ಮಾರ್ಚ್‌ 1ರಂದು ಟ್ಯಾಂಕರ್ ಮಾಲೀಕರೊಂದಿಗೆ ಸಭೆ: ತುಷಾರ್ ಗಿರಿನಾಥ್

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಕಾಲಕ್ಕೆ ಮಳೆಯಾಗದೇ, ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇನ್ನು ಕಾವೇರಿ ನೀರು ಬಿಡುವ ವೇಳಾಪಟ್ಟಿಯೂ ಬದಲಾಗಿದ್ದು, ಹಲವೆಡೆ ನೀರಿನ ಸಮಸ್ಯೆ ಎದುರಾಗಿದೆ. ಇದನ್ನೇ ಬಂಡವಾಳ ಮಾಡಿಕೊಡಿರುವ ಟ್ಯಾಂಕರ್‌ ಮಾಲೀಕರು ಒಂದು ಟ್ಯಾಂಕರ್‌ ನೀರಿಗೆ ₹3000ವರೆಗೂ ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಲು ಪಾಲಿಕೆಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾ.1 ರಂದು ಟ್ಯಾಂಕರ್‌ ಮಾಲೀಕರೊಂದಿಗೆ ಸಭೆ ನಡೆಸಿ ದರ ನಿಗದಿ ಮಾಡಲಿದ್ದಾರೆ.

ಬೆಂಗಳೂರಿನ ಕಾವೇರಿ ಭವನದಲ್ಲಿ ಫೆ.28 ರಂದು ಬಿಬಿಎಂಪಿ ಹಾಗೂ ಜಲಮಂಡಳಿ ವತಿಯಿಂದ ಜಂಟಿ ಸುದ್ದಿಗೋಷ್ಠಿ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ತುಷಾರ್ ಗಿರಿನಾಥ್ ಅವರು, “ಸಾರಿಗೆ ಇಲಾಖೆ ಪ್ರಕಾರ 3,500 ಟ್ಯಾಂಕರ್​​ಗಳು ಇವೆ. ಟ್ರೇಡ್ ಲೈಸೆನ್ಸ್ ಇರುವ ಟ್ಯಾಂಕರ್ 54 ಇರಬಹುದು. ನಾವು ಅವರಿಗೆ ಒಂದು ವಾರ ಡೆಡ್​​ಲೈನ್ ಕೊಡುತ್ತೇವೆ. ಮಾ.1ರಿಂದ ಮಾರ್ಚ್ 7ರೊಳಗೆ ನೋಂದಣಿ ಕಡ್ಡಾಯ” ಎಂದಿದ್ದಾರೆ.

“ಟ್ರೇಡ್ ಲೈಸೆನ್ಸ್ ಪಡೆದೇ ನೀರು ಸರಬರಾಜು ಮಾಡಬೇಕು. ನೋಂದಣಿ ಮಾಡಿಕೊಳ್ಳದ ಟ್ಯಾಂಕರ್​ ವಶಕ್ಕೆ ಪಡೆಯುತ್ತೇವೆ. ವಾಟರ್ ಟ್ಯಾಂಕರ್​​ನವರ ಜೊತೆ ಮಾತಾಡಿ ದರ ನಿಗದಿ ಮಾಡುತ್ತೇವೆ. 110 ಹಳ್ಳಿಗಳಲ್ಲಿ ನೀರಿನ ಕೊರತೆ ಇದ್ದಾಗ ಬಿಡಬ್ಲ್ಯುಎಸ್​ಎಸ್​ಬಿಯವರೇ ಟ್ಯಾಂಕರ್ ಮೂಲಕ ನೀರು ಪೂರೈಸಿದ್ದಾರೆ. ನೋಂದಣಿಯಾಗದ ಟ್ಯಾಂಕರ್‌ಗಳನ್ನು ವಶಕ್ಕೆ ಪಡೆಯಲಾಗುತ್ತದೆ. ಟ್ರೇಡ್ ಅಸೋಸಿಯೇಷನ್ ಜೊತೆ ಮಾತನಾಡಿ ದರ ನಿಗದಿ ಮಾಡಲಾಗುತ್ತದೆ” ಎಂದಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ₹12,369 ಕೋಟಿಯ ಬಜೆಟ್‌ ಮಂಡನೆ: 16 ಸಾವಿರ ಪೌರ ಕಾರ್ಮಿಕರ ನೇರ ನೇಮಕಾತಿ

”ನಗರದಲ್ಲಿ ನೀರಿನ ಬವಣೆ ನೀಗಿಸಲು ಜಿಲ್ಲಾಧಿಕಾರಿಗಳು 200 ಟ್ಯಾಂಕರ್‌ಗಳನ್ನು ಜಲಮಂಡಳಿಯ ಸುಪರ್ದಿಗೆ ನೀಡಿದ್ದಾರೆ. ಈ ಪೈಕಿ 110 ಹಳ್ಳಿಗಳು, ಪುರಸಭೆ, ನಗರಸಭೆ ವ್ಯಾಪ್ತಿಗೆ 100 ಟ್ಯಾಂಕರ್‌ ಮತ್ತು ನಗರದ ಕೇಂದ್ರ ಭಾಗದ ಪ್ರದೇಶಗಳಿಗೆ ನೀರು ಪೂರೈಸಲು 100 ಟ್ಯಾಂಕರ್‌ಗಳನ್ನು ಬಳಸಿಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಜಲಮಂಡಳಿ ಅಧ್ಯಕ್ಷ ರಾಮ್ ಪ್ರಸಾದ ಮನೋಹರ ಮಾತನಾಡಿ, “ಎಸ್​ಟಿಪಿ ನೀರನ್ನು ಮತ್ತೊಮ್ಮೆ ಶುದ್ಧೀಕರಣ ಮಾಡಿ ಅವಶ್ಯಕತೆ ಇರುವ ಕಡೆ ನೀರನ್ನು ಕೊಡುತ್ತೇವೆ. ಈ ನೀರನ್ನು ಜನರು ಕಾರ್ ವಾಷ್ ಹಾಗೂ ಗಾರ್ಡನ್​ಗೆ ಬಳಕೆ ಮಾಡಬಹುದಾಗಿದೆ” ಎಂದಿದ್ದಾರೆ.

“ಮೊದಲ ಹಂತದಲ್ಲಿ ಸುಮಾರು 7 ಕೆರೆಗಳಿಗೆ ಶುದ್ಧೀಕರಿಸಿದ ನೀರನ್ನು ತುಂಬುತ್ತವೆ. ಅಂತರ್ಜಲ ಮಟ್ಟ ಹೆಚ್ಚಿಸುವ ಕೆಲಸ ಮಾಡುತ್ತೇವೆ. ಕಾವೇರಿ 5ನೇ ಹಂತ ಆದಷ್ಟು ಬೇಗ ಪೂರ್ಣ ಗೊಳಿಸುತ್ತೇವೆ. ಮೇ ಮೊದಲ ವಾರದಲ್ಲಿ ಆ ನೀರನ್ನು ಬೆಂಗಳೂರಿಗೆ ಸರಬರಾಜು ಮಾಡುತ್ತೇವೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X