ಬಾಕ್ಸಿಂಗ್‌ನಲ್ಲಿ ರಾಜ್ಯಕ್ಕೆ ಕೀರ್ತಿ ತಂದ ವಿವಾನ್‌ ಭವಿಷ್ಯ ಉಜ್ವಲವಾಗಲಿ: ಶಾಸಕ ಇಕ್ಬಾಲ್‌ ಹುಸೇನ್‌

Date:

Advertisements

ರಾಷ್ಟ್ರ ಮಟ್ಟದ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದ ವಿದ್ಯಾರ್ಥಿ ವಿವಾನ್‌ ಮಂಜುನಾಥ್‌ನ ಭವಿಷ್ಯ ಉಜ್ವಲವಾಗಲಿ ಎಂದು ರಾಮನಗರ ಶಾಸಕ ಎಚ್‌.ಎ.ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ.

ಬಾಕ್ಸಿಂಗ್‌ ಫೆಡರೇಶನ್‌ ಆಫ್‌ ಇಂಡಿಯಾ ಉತ್ತರ ಪ್ರದೇಶದ ನೋಯ್ಡಾದಲ್ಲಿ ಏಪ್ರಿಲ್‌ 21ರಿಂದ 27ರ ವರೆಗೆ ಆಯೋಜಿಸಿದ 7ನೇ ಯೂಥ್‌ ಮೆನ್‌ ಮತ್ತು ವುಮೆನ್ಸ್‌ ರಾಷ್ಟ್ರಮಟ್ಟದ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ ಬೆಂಗಳೂರು ರಾಜರಾಜೇಶ್ವರಿ ನಗರದ ರಾಕ್‌ ಬುಲ್‌ ಅಕಾಡಮಿ ಆಫ್‌ ಆರ್ಟ್ಸ್‌ ಬಾಕ್ಸಿಂಗ್‌ ಕ್ಲಬ್‌ನ ಕ್ರೀಡಾಪಟು, ಬೆಂಗಳೂರು ಡೆಖನ್‌ ಇಂಟರ್ ನ್ಯಾಷನಲ್‌ ಶಾಲೆಯ 12ನೇ ತರಗತಿ ವಿದ್ಯಾರ್ಥಿ ವಿವಾನ್‌ ಮಂಜುನಾಥ್‌ ಅವರಿಗೆ ಬೆಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ನಡೆಸಿದ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಯುವ ಶಕ್ತಿ ದೇಶದ ಶಕ್ತಿಯಾಗಿದೆ. ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಚಿಕ್ಕ ವಯಸ್ಸಿನಲ್ಲಿ ಕೀರ್ತಿ ತಂದ ವಿದ್ಯಾರ್ಥಿ ವಿವಾನ್‌ ಮಂಜುನಾಥ್‌ಗೆ ಅಭಿನಂದನೆಗಳು. ಶಾಲೆ ಕಾಲೇಜುಗಳು ಮತ್ತು ಕ್ರೀಡಾ ಅಮಾಡೆಮಿ ಮತ್ತು ಕ್ಲಬ್‌ಗಳು ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರತರಲು ಇರುವ ಉತ್ತಮ ವೇದಿಕೆಯಾಗಿದೆ ಎಂದು ಅವರು ಹೇಳಿದರು.

Advertisements

ಇದೇ ವೇಳೆ ಕರ್ನಾಟಕ ಅಮೆಚೂರ್‍‌ ಬಾಕ್ಸಿಂಗ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ. ಮಂಜೇಗೌಡ, ಪ್ರಧಾನ ಕಾರ್ಯದರ್ಶಿ ಸಾಯಿ ಸತೀಶ್‌, ಬಾಕ್ಸಿಂಗ್‌ ಕೋಚ್‌ ಚಂದ್ರ ಕುಮಾರ್‍‌ ಅವರನ್ನು ಇದೇ ಶಾಸಕ ಇಕ್ಬಾಲ್‌ ಹುಸೇನ್‌ ಸನ್ಮಾನಿಸಿದರು.

ಪಯಸ್ವಿನಿ ಮತ್ತು ಕೆ.ಎಸ್‌.ಮಂಜುನಾಥ್‌ ದಂಪತಿಯ ಪುತ್ರನಾಗಿರುವ ವಿವಾನ್‌ ಮಂಜುನಾಥ್, ಉತ್ತರ ಪ್ರದೇಶದ ನೋಯ್ಡಾದಲ್ಲಿ ರಾಷ್ಟ್ರಮಟ್ಟದ ಬಾಕ್ಸಿಂಗ್‌ ಪಂದ್ಯಾವಳಿಯಲ್ಲಿ 80ರಿಂದ 85 ಕೆಜಿ ತೂಕದ ವಿಭಾಗದಲ್ಲಿ ಕರ್ನಾಟಕ ಅಮೆಚೂರ್‍‌ ಬಾಕ್ಸಿಂಗ್‌ ಅಸೋಸಿಯೇಷನ್‌ ನಿಂದ ಆಯ್ಕೆಯಾಗಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ತೃತೀಯ ಸ್ಥಾನವನ್ನು ಪಡೆದಿದ್ದಾನೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X