾಜಿನಗರದ ಟಿಕೆಟ್‌ ಘೋಷಣೆ ಮಾಡಿದ್ದು, ಇಲ್ಲಿ ಆಕಾಂಕ್ಷಿಯಾಗಿದ್ದ ಭವ್ಯ ನರಸಿಂಹಮೂರ್ತಿ ಸೇರಿದಂತೆ ಹಲವರಿಗೆ ನಿರಾಸೆಯಾಗಿದೆ.

ಇನ್ನು ಕೆ ಆರ್‌ ಪೇಟೆ ಶಾಸಕ ನಾರಾಯಣ ಗೌಡ ಅವರೂ ಕೂಡ ಕಾಂಗ್ರೆಸ್‌ ಸೇರುವ ಮಾತುಗಳು ಕೇಳಿಬಂದಿದ್ದರೂ, ಜೆಡಿಎಸ್ ನ ದೇವರಾಜ್ ಕಾಂಗ್ರೆಸ್ ಸೇರುತ್ತಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರಕ್ಕೆ ಟಿಕೆಟ್‌ ಘೊಷಣೆ ಮಾಡಿಲ್ಲ.

ಗುರುಮಿಠಕಲ್‌ ಕ್ಷೇತ್ರದಲ್ಲಿ ಬಿಜೆಪಿಯು ಬಾಬುರಾವ್‌ ಚಿಂಚನಸೂರು ಅವರಿಗೆ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ವಿಧಾನಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ ಸೇರಿದ ಬಾಬುರಾವ್‌ ಚಿಂಚನಸೂರು ಕ್ಷೇತ್ರಕ್ಕೂ ಟಿಕೆಟ್‌ ಘೋಷಣೆ ಆಗಿಲ್ಲ.

ಇನ್ನು ಹಲವು ನಾಯಕರು ಜೆಡಿಎಸ್‌ ಮತ್ತು ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಸಾಧ್ಯತೆ ಇರುವುದರಿಂದ ಕೆಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡದೇ ಕಾದು ನೋಡುವ ತಂತ್ರವನ್ನು ಕೈ ನಾಯಕರು ಅನುಸರಿಸಿದ್ದಾರೆ ಎನ್ನಲಾಗಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಕೆಶಿ ವಿರುದ್ಧ ಸಿಬಿಐ ತನಿಖೆ ಅನುಮತಿ ಹಿಂಪಡೆದ ಸರ್ಕಾರ; ಹೈಕೋರ್ಟ್‌ಗೆ ಪಿಐಎಲ್‌ ಸಲ್ಲಿಸಿದ ಯತ್ನಾಳ್

ಉಪಮುಖ್ಯಮಂತ್ರಿ‌ ಡಿಕೆ ಶಿವಕುಮಾರ್‌ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ‌...

ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ 15 ನಿಲ್ದಾಣಗಳ ಆಧುನೀಕರಣ: ಯೋಗೇಶ್ ಮೋಹನ್

“ಬಂಗಾರಪೇಟೆ, ಕೆಂಗೇರಿ, ಕೃಷ್ಣರಾಜಪುರ, ಮಂಡ್ಯ, ಚನ್ನಪಟ್ಟಣ, ಹೊಸೂರು, ಹಿಂದೂಪುರ, ಕುಪ್ಪಂ, ಮಾಲೂರು,...

ಶೂದ್ರರು, ದಲಿತರಿಗೆ ಆರ್‌ಎಸ್‌ಎಸ್‌ ಗರ್ಭಗುಡಿಗೆ ಪ್ರವೇಶ ಇಲ್ಲ ಎಂಬುದು ಮತ್ತೆ ಸಾಬೀತು: ಸಿದ್ದರಾಮಯ್ಯ

ಹೊರಬಾಗಿಲಲ್ಲಿ ನಿಂತು 'ಜೀ..ಜೀ..ಹುಜೂರ್' ಎಂದಷ್ಟೇ ಹೇಳಬೇಕು:‌ ಸಿದ್ದರಾಮಯ್ಯ ಗೂಳಿಹಟ್ಟಿ ಶೇಖರ್...

ಪ್ರಜಾಪ್ರಭುತ್ವ, ಜಾತ್ಯತೀತತೆ ಹಾಗೂ ಮಾನವ ಹಕ್ಕುಗಳ ಉಳಿವಿಗಾಗಿ ಆಂದೋಲನಕ್ಕೆ ಕರೆ

ಸೆಂಟರ್ ಫಾರ್ ಪ್ರೊಟೆಕ್ಟಿಂಗ್ ಡೆಮಾಕ್ರೆಟಿಕ್ ರೈಟ್ಸ್ ಅಂಡ್ ಸೆಕ್ಯುಲರಿಸಂ ಕರೆ ...