ಮೈಸೂರು | ಅಸ್ಪೃಶ್ಯತೆ ಆಚರಣೆ; ಗ್ರಾಮಸ್ಥರಿಗೆ ಅಧಿಕಾರಿಗಳ ಎಚ್ಚರಿಕೆ

Date:

Advertisements

21ನೇ ಶತಮಾನಕ್ಕೆ ಕಾಲಿಟ್ಟರು ಕೂಡ ಇನ್ನು ಅಸ್ಪೃಶ್ಯತೆ ಜೀವಂತವಾಗಿದೆ. ಯುವಕನೊಬ್ಬನಿಗೆ ದೇವಸ್ಥಾನ ಪ್ರವೇಶಿಸದಂತೆ ಗ್ರಾಮಸ್ಥರು ತಡೆದು ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಕ್ಷೇತ್ರ ವರುಣಾದ ಕಿರಾಳು ಗ್ರಾಮದಲ್ಲಿ ನಡೆದಿದೆ.

ಕಿರಾಳು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವ ಬಗ್ಗೆ ನವೀನ್ ಎಂಬವರು ತಹಶೀಲ್ದಾರ್​ಗೆ ದೂರು ನೀಡಿದ್ದರು. ದೂರು ಬಂದ ಹಿನ್ನೆಲೆ, ಅಧಿಕಾರಿಗಳು ಗ್ರಾಮಸ್ಥರ ಸಭೆ ಕರೆದು ಅನಿಷ್ಠ ಪದ್ಧತಿಯ ಆಚರಣೆಗೆ ಕಡಿವಾಣ ಹಾಕಿದ್ದಾರೆ. ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ.

“ವಿದ್ಯಾವಂತ ನಾಗರಿಕನಾದ ನನಗೆ ಕಿರಾಳು ಗ್ರಾಮದ ಶಂಭು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರವೇಶಿಸದಂತೆ ಅರ್ಚಕರು ಹಾಗೂ ಗ್ರಾಮಸ್ಥರು ನಿರ್ಬಂಧ ಹೇರಿದ್ದಾರೆ. ನನಗೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡದೆ ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿ ನವೀನ್ ಎಂಬವವರು ತಹಶೀಲ್ದಾರ್​ಗೆ ದೂರು ನೀಡಿದ್ದರು.

Advertisements

ದೂರು ಬಂದ ಕೂಡಲೇ ಎಚ್ಚೆತ್ತ ತಹಶೀಲ್ದಾರ್ ಅವರು ವರುಣಾ ಠಾಣೆಯ ಪಿಎಸ್‌ಐ ಚೇತನ್ ಹಾಗೂ ಇತರ ಅಧಿಕಾರಿಗಳ ಜತೆಗೆ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ, ಗ್ರಾಮಸ್ಥರ ಮನವೊಲಿಸಿ ನವೀನ್ ಅವರು ದೇವಸ್ಥಾನಕ್ಕೆ ಪ್ರವೇಶ ಮಾಡುವಂತೆ ಅವಕಾಶ ಕಲ್ಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ; ಕರಾವಳಿ ಜಿಲ್ಲೆಗೆ ‘ರೆಡ್ ಅಲರ್ಟ್’ ಘೋಷಿಸಿದ ಹವಾಮಾನ ಇಲಾಖೆ

ಅಧಿಕಾರಿಗಳ ಸಮ್ಮುಖದಲ್ಲೇ ನವೀನ್ ದೇವಸ್ಥಾನ ಪ್ರವೇಶ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹಾಗೆಯೇ, ದೇವಸ್ಥಾನದ ಆವರಣದಲ್ಲಿಯೇ, ಗ್ರಾಮಸ್ಥರನ್ನು ಸಭೆ ಕರೆದು ಅಸ್ಪೃಶ್ಯತೆ ಆಚರಣೆ ಮಾಡದಂತೆ ಜಾಗೃತಿ ಮೂಡಿಸಿದ್ದಾರೆ. ಹಾಗೆಯೇ, ಈ ಬಗ್ಗೆ ಎಚ್ಚರಿಕೆ ನೀಡಿದ್ದಾರೆ.

ತಹಶೀಲ್ದಾರ್ ಮಹೇಶ್ ಕುಮಾರ್‌, ಉಪ ತಹಶೀಲ್ದಾರ್ ಲತಾ ಶರಣಮ್ಮ, ಗ್ರಾಮ ಆಡಳಿತಾಧಿಕಾರಿಗಳಾದ ಕೀರ್ತಿ ಕುಮಾರ್ ಮತ್ತು ಅಬ್ದುಲ್ ರಶೀದ್ ಗ್ರಾಮಕ್ಕೆ ತೆರಳಿ ಅಸ್ಪೃಶ್ಯತೆಗೆ ಕಡಿವಾಣ ಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ವಿಕಲಚೇತನರ ಮನೆ ಬಾಗಿಲಿಗೆ ಯುಡಿಐಡಿ ಕಾರ್ಡ್ : ಡಾ ರವಿಕುಮಾರ್

ಮೈಸೂರು ಜಿಲ್ಲೆ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ, ವಿಕಲಚೇತನರ ಮತ್ತು ಹಿರಿಯ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ಮೈಸೂರು | ‘ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ – ಆರೋಗ್ಯ ಕರ್ನಾಟಕ ‘ ಅಂತಾರಾಷ್ಟ್ರೀಯ ಕಾರ್ಯಾಗಾರ

ಮೈಸೂರಿನಲ್ಲಿ ಭಾರತ ಜೆಎಸ್‌ಎಸ್ ಎಹೆಚ್‌ಇಆರ್ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ವೊಲ್ವರ್‌ಹ್ಯಾಂಪ್ಸನ್ ವಿಶ್ವವಿದ್ಯಾಲಯದ...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X